ಆ್ಯಪ್ನಗರ

ಒಳ್ಳೆ ಸುದ್ದಿ: ಹುತಾತ್ಮ ಯೋಧರ ಪತ್ನಿಗೆ ಜೀವಮಾನವಿಡೀ ಉಚಿತ ಬಸ್‌ ಸೇವೆ

ರಾಜ್ಯ ಸಾರಿಗೆ ಸಂಸ್ಥೆಯ ಎಲ್ಲ ವಿಧದ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

Maharashtra Times 1 May 2018, 10:12 pm
ಮುಂಬಯಿ: ಕರ್ತವ್ಯದಲ್ಲಿರುವಾಗ ಹುತಾತ್ಮರಾದ ಯೋಧರ ಪತ್ನಿಗೆ ಮಹಾರಾಷ್ಟ್ರ ಸರಕಾರ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ. ಹುತಾತ್ಮ ಯೋಧರ ಪತ್ನಿಗೆ ಸರಕಾರ ಬಸ್‌ ಪಾಸ್‌ಗಳನ್ನು ನೀಡಲಿದೆ ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ದಿವಾಕರ್‌ ರಾವೊಟೆ ಘೋಷಿಸಿದರು.
Vijaya Karnataka Web Maharashtra Day Programme


ರಾಜ್ಯ ಸಾರಿಗೆ ಸಂಸ್ಥೆಯ ಎಲ್ಲ ವಿಧದ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿದ್ದು, ಪಾಸ್ ತೋರಿಸಿ ಪ್ರಯಾಣಿಸಬಹುದಾಗಿದೆ. ಬಾಳಾಸಾಹೇಬ್ ಠಾಕ್ರೆ ಶಹೀದ್‌ ಸನ್ಮಾನ್‌ ಯೋಜನೆಯಡಿ ಉಚಿತ ಪ್ರಯಾಣದ ಸೌಲಭ್ಯವನ್ನು ನೀಡಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

ಮಂಗಳವಾರದಿಂದಲೇ ಯೋಜನೆ ಜಾರಿಗೆ ಬಂದಿದ್ದು, ರಾಜ್ಯ ಸಾರಿಗೆ ಸಂಸ್ಥೆಗೆ ಈ ಸಂಬಂಧ ಸೂಚನೆ ನೀಡಲಾಗಿದೆ. ಸಂಸ್ಥೆಯು ಈ ಕುರಿತು ಎಲ್ಲ ಜಿಲ್ಲೆಗಳ ಯೋಧರ ಕಲ್ಯಾಣ ಇಲಾಖೆಗೆ ನಿರ್ದೇಶನ ನೀಡಿದೆ.

ಮಹಾರಾಷ್ಟ್ರ ರಾಜ್ಯಪಾಲ ವಿದ್ಯಾಸಾಗರ್ ರಾವ್ ಮುಂಬಯಿಯ ಶಿವಾಜಿ ಪಾರ್ಕ್‌ ಗ್ರೌಂಡ್‌ನಲ್ಲಿ ಮಂಗಳವಾರ ನಡೆದ ಮಹಾರಾಷ್ಟ್ರ ದಿನ ವಿಶೇಷ ಕಾರ್ಯಕ್ರಮದಲ್ಲಿ ಹುತಾತ್ಮ ಯೋಧರ ಪತ್ನಿಗೆ ಬಸ್‌ ಪಾಸ್‌ಗಳನ್ನು ವಿತರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ