ಆ್ಯಪ್ನಗರ

ರೈತರ ಕಬ್ಬಿನ ಹಣ ತಿಂದು ತೇಗಿದ ಎಂಎಲ್‌ಎ? ಮಹಾರಾಷ್ಟ್ರದ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌!

ದೂರಿನ ಆಧಾರದ ಮೇಲೆ ಪೊಲೀಸರು ಪ್ರಶಾಂತ್‌ ಸೇರಿ 15 ಜನರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇನ್ನು ತನ್ನ ಮೇಲಿನ ಆರೋಪಗಳನ್ನು ತಳ್ಳಿ ಹಾಕಿರುವ ಶಾಸಕ ಪ್ರಶಾಂತ್‌ ಬಂಬ್‌, ರೈತರ ಮನವಿ ಮೇರೆಗೆ ಹಣ ವರ್ಗಾವಣೆ ಮಾಡಲಾಗಿದೆ. ಇದು ಸುಮ್ಮನೆ ರಾಜಕೀಯ ಪ್ರೇರಿತ ಆರೋಪ ಎಂದು ತಿಳಿಸಿದ್ದಾರೆ.

Vijaya Karnataka Web 20 Nov 2020, 6:41 am
ಔರಂಗಾಬಾದ್‌: ಕಬ್ಬು ಬೆಳೆಗಾರರಿಂದ ಸಂಗ್ರಹಿಸಲಾಗಿದ್ದ ಸುಮಾರು 9 ಕೋಟಿ ರೂ. ಹಣವನ್ನು ಬೇರೆ ಬ್ಯಾಂಕ್‌ ಖಾತೆಗಳಿಗೆ ವರ್ಗ ಮಾಡಿ ವಂಚನೆ ಎಸಗಿದ ಆರೋಪ ಸಂಬಂಧ ಮಹಾರಾಷ್ಟ್ರದ ಬಿಜೆಪಿ ಶಾಸಕ ಪ್ರಶಾಂತ್‌ ಬಂಬ್‌ ಹಾಗೂ ಇತರ 15 ಜನರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.
Vijaya Karnataka Web Prashant Bamb
Maharashtra BJP MLA Prashant Bamb (file photo)


ಪ್ರಶಾಂತ್‌ ಅವರು ಔರಂಗಾಬಾದ್‌ ಜಿಲ್ಲೆಯ ಗಂಗಾಪುರ ವಿಧಾನಸಭೆ ಕ್ಷೇತ್ರದ ಎಂಎಲ್‌ಎ ಆಗಿದ್ದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಗಂಗಾಪುರ ಸಹಕಾರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರೂ ಆಗಿದ್ದಾರೆ. ''ಕಾರ್ಖಾನೆಯು ಕಲ್ಯಾಣ ಕ್ರಮಗಳನ್ನು ಕೈಗೊಳ್ಳುವ ನೆಪದಲ್ಲಿ ಕಬ್ಬು ಬೆಳೆಗಾರರಿಂದ, ನಕಲಿ ಖಾತೆಗಳ ಮೂಲಕ ಹಣ ಸಂಗ್ರಹಿಸಿದೆ. ಹೀಗೆ ಸಂಗ್ರಹವಾದ 9 ಕೋಟಿ ರೂ. ಮೊತ್ತವನ್ನು ಬಂಬ್‌ ಸೇರಿ ಅನೇಕರು ದುರ್ಬಳಕೆ ಮಾಡಿಕೊಂಡಿದ್ದಾರೆ,'' ಎಂದು ಆರೋಪಿಸಿ ಧೋನ್‌ಗಾಂವ್ಕರ್‌ ಎಂಬುವರು ದೂರು ನೀಡಿದ್ದರು.

ಇದರ ಆಧಾರದ ಮೇಲೆ ಪೊಲೀಸರು ಪ್ರಶಾಂತ್‌ ಸೇರಿ 15 ಜನರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇನ್ನು ತನ್ನ ಮೇಲಿನ ಆರೋಪಗಳನ್ನು ತಳ್ಳಿ ಹಾಕಿರುವ ಶಾಸಕ ಪ್ರಶಾಂತ್‌ ಬಂಬ್‌, ರೈತರ ಮನವಿ ಮೇರೆಗೆ ಹಣ ವರ್ಗಾವಣೆ ಮಾಡಲಾಗಿದೆ. ಇದು ಸುಮ್ಮನೆ ರಾಜಕೀಯ ಪ್ರೇರಿತ ಆರೋಪ ಎಂದು ತಿಳಿಸಿದ್ದಾರೆ.

ಕೊರೊನಾ ಹೆಚ್ಚಳ: ಅಹಮದಾಬಾದ್‌ನಲ್ಲಿ ರಾತ್ರಿ ಕರ್ಫ್ಯೂ ಜಾರಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ