ಆ್ಯಪ್ನಗರ

ಮಹಾ ಮೈತ್ರಿ ಸರಕಾರ ರಚನೆಗೆ ಹಕ್ಕು ಮಂಡನೆಗೆ ಎನ್‌ಸಿಪಿ, ಕಾಂಗ್ರೆಸ್‌ ನಿರ್ಧಾರ; ಶಿವಸೇನೆಗೆ 5 ವರ್ಷ ಸಿಎಂ ಪಟ್ಟ

ಮಹಾರಾಷ್ಟ್ರದಲ್ಲಿ ಸರಕಾರ ರಚನೆ ಬಿಕ್ಕಟ್ಟು ಕೊನೆಗೂ ಅಂತ್ಯ ಕಾಣುವ ಲಕ್ಷಣಗಳು ಕಂಡುಬರುತ್ತಿವೆ. ಬಹುತೇಕ ಒಂದೆರಡು ದಿನದಲ್ಲಿ ಸರಕಾರ ರಚನೆ ಪ್ರಕ್ರಿಯೆ ಅಂತಿಮಗೊಳ್ಳಲಿದೆ.

Vijaya Karnataka Web 22 Nov 2019, 9:44 pm
ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ಮಹಾ ಮೈತ್ರಿ ಸರಕಾರ ರಚನೆ ಅಂತಿಮ ಹಂತದಲ್ಲಿದೆ. ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್‌ ನಾಯಕರು ಮುಂಬಯಿಯಲ್ಲಿ ಸಮಾಲೋಚನೆ ನಡೆಸಿದ್ದಾರೆ. ಆದರೆ ಈ ಮಾತುಕತೆ ಅಪೂರ್ಣವಾಗಿದ್ದು, ಮತ್ತೆ ಮುಂದುವರಿಯುವ ಸಾಧ್ಯತೆ ಇದೆ.
Vijaya Karnataka Web ಉದ್ಧವ್‌, ಶರದ್‌, ಸೋನಿಯಾ
ಉದ್ಧವ್‌, ಶರದ್‌, ಸೋನಿಯಾ


ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎನ್‌ಸಿಪಿ ನಾಯಕ ಶರದ್‌ ಪವಾರ್‌, ಶಿವಸೇನೆಯ ಉದ್ಧವ್ ಠಾಕ್ರೆ ಅವರನ್ನೇ ಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಮಾಡಲು ಸಭೆಯಲ್ಲಿ ಒಮ್ಮತ ಮೂಡಿದೆ ಎಂದರು.

ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ ನಾಯಕರು ಶನಿವಾರ ಕೂಡ ಮತ್ತೊಂದು ಸುತ್ತಿನ ನಡೆಸಲಿದ್ದೇವೆ. ನಂತರ ರಾಜ್ಯಪಾಲರನ್ನು ಭೇಟಿ ಮಾಡಿ ಸರಕಾರ ರಚನೆಗೆ ಹಕ್ಕು ಮಂಡಿಸುವ ಕುರಿತು ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದರು.

ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ ಶುಕ್ರವಾರ ಸಂಜೆ ಅಂತಿಮ ಸುತ್ತಿನ ಮಾತುಕತೆ ನಡೆಸಿದ ನಂತರ ಹಲವಾರು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಶರದ್‌ ಪವಾರ್ ತಿಳಿಸಿದರು.

ಮೂರು ಪಕ್ಷದ ನಾಯಕರ ಜತೆ ಮಾತುಕತೆ ನಡೆಸಿದ ಸುದ್ದಿಗಾರರೊಂದಿಗೆ ಮಾತನಾಡಿದ ಪೃಥ್ವಿರಾಜ್‌ ಚವಾಣ್‌, ಶನಿವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ. ಆ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಹಲವಾರು ಮಾಹಿತಿ ನೀಡಲಾಗುವುದು ಎಂದರು.



ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎನ್‌ಸಿಪಿ ನಾಯಕ ನವಾಬ್‌ ಮಲಿಕ್‌, ಮುಖ್ಯಮಂತ್ರಿ ಪಟ್ಟ ಶಿವಸೇನೆಗೆ ದೊರೆಯಲಿದೆ. ಐದು ವರ್ಷಗಳ ಕಾಲ ಸಿಎಂ ಬದಲಾವಣೆ ಇರುವುದಿಲ್ಲ ಎಂದರು.

ಸರಕಾರ ಐದು ವರ್ಷ ಸುಸೂತ್ರವಾಗಿ ಹಾಗೂ ಸುಭದ್ರವಾಗಿ ಆಡಳಿತ ನಡೆಸುವುದೇ ಮುಖ್ಯ ಗುರಿ ಎಂದು ಎನ್‌ಸಿಪಿಯ ನವಾಬ್‌ ಮಲಿಕ್‌ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ