ಆ್ಯಪ್ನಗರ

ಮಕ್ಕಳ ಕಳ್ಳರೆಂದು ಭಾವಿಸಿ ಕಾಂಗ್ರೆಸ್‌ ನಾಯಕರನ್ನು ಥಳಿಸಿದ ಗ್ರಾಮಸ್ಥರು

ಮಕ್ಕಳ ಕಳ್ಳರೆಂದು ಭಾವಿಸಿ ಕಾಂಗ್ರೆಸ್ ನಾಯಕರಿಬ್ಬರನ್ನು ಥಳಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

TIMESOFINDIA.COM 28 Jul 2019, 11:21 am
ಭೋಪಾಲ: ಮಕ್ಕಳ ಕಳ್ಳರೆಂದು ಭಾವಿಸಿ ಇಬ್ಬರು ಕಾಂಗ್ರೆಸ್ ನಾಯಕರನ್ನು ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.
Vijaya Karnataka Web congress


ನವಾಲ್ ಸಿಂಘನಾ ಎಂಬ ಗ್ರಾಮದಲ್ಲಿ ಗುರುವಾರ ಮಧ್ಯ ರಾತ್ರಿ ಈ ಘಟನೆ ಸಂಭವಿಸಿದೆ. ಬೆತುಲ್ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಶುಕ್ಲಾ ಮತ್ತು ಸ್ಥಳೀಯ ಕಾಂಗ್ರೆಸ್ ಮುಖಂಡ ಧರ್ಮು ಸಿಂಗ್ ಲಂಜಿವಾರ್ ಹಲ್ಲೆಗೊಳಗಾದವರು.

ನವಾಲ್ ಸಿಂಘನಾ ಗ್ರಾಮದಲ್ಲಿ ಮಕ್ಕಳ ಕಳ್ಳರ ಗ್ಯಾಂಗ್ ಓಡಾಡುತ್ತಿದೆ ಎಂಬ ವಂದತಿ ಮೇರೆಗೆ ಗ್ರಾಮಸ್ಥರು ಮರಗಳನ್ನು ಹಾಕಿ ರಸ್ತೆ ಬಂದ್ ಮಾಡಿದ್ದರು. ಈ ವೇಳೆ ಮಾರ್ಗದಲ್ಲಿ ಕಾಂಗ್ರೆಸ್ ನಾಯಕರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ರಸ್ತೆಯಲ್ಲಿ ಮರಗಳು ಬಿದ್ದಿರುವುದನ್ನು ನೋಡಿ ಕಾರನ್ನು ಹಿಂದಿರುಗಿಸಿ ಹೊರಡಲು ಪ್ರಯತ್ನಿಸಿದ್ದಾರೆ.

ಈ ವೇಳೆ ಇವರನ್ನೆ ಮಕ್ಕಳ ಕಳ್ಳರು ಎಂದು ಭಾವಿಸಿದ ಗ್ರಾಮಸ್ಥರು, ಅವರನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಬಳಿಕ ಅವರ ಕಾರ್ ಜಖಂಗೊಳಿಸಿ, ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ