ಆ್ಯಪ್ನಗರ

ಮಹಾರಾಷ್ಟ್ರ ಬಿಜೆಪಿ ಮುಖಂಡ ಸೇರಿ ಕುಟುಂಬ ಸದಸ್ಯರ ಶೂಟೌಟ್

ಮಹಾರಾಷ್ಟ್ರದ ಜಲ್ಗಾಂವ್ ಜಿಲ್ಲೆಯ ಕಾರ್ಪೋರೇಟರ್ ಆಗಿರುವ ರವೀಂದ್ರ ಹಾಗೂ ಅವರ ಕುಟುಂಬ ಸದಸ್ಯರನ್ನು ನಿವಾಸದಲ್ಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇದೇ ತಿಂಗಳ 21 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಹತ್ಯೆ ಮಹಾರಾಷ್ಟ್ರದಾದ್ಯಂತ ಚರ್ಚೆಗೆ ಗ್ರಾಸವಾಗಿದೆ.

Vijaya Karnataka Web 7 Oct 2019, 1:40 pm
ಮುಂಬಯಿ: ಮಹಾರಾಷ್ಟ್ರದ ಜಲ್ಗಾಂವ್ ಜಿಲ್ಲೆಯಲ್ಲಿ ಬಿಜೆಪಿ ಮುಖಂಡ, ರವೀಂದ್ರ ಖರತ್ ಹಾಗೂ ಅವರ ಕುಟುಂಬದ ನಾಲ್ವರು ಸದಸ್ಯರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
Vijaya Karnataka Web ravindra bjp


ಸೂಕ್ತ ನಾಯಕರಿಲ್ಲದೆ ಗಾಂಧಿ, ಸರ್ದಾರ್ ರನ್ನು ಸ್ವಾಧೀನಪಡಿಸಿಕೊಳ್ಳುತ್ತಿದೆ RSS: ದಿಗ್ವಿ ಸಿಂಗ್

ಭಾನುವಾರ ರಾತ್ರಿ 9.30ರ ಸಮಯದಲ್ಲಿ ಜಲ್ಗಾಂವ್ ನ ಕಾರ್ಪೋರೇಟರ್ ಆಗಿರುವ ರವೀಂದ್ರ ಹಾಗೂ ಅವರ ಕುಟುಂಬ ಸದಸ್ಯರು ಮನೆಯಲ್ಲೇ ಇದ್ದ ವೇಳೆ ದುಷ್ಕರ್ಮಿಗಳು ಶೂಟ್ ಮಾಡಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಸ್ಥಳೀಯ ಬಿಜೆಪಿ ಮುಖಂಡನ ಕೊಲೆ ಯತ್ನ

ಬಿಜೆಪಿ ನಾಯಕ ರವೀಂದ್ರ ಖರತ್, ಸಹೋದರ ಸುನೀಲ್ ಖರತ್, ಪುತ್ರ ರೋಹಿತ್ ಹಾಗೂ ಪ್ರೇಮ್ ಸಾಗರ್, ಗೆಳೆಯ ಸುಮಿತ್ ಫೆಡ್ರೆ ಎಲ್ಲರ ಹತ್ಯೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮನೆಯ ಹೊರಾಂಗಣದಿಂದ ದುಷ್ಕರ್ಮಿಗಳು ದಾಳಿ ನಡೆಸಿದಾಗ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರು. ಗಂಭೀರ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆಯೇ ಕೊನೆಯುಸಿರೆಳೆದರು.

ಬಿಜೆಪಿ ಮುಖಂಡ ಚಿನ್ಮಯಾನಂದ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ವಿದ್ಯಾರ್ಥಿನಿ ಬಂಧನ

ರವೀಂದ್ರ ಖರತ್ ಮತ್ತು ಅವರು ಕುಟುಂಬದ ಹತ್ಯೆಗೆ ದುಷ್ಕರ್ಮಿಗಳು ಗನ್ ಹಾಗೂ ಕೆಲ ಶಸ್ತ್ರಾಸ್ತ್ರಗಳನ್ನು ಬಳಸಿದ್ದು, ಹತ್ಯೆ ಬಳಿಕ ಅವುಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಪ್ರಾಥಮಿಕ ವರದಿಯ ಪ್ರಕಾರ ಈ ಹತ್ಯೆಯು ವೈಯಕ್ತಿಕ ದ್ವೇಷದಿಂದ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಈ ಘಟನೆಗೆ ಸಂಬಂಧಿಸಿ ಈಗಾಗಲೇ ಮೂವರನ್ನು ವಶಕ್ಕೆ ಪಡೆಯಲಾಗಿದೆ. ತನಿಖೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ. ಇದೇ ತಿಂಗಳ 21 ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಹತ್ಯೆ ಮಹಾರಾಷ್ಟ್ರದಾದ್ಯಂತ ಚರ್ಚೆಗೆ ಗ್ರಾಸವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ