ಆ್ಯಪ್ನಗರ

#Shivraj4Peace ನೊಂದಿಗೆ MP ಸಿಎಂ ನಿರಶನ

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ರಾಜ್ಯದಲ್ಲಿ ಶಾಂತಿ ನಲೆಸಲು '#Shivraj4Peace' ಎಂಬ ಘೋಷಣೆಯೊಂದಿಗೆ ಅನಿರ್ದಿಷ್ಟಾವಧಿ ನಿರಶನ ಆರಂಭಿಸಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ 10 Jun 2017, 3:15 pm
ಹೊಸದಿಲ್ಲಿ: ಮಂದಸೌರ್ ರೈತರ ಪ್ರತಿಭಟನೆ ತೀವ್ರ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ರಾಜ್ಯದಲ್ಲಿ ಶಾಂತಿ ನಲೆಸಲು '#Shivraj4Peace' ಎಂಬ ಘೋಷಣೆಯೊಂದಿಗೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.
Vijaya Karnataka Web madhya pradesh cannot progress without farmers says cm shivraj singh chouhan as he begins indefinite fast
#Shivraj4Peace ನೊಂದಿಗೆ MP ಸಿಎಂ ನಿರಶನ


ಸಾಲ ಮನ್ನಾ ಹಾಗೂ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯಿಸಿ ಮಧ್ಯಪ್ರದೇಶ ರೈತರು ಕಳೆದ ಒಂದು ವಾರದಿಂದ ಉಗ್ರ ಹೋರಾಟ ನಡೆಸುತ್ತಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಕಳೆದ ವಾರ ಪೊಲೀಸರು ನಡೆಸಿದ ಗೋಲಿಬಾರ್‌ನಲ್ಲಿ 6 ರೈತರು ಮೃತಪಟ್ಟಿದ್ದರು.

I request people not to burn up the state. All problems can be resolved peacefully: CM @ChouhanShivraj #Shivraj4Peace pic.twitter.com/2Q5snFkeLS — CMO Madhya Pradesh (@CMMadhyaPradesh) June 10, 2017 'ರಾಜ್ಯದಲ್ಲಿ ಶಾಂತಿ ನೆಲೆಸಲು ಮತ್ತು ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ನಿರಶನ ಕುಳಿತುಕೊಳ್ಳುತ್ತೇನೆ' ಎಂದು ಶಿವರಾಜ್ ಸಿಂಗ್ ಚೌವ್ಹಾಣ್ ಹೇಳಿದ್ದಾರೆ. ದಸರಾ ಮೈದಾನದಲ್ಲಿ ಪ್ರತಿಭಟನಾ ನಿರತ ರೈತರೊಂದಿಗೆ ಬಹಿರಂಗ ಚರ್ಚೆ ನಡೆಸುವುದಾಗಿ ಹೇಳಿದರು.

My life is dedicated to farmers. Their wellbeing is the mission of my life: CM @ChouhanShivraj #Shivraj4Peace pic.twitter.com/3bFwEcasfx — CMO Madhya Pradesh (@CMMadhyaPradesh) June 10, 2017 'ರೈತರ ಶ್ರಮ ಇಲ್ಲದೆ ಮಧ್ಯಪ್ರದೇಶದ ಪ್ರಗತಿ ಸಾಧಿಸಲು ಸಾಧ್ಯವಿಲ್ಲ. ನಮ್ಮ ಸರಕಾರ ರೈತರ ಬೆಳೆಗಳಿಗೆ ಉತ್ತಮ ಬೆಲೆಗಳನ್ನು ನೀಡುತ್ತಿದೆ. ರೈತರ ಒಪ್ಪಿಗೆ ಇಲ್ಲದೇ ಯಾವುದೇ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಿಲ್ಲ' ಎಂದು ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ಭರವಸೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ