ಆ್ಯಪ್ನಗರ

ಬಾಂದ್ರಾ ಸಮೀಪ ಭಾರಿ ಅಗ್ನಿ ಅನಾಹುತ

ಮುಂಬೈನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದೆ.

TNN 26 Oct 2017, 6:36 pm
ಮುಂಬೈ: ವಾಣಿಜ್ಯ ನಗರಿ ಮುಂಬೈನ ಪ್ರತಿಷ್ಠಿತ ಬಡಾವಣೆ ಬಾಂದ್ರಾ ಸಮೀಪದ ಕೊಳಗೇರಿ ಪ್ರದೇಶದಲ್ಲಿ ಭಾರಿ ಅಗ್ನಿ ಅನಾಹುತ ಸಂಭವಿಸಿದೆ.
Vijaya Karnataka Web major fire breaks out in slum close to bandra station
ಬಾಂದ್ರಾ ಸಮೀಪ ಭಾರಿ ಅಗ್ನಿ ಅನಾಹುತ


ಬೆಹ್ರಾಂಪಾದ ಕೊಳಗೇರಿ ಸಮೀಪದಲ್ಲಿ ಈ ಬೆಂಕಿ ದುರಂತ ಸಂಭವಿಸಿದೆ.

ಬೆಂಕಿ ನಂದಿಸಲು ಸುಮಾರು 9 ಅಗ್ನಿ ಶಾಮಕ ವಾಹನಗಳನ್ನು ನಿಯೋಜಿಸಲಾಗಿದೆ.

ಈ ಕೊಳಗೇರಿ ಸಮೀಪದ ಬಾಂದ್ರಾ ಬೃಹತ್‌ ರೈಲ್ವೆ ನಿಲ್ದಾಣ ಕೂಡ ಇದೆ. ಒಂದು ವೇಳೆ ಬೆಂಕಿಯ ಕೆನ್ನಾಲಗೆ ಹೆಚ್ಚಾಗಿದ್ದರೆ ರೈಲ್ವೆ ನಿಲ್ದಾಣ ಕೂಡ ಹೊತ್ತಿ ಉರಿಯುವ ಸಾಧ್ಯತೆ ಇತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಅಗ್ನಿ ಅನಾಹುತದ ಹಿನ್ನೆಲೆಯಲ್ಲಿ ಬಾಂದ್ರಾ-ಅಂಧೇರಿ ನಡುವಿನ ರೈಲುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಅಗ್ನಿ ದುರಂತದ ಸುದ್ದಿ ಗೊತ್ತಾಗುತ್ತಿದ್ದಂತೆ ಸಾವಿರಾರು ಮಂದಿ ಈ ಪ್ರದೇಶದಲ್ಲಿ ಜಮಾಯಿಸಿದ್ದಾರೆ.

Major fire breaks out in slum close to Bandra station

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ