ಆ್ಯಪ್ನಗರ

ರಾಜ್ಯಪಾಲರೊಂದಿಗೆ ಕಮಲ್‌ನಾಥ್ ಬಹುಮತ ಗುಸುಗುಸು: ಬೆಂಗಳೂರು ಹೈ ಡ್ರಾಮಾ ಉಲ್ಲೇಖ

ಒಂದು ಕಡೆ ಅಗತೃಪ್ತ ಶಾಸಕರು, ಮತ್ತೊಂದೆಡೆ ಕಮಲ ಪಾಳೆಯ ಸೇರಿಕೊಂಡಿರುವ ಜ್ಯೋತಿರಾದಿತ್ಯ ಸಿಂಧಿಯಾ. ಈ ಎಲ್ಲ ಗೊಂದಲಗಳ ಮಧ್ಯೆ ಸರ್ಕಾರ ಉಳಿಸಿಕೊಳ್ಳಲು ಹೆಣಗುತ್ತಿರುವ ಮಧ್ಯಪ್ರದೇಶ ಸಿಎಂ ಕಮಲ್‌ನಾಥ್, ಬಹುಮತ ಸಾಬೀತು ಪ್ರಕ್ರಿಯೆ ಕುರಿತು ರಾಜ್ಯಪಾಲರೊಂದಿಗೆ ಚರ್ಚೆ ನಡೆಸಿದ್ದಾರೆ.

Vijaya Karnataka Web 13 Mar 2020, 3:24 pm
ಭೋಪಾಲ್: ಅಲ್ಪಮತಕ್ಕೆ ಕುಸಿದಿರುವ ತಮ್ಮ ಸರ್ಕಾರದ ಉಳಿವಿಗಾಗಿ ಇನಿಲ್ಲದ ಕಸರತ್ತು ನಡೆಸಿರುವ ಮಧ್ಯಪ್ರದೇಶ ಸಿಎಂ ಕಮಲ್‌ನಾಥ್, ಅತೃಪ್ತ ಶಾಸಕರ ಮನೋಲಿಕೆಗೆ ಮುಂದಾಗಿದ್ದಾರೆ.

ಇತ್ತ ಸರ್ಕಾರವನ್ನು ಉಳಿಸಲು ಸಂವಿಧಾನಾತ್ಮಕ ಪ್ರಕ್ರಿಯೆಗಳನ್ನೂ ಆರಂಭಿಸಿರುವ ಕಮಲ್‌ನಾಥ್, ಬಹುಮತ ಸಾಬೀತು ಪ್ರಕ್ರಿಯೆಗೆ ಅನುವು ಮಾಡಿಕೊಡುವಂತೆ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ಕ್ಲೈಮ್ಯಾಕ್ಸ್‌ ಹಂತದಲ್ಲಿ ಮಧ್ಯಪ್ರದೇಶ ರಾಜಕೀಯ ಹೈಡ್ರಾಮಾ..! ಶುಕ್ರವಾರ ಸ್ಪೀಕರ್ ಎದುರು ಅತೃಪ್ತರ ಪರೇಡ್..!

ಸ್ಪೀಕರ್ ಈಗಾಗಲೇ ಬಹುಮತ ಸಾಬೀತಿಗೆ ದಿನಾಂಕ ನಿಗದಿಡಪಸಿದ್ದು, ಅದರಂತೆ 16 ಮಾರ್ಚ್ 2020ರಂದು ಬಹುಮತ ಸಾಬೀತಿಗೆ ಸಿದ್ಧವಿರುವುದಾಗಿ ರಾಜ್ಯಪಾಲ ಲಾಲ್‌ಜೀ ಟಂಡನ್ ಅವರಿಗೆ ಕಮಲ್‌ನಾಥ್ ಸ್ಪಷ್ಟಪಡಿಸಿದ್ದಾರೆ.


ಪ್ರತಿಪಕ್ಷ ಬಿಜೆಪಿ ಆಪರೇಷನ್ ಕಮಲದಂತಹ ಹೇಯ ಕೃತ್ಯಕ್ಕೆ ಇಳಿದಿದ್ದು, ಪ್ರಜಾಪ್ರಭುತ್ವವನ್ನು ಅಪಹಾಸ್ಯ ಮಾಡುತ್ತಿದೆ. ನಮ್ಮ ಶಾಸಕರು ಹಾಗೂ ಸಚಿವರುಗಳನ್ನು ಒತ್ತಾಯಪೂರ್ವಕವಾಗಿ ಬೆಂಗಳೂರಿನ ರೆಸಾರ್ಟ್‌ವೊಂದರಲ್ಲಿ ಕೂಡಿ ಹಾಕಲಾಗಿದ್ದು, ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಎಂದು ಕಮಲ್‌ನಾಥ್ ಅಳಲು ತೋಡಿಕೊಂಡಿದ್ದಾರೆ.

ಮಧ್ಯ ಪ್ರದೇಶ ಉಳಿಸಿಕೊಳ್ಳಲು ಕಾಂಗ್ರೆಸ್‌ ಶತ ಪ್ರಯತ್ನ, ಅಖಾಡಕ್ಕೆ ಟ್ರಬಲ್‌ ಶೂಟರ್‌ ಡಿಕೆಶಿ ಎಂಟ್ರಿ

ಬೆಂಗಳೂರು ರೆಸಾರ್ಟ್‌ನಲ್ಲಿರುವ ಕಾಂಗ್ರೆಸ್ ಶಾಸಕರು ಹಾಗೂ ಸಚಿವರುಗಳನ್ನು ಸಂಪರ್ಕಿಸಲು ಪ್ರಯತ್ನ ನಡೆಸಿದ ನಮ್ಮ ನಾಯಕರ ಮೇಲೆ ಬಿಜೆಪಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಇದಕ್ಕೆ ಕರ್ನಾಟಕ ಪೊಲೀಸ್ ಇಲಾಖೆ ಕೂಡ ಸಾಥ್ ನೀಡಿರುವುದು ಅತ್ಯಂತ ಖಂಡನೀಯ ಎಂದು ಕಮಲ್‌ನಾಥ್ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಎಲ್ಲ ಅಸಾಂವಿಧಾನಿಕ ನಡೆಗೆ ಕಾರಣವಾಗಿರುವ ಬಿಜೆಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿರುವ ಕಮಲ್‌ನಾಥ್, ಬಹುಮತ ಸಾಬೀತಿಗೆ ತಮ್ಮ ಸರ್ಕಾರ ಸಜ್ಜಾಗಿದೆ ಎಂದು ರಾಜ್ಯಪಾಲರಿಗೆ ಪತ್ರದ ಮುಖೇನ ಸ್ಪಷ್ಟಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ