ಆ್ಯಪ್ನಗರ

ಮಾಲೇಗಾಂವ್‌ ಸ್ಫೋಟ: ಪುರೋಹಿತ್‌ಗೆ ಜಾಮೀನು

ಮಾಲೇಗಾಂವ್‌ ಸರಣಿ ಬಾಂಬ್‌ ಸ್ಫೋಟ ಪ್ರಕರಣ ಸಂಬಂಧ ಪುರೋಹಿತ್‌ಗೆ ಸುಪ್ರೀಂ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಟೈಮ್ಸ್ ಆಫ್ ಇಂಡಿಯಾ 21 Aug 2017, 11:48 am
ಹೊಸದಿಲ್ಲಿ: 2008ರ ಮಾಲೇಗಾಂವ್‌ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಲೆಫ್ಟಿನೆಂಟ್‌ ಕರ್ನಲ್‌ ಶ್ರೀಕಾಂತ್‌ ಪ್ರಸಾದ್ ಪುರೋಹಿತ್‌ಗೆ ಸುಪ್ರೀಂ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.
Vijaya Karnataka Web malegaon blast sc grants bail to purohit
ಮಾಲೇಗಾಂವ್‌ ಸ್ಫೋಟ: ಪುರೋಹಿತ್‌ಗೆ ಜಾಮೀನು


ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್‌ ತಿರಸ್ಕರಿಸಿದನ್ನು ಪ್ರಶ್ನಿಸಿ ಪುರೋಹಿತ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲರಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್‌.ಕೆ. ಅಗರ್‌ವಾಲ್‌, ಎ.ಎಂ. ಸಪ್ರೆ ನೇತೃತ್ವದ ನ್ಯಾಯಪೀಠ, ಕೆಲವು ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.

ಮಹಾರಾಷ್ಟ್ರ ಸಂಘಟಿತ ಅಪರಾಧ ಕಾಯ್ದೆ (ಮೋಕಾ) ಯಡಿ ದಾಖಲಾಗಿದ್ದ ಪ್ರಕರಣಗಳಿಂದ ಮುಕ್ತಗೊಳಿಸಿದ ಹಿನ್ನೆಲೆಯಲ್ಲಿ ಪುರೋಹಿತ್‌ ಅವರು ಜಾಮೀನು ಪಡೆಯಲು ಅರ್ಹರಾಗಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

2008ರ ಸೆಪ್ಟಂಬರ್‌ 29ರಂದು ಮಹಾರಾಷ್ಟ್ರದ ನಾಸಿಕ್‌ ಸಮೀಪದ ಜವಳಿ ನಗರ ಎಂದೇ ಖ್ಯಾತವಾಗಿರುವ, ಮುಸ್ಲಿಂ ಪ್ರಾಬಲ್ಯ ಇರುವ ಮಾಲೇಗಾಂವ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಏಳು ಮಂದಿ ಮೃತಪಟ್ಟಿದ್ದರು.

Malegaon blast: SC grants bail to Purohit

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ