ಆ್ಯಪ್ನಗರ

ರಾಮ ಮಂದಿರ ನಿರ್ಮಾಣಕ್ಕೆ ಕಾನೂನು ರೂಪಿಸಿ, ರಾಷ್ಟ್ರ ಹಿತಕ್ಕೆ ಇದು ಅನಿವಾರ್ಯ: ಭಾಗವತ್

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಸೂಕ್ತ ಕಾನೂನು ರೂಪಿಸಬೇಕು. ಯಾವುದೇ ಕಾರಣವಿಲ್ಲದೆ ಒಂದು ಸಮಾಜದ ತಾಳ್ಮೆಯನ್ನು ಪರೀಕ್ಷಿಸುವುದು ಯಾರ ಹಿತಕ್ಕೂ ಪೂರಕವಲ್ಲ ಎಂದು ಆರೆಸ್ಸೆಸ್‌ ವರಿಷ್ಠ ಮೋಹನ್ ಭಾಗವತ್‌ ಪ್ರತಿಪಾದಿಸಿದರು.

Vijaya Karnataka Web 19 Oct 2018, 8:03 am
ನಾಗಪುರ/ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕೆಂಬ ಬೇಡಿಕೆಯನ್ನು ಆರೆಸ್ಸೆಸ್‌ ಮುಖ್ಯಸ್ಥ ಮೋಹನ್ ಭಾಗವತ್‌ ಮತ್ತೊಮ್ಮೆ ಬಲವಾಗಿ ಪ್ರತಿಪಾದಿಸಿದ್ದಾರೆ. ಇದಕ್ಕೆ ಅನುಕೂಲವಾಗುವಂತಹ ಸೂಕ್ತ ಕಾನೂನನ್ನು ಕೇಂದ್ರ ಸರಕಾರ ರೂಪಿಸಬೇಕು. ಆ ಮೂಲಕ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಇರುವ ಅಡೆತಡೆಗಳನ್ನು ನಿವಾರಿಸಬೇಕು ಎಂದು ಭಾಗವತ್ ಹೇಳಿದ್ದಾರೆ.
Vijaya Karnataka Web Mohan Bhagwat


'ರಾಮ ಜನ್ಮಭೂಮಿ ಆಂದೋಲನದ ಪಾಲುದಾರರಾಗಿ ಶ್ರೀರಾಮನ ಜನ್ಮಭೂಮಿಯಲ್ಲಿ ಭವ್ಯವಾದ ಮಂದಿರ ನಿರ್ಮಾಣವಾಗಬೇಕು ಎಂದು ನಾವು ಹೇಳುತ್ತೇವೆ. ಈ ನಿಟ್ಟಿನಲ್ಲಿ ಶೀಘ್ರ ನಿರ್ಧಾರ ಕೈಗೊಳ್ಳಬೇಕು. ಸರಕಾರ ಇದಕ್ಕಾಗಿ ಕಾನೂನು ರೂಪಿಸಬೇಕು. ಈ ವಿಷಯದಲ್ಲಿ ನಮ್ಮ ಸಂತರು ಮತ್ತು ಮಹಾತ್ಮರು ಮುಂಧಿಡುವ ಪ್ರತಿ ಹೆಜ್ಜೆಗೆ ಸಂಘದ ಬೆಂಬಲವಿದೆ' ಎಂದು ಭಾಗವತ್ ಘೋಷಿಸಿದರು.

ವಿಜಯ ದಶಮಿ ಸಂದರ್ಭದ ಭಾಷಣದಲ್ಲಿ ಆರೆಸ್ಸೆಸ್‌ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಆತ್ಮಗೌರವಕ್ಕಾಗಿಯಾದರೂ ಮಂದಿರ ನಿರ್ಮಾಣ ಅವಶ್ಯವಾಗಿದೆ. ಇದರಿಂದ ಎಲ್ಲರಿಗೂ ಒಳಿತಾಗುವ ವಾತಾವರಣ ನಿರ್ಮಾಣವಾಗಲಿದೆ ಎಂದು ಭಾಗವತ್ ತಿಳಿಸಿದ್ದಾರೆ.

ಮಂದಿರ ನಿರ್ಮಾಣಕ್ಕೂ ಮೊದಲು ಅಯೋಧ್ಯೆಯ ಭೂಮಿ ಹಿಂದುಗಳಿಗೆ ಸೇರಬೇಕಿದೆ. ನಂತರ ಸಂಬಂಧಿತ ಪ್ರಕ್ರಿಯೆಗಳನ್ನು ಪೂರೈಸಬೇಕಿದೆ. ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲವೊಂದು ಮೂಲಭೂತವಾದಿಗಳು ಮಂದಿರ ನಿರ್ಮಾಣದ ವಿರುದ್ಧ ಸ್ವಾರ್ಥ ರಾಜಕಾರಣ ಮಾಡುತ್ತಿದ್ದಾರೆ. ಯಾವುದೇ ಕಾರಣವಿಲ್ಲದೆ ಸಮಾಜದ ತಾಳ್ಮೆ ಪರೀಕ್ಷೆ ಮಾಡುವುದು ಯಾರ ಹಿತಕ್ಕೂ ಒಳಿತಲ್ಲ ಎಂದು ಭಾಗವತ್‌ ನುಡಿದರು.

ಮಂದಿರ ನಿರ್ಮಾಣದಲ್ಲಿ ಅವರು ಆಡುತ್ತಿರುವ ಕೋಮು ಸಂಘರ್ಷ ಸಹಿತ ಸ್ವಾರ್ಥ ರಾಜಕಾರಣದಿಂದಾಗಿ ರಾಮ ಮಂದಿರ ನಿರ್ಮಾಣ ತಡವಾಗುತ್ತಿದೆ ಎಂದು ಭಾಗವತ್ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ