ಹೊಸದಿಲ್ಲಿ: ಪಂಚರಾಜ್ಯಗಳ ಸೋಲಿನ ನಡುವೆಯೂ ಕಾಂಗ್ರೆಸ್ನ ಅಧಿನಾಯಕಿ ಸೋನಿಯಾ ಗಾಂಧಿ ಅವರೇ ಮಧ್ಯಂತರ ಅಧ್ಯಕ್ಷೆಯಾಗಿ ಮುಂದುವರಿದಿದ್ದಾರೆ. ಈ ಮೂಲಕ ಪಂಚ ರಾಜ್ಯಗಳಲ್ಲಿ ಕಳಪೆ ಸಾಧನೆಯ ನಂತರ ಕೇಳಿಬಂದಿದ್ದ ನಾಯಕತ್ವ ಬದಲಾವಣೆಯ ಚರ್ಚೆಗೆ ಸದ್ಯಕ್ಕೆ ತೆರೆ ಬಿದ್ದಂತಾಗಿದ್ದು, ಗಾಂಧಿ ಪರಿವಾರದ ನೇತೃತ್ವದಲ್ಲಿಯೇ ಕಾಂಗ್ರೆಸ್ ಮುನ್ನಡೆಯುವುದು ಸ್ಪಷ್ಟವಾಗಿದೆ. ಭಾನುವಾರ ದಿಲ್ಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯ ಬಳಿಕ ಮಾತನಾಡಿದ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಅವರೇ ಕಾಂಗ್ರೆಸ್ನ ಮಧ್ಯಂತರ ಅಧ್ಯಕ್ಷರಾಗು ಮುಂದುವರಿಯಲಿದ್ದಾರೆ. ಅವರ ನಾಯಕತ್ವದಲ್ಲೇ ಪಕ್ಷದ ನಾಯಕರು ಮುಂದುವರಿಯಲಿದ್ದಾರೆ. ಸೋನಿಯಾ ಗಾಂಧಿ ಅವರೇ ಪಕ್ಷವನ್ನು ಮುನ್ನಡೆಸಲಿದ್ದು, ಪಕ್ಷದ ಬಗ್ಗೆ ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ನಾವೆಲ್ಲರೂ ಅವರ ನಾಯಕತ್ವದ ಮೇಲೆ ನಂಬಿಕೆ ಇಟ್ಟಿದ್ದೇವೆ ಎಂದು ಹೇಳಿದರು.
ಅದೇ ರೀತಿ, ಎಐಸಿಸಿ ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್, ಸೋನಿಯಾ ಗಾಂಧಿ ಅವರು ಪಕ್ಷದ ಅಧ್ಯಕ್ಷರಾಗಿ ಮುಂದುವರೆದಿದ್ದಾರೆ. ಕಾರ್ಯಕಾರಿಣಿ ಸಭೆಯಲ್ಲಿ 5 ರಾಜ್ಯಗಳ ಚುನಾವಣೆಯ ಬಗ್ಗೆ ವಿವರವಾದ ಚರ್ಚೆ ನಡೆಯಿತು. ನಾವು ಮುಂದೆ ಯಾವ ರೀತಿ ನಿರ್ಧಾರಗಳನ್ನು ಕೈಗೊಳ್ಳಬೇಕು. ಮುಂದೆ ಬರುವ ಚುನಾವಣೆಗಳಿಗೆ ಹೇಗೆ ತಯಾರಿ ನಡೆಸುವುದು ಎಂಬುದನ್ನು ಚರ್ಚೆ ನಡೆಸಿದ್ದೇವೆ ಎಂದು ಹೇಳಿದರು.
ಇನ್ನು, ಸೋನಿಯಾ ಗಾಂಧಿ ಅವರು ತಮ್ಮ ಭಾಷಣದಲ್ಲಿ ಪಕ್ಷವೂ ಬಯಸಿದರೆ ನಾನು, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ರಾಜೀನಾಮೆ ನೀಡಲು ಸಿದ್ಧ ಎಂದು ಹೇಳಿದ್ದರು. ಆದರೆ, ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಸೋನಿಯಾ ಗಾಂಧಿ ಅವರ ಪ್ರಸ್ತಾಪವನ್ನು ಅವಿರೋಧವಾಗಿ ತಿರಸ್ಕರಿಸಿದೆ ಎಂದು ಮೂಲಗಳು ತಿಳಿಸಿವೆ.
ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅನುಭವಿಸಿದ ಹೀನಾಯ ಸೋಲಿನ ಬಗ್ಗೆ ಚರ್ಚೆ ನಡೆಸಲು ಕಾರ್ಯಕಾರಿಣಿ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್, ದಿಗ್ವಿಜಯ್ ಸಿಂಗ್, ಪಿ ಚಿದಂಬರಂ, ಹರೀಶ್ ರಾವತ್, ಆನಂದ್ ಶರ್ಮಾ, ಜೈರಾಮ್ ರಮೇಶ್ ಹಾಗೂ ಕೆಸಿ ವೇಣುಗೋಪಾಲ್ ಸೇರಿ 50ಕ್ಕೂ ಹೆಚ್ಚು ಹಿರಿಯ ನಾಯಕರು ಭಾಗವಹಿಸಿದ್ದರು.
ಛತ್ತೀಸ್ಗಡ ಸಿಎಂ ಭೂಪೇಶ್ ಬಘೇಲ್, ಶಕ್ತಿಸಿಂಹ ಗೋಹಿಲ್, ದಿನೇಶ್ ಗುಂಡೂರಾವ್, ರಾಜೀವ್ ಶುಕ್ಲಾ, ಅಂಬಿಕಾ ಸೋನಿ, ಮುಖುಲ್ ವಾಸ್ನಿಕ್ ಮತ್ತು ಪ್ರಮೋದ್ ತಿವಾರಿ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಆದರೆ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಹಾಗೂ ಇತರ 5 ಪ್ರಮುಖ ನಾಯಕರು ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ್ದಿಲ್ಲ. ಮಾಜಿ ರಕ್ಷಣಾ ಸಚಿವ ಎಕೆ ಆಂಟನಿ ಕೋವಿಡ್ ಪಾಸಿಟಿವ್ ಬಂದ ಕಾರಣದಿಂದ ಸಭೆಯಲ್ಲಿ ಭಾಗವಹಿಸಿದ್ದಿಲ್ಲ.
ನಾಯಕತ್ವ ಬದಲಾವಣೆಗೆ ಕೇಳಿದ್ದ ಕೂಗು!
ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ನ ಹೀನಾಯ ಪ್ರದರ್ಶನದ ಬೆನ್ನಲ್ಲೇ ನಾಯಕತ್ವ ಬದಲಾವಣೆಯ ಕೂಗು ವ್ಯಾಪಕವಾಗಿ ಕೇಳಿಬಂದಿತ್ತು. ಗಾಂಧಿ ಪರಿವಾರದ ವಿರುದ್ಧ ಅಸಮಾಧಾನ ಕೂಡ ವ್ಯಕ್ತವಾಗಿತ್ತು. ಪ್ರಮುಖವಾಗಿ ಜಿ-23 ನಾಯಕರು ನಾಯಕತ್ವ ಬದಲಾವಣೆಗೆ ಆಸಕ್ತಿ ಹೊಂದಿದ್ದರು. ಸಚಿನ್ ಪೈಲಟ್, ಶಶಿ ತರೂರ್, ಮನೀಷ್ ತಿವಾರಿ ಅವರಿಗೆ ಪಕ್ಷದ ನಾಯಕತ್ವ ನೀಡಬೇಕು ಎಂಬ ಕೂಗು ಕೇಳಿ ಬಂದಿತ್ತು. ಇದೇ ಕಾರಣಕ್ಕಾಗಿ ಕಪಿಲ್ ಸಿಬಲ್, ಮನೀಷ್ ತಿವಾರಿ ಅವರು ಗುಲಾಂ ನಬೀ ಆಜಾದ್ ನಿವಾಸದಲ್ಲಿ ಸಭೆ ಸೇರಿ ಚರ್ಚಿಸಿದ್ದರು. ಆದರೆ, ಕಾಂಗ್ರೆಸ್ ಮತ್ತೆ ಗಾಂಧಿ ಪರಿವಾರದ ನೇತೃತ್ವದಲ್ಲಿಯೇ ಮುಂದುವರಿಯಲು ನಾಯಕರು ನಿರ್ಧರಿಸಿದ್ದಾರೆ.
ಪಂಚರಾಜ್ಯಗಳಲ್ಲಿ ಕಳಪೆ ಸಾಧನೆ!
ಈ ಬಾರಿಯ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನ ತೋರಿದೆ. ಅಧಿಕಾರದಲ್ಲಿದ್ದ ಪಂಜಾಬ್ನಲ್ಲಿ ಎಎಪಿ ಎದುರು ಹೀನಾಯವಾಗಿ ಸೋತಿದ್ದು, ಚೇತರಿಕೆಯ ಭರವಸೆ ಇದ್ದ ಉತ್ತರಾಖಂಡ್, ಗೋವಾ, ಮಣಿಪುರದಲ್ಲಿಯೂ ಕಳಪೆ ಪ್ರದರ್ಶನ ತೋರಿತ್ತು. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಕೇವಲ 2 ಕ್ಷೇತ್ರಗಳನ್ನು ಗೆಲ್ಲುವಲ್ಲಿ ಮಾತ್ರ ಸಫಲವಾಗಿತ್ತು.
ಅದೇ ರೀತಿ, ಎಐಸಿಸಿ ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್, ಸೋನಿಯಾ ಗಾಂಧಿ ಅವರು ಪಕ್ಷದ ಅಧ್ಯಕ್ಷರಾಗಿ ಮುಂದುವರೆದಿದ್ದಾರೆ. ಕಾರ್ಯಕಾರಿಣಿ ಸಭೆಯಲ್ಲಿ 5 ರಾಜ್ಯಗಳ ಚುನಾವಣೆಯ ಬಗ್ಗೆ ವಿವರವಾದ ಚರ್ಚೆ ನಡೆಯಿತು. ನಾವು ಮುಂದೆ ಯಾವ ರೀತಿ ನಿರ್ಧಾರಗಳನ್ನು ಕೈಗೊಳ್ಳಬೇಕು. ಮುಂದೆ ಬರುವ ಚುನಾವಣೆಗಳಿಗೆ ಹೇಗೆ ತಯಾರಿ ನಡೆಸುವುದು ಎಂಬುದನ್ನು ಚರ್ಚೆ ನಡೆಸಿದ್ದೇವೆ ಎಂದು ಹೇಳಿದರು.
ಇನ್ನು, ಸೋನಿಯಾ ಗಾಂಧಿ ಅವರು ತಮ್ಮ ಭಾಷಣದಲ್ಲಿ ಪಕ್ಷವೂ ಬಯಸಿದರೆ ನಾನು, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ರಾಜೀನಾಮೆ ನೀಡಲು ಸಿದ್ಧ ಎಂದು ಹೇಳಿದ್ದರು. ಆದರೆ, ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಸೋನಿಯಾ ಗಾಂಧಿ ಅವರ ಪ್ರಸ್ತಾಪವನ್ನು ಅವಿರೋಧವಾಗಿ ತಿರಸ್ಕರಿಸಿದೆ ಎಂದು ಮೂಲಗಳು ತಿಳಿಸಿವೆ.
ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅನುಭವಿಸಿದ ಹೀನಾಯ ಸೋಲಿನ ಬಗ್ಗೆ ಚರ್ಚೆ ನಡೆಸಲು ಕಾರ್ಯಕಾರಿಣಿ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್, ದಿಗ್ವಿಜಯ್ ಸಿಂಗ್, ಪಿ ಚಿದಂಬರಂ, ಹರೀಶ್ ರಾವತ್, ಆನಂದ್ ಶರ್ಮಾ, ಜೈರಾಮ್ ರಮೇಶ್ ಹಾಗೂ ಕೆಸಿ ವೇಣುಗೋಪಾಲ್ ಸೇರಿ 50ಕ್ಕೂ ಹೆಚ್ಚು ಹಿರಿಯ ನಾಯಕರು ಭಾಗವಹಿಸಿದ್ದರು.
ಛತ್ತೀಸ್ಗಡ ಸಿಎಂ ಭೂಪೇಶ್ ಬಘೇಲ್, ಶಕ್ತಿಸಿಂಹ ಗೋಹಿಲ್, ದಿನೇಶ್ ಗುಂಡೂರಾವ್, ರಾಜೀವ್ ಶುಕ್ಲಾ, ಅಂಬಿಕಾ ಸೋನಿ, ಮುಖುಲ್ ವಾಸ್ನಿಕ್ ಮತ್ತು ಪ್ರಮೋದ್ ತಿವಾರಿ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಆದರೆ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಹಾಗೂ ಇತರ 5 ಪ್ರಮುಖ ನಾಯಕರು ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ್ದಿಲ್ಲ. ಮಾಜಿ ರಕ್ಷಣಾ ಸಚಿವ ಎಕೆ ಆಂಟನಿ ಕೋವಿಡ್ ಪಾಸಿಟಿವ್ ಬಂದ ಕಾರಣದಿಂದ ಸಭೆಯಲ್ಲಿ ಭಾಗವಹಿಸಿದ್ದಿಲ್ಲ.
ನಾಯಕತ್ವ ಬದಲಾವಣೆಗೆ ಕೇಳಿದ್ದ ಕೂಗು!
ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ನ ಹೀನಾಯ ಪ್ರದರ್ಶನದ ಬೆನ್ನಲ್ಲೇ ನಾಯಕತ್ವ ಬದಲಾವಣೆಯ ಕೂಗು ವ್ಯಾಪಕವಾಗಿ ಕೇಳಿಬಂದಿತ್ತು. ಗಾಂಧಿ ಪರಿವಾರದ ವಿರುದ್ಧ ಅಸಮಾಧಾನ ಕೂಡ ವ್ಯಕ್ತವಾಗಿತ್ತು. ಪ್ರಮುಖವಾಗಿ ಜಿ-23 ನಾಯಕರು ನಾಯಕತ್ವ ಬದಲಾವಣೆಗೆ ಆಸಕ್ತಿ ಹೊಂದಿದ್ದರು. ಸಚಿನ್ ಪೈಲಟ್, ಶಶಿ ತರೂರ್, ಮನೀಷ್ ತಿವಾರಿ ಅವರಿಗೆ ಪಕ್ಷದ ನಾಯಕತ್ವ ನೀಡಬೇಕು ಎಂಬ ಕೂಗು ಕೇಳಿ ಬಂದಿತ್ತು. ಇದೇ ಕಾರಣಕ್ಕಾಗಿ ಕಪಿಲ್ ಸಿಬಲ್, ಮನೀಷ್ ತಿವಾರಿ ಅವರು ಗುಲಾಂ ನಬೀ ಆಜಾದ್ ನಿವಾಸದಲ್ಲಿ ಸಭೆ ಸೇರಿ ಚರ್ಚಿಸಿದ್ದರು. ಆದರೆ, ಕಾಂಗ್ರೆಸ್ ಮತ್ತೆ ಗಾಂಧಿ ಪರಿವಾರದ ನೇತೃತ್ವದಲ್ಲಿಯೇ ಮುಂದುವರಿಯಲು ನಾಯಕರು ನಿರ್ಧರಿಸಿದ್ದಾರೆ.
ಪಂಚರಾಜ್ಯಗಳಲ್ಲಿ ಕಳಪೆ ಸಾಧನೆ!
ಈ ಬಾರಿಯ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನ ತೋರಿದೆ. ಅಧಿಕಾರದಲ್ಲಿದ್ದ ಪಂಜಾಬ್ನಲ್ಲಿ ಎಎಪಿ ಎದುರು ಹೀನಾಯವಾಗಿ ಸೋತಿದ್ದು, ಚೇತರಿಕೆಯ ಭರವಸೆ ಇದ್ದ ಉತ್ತರಾಖಂಡ್, ಗೋವಾ, ಮಣಿಪುರದಲ್ಲಿಯೂ ಕಳಪೆ ಪ್ರದರ್ಶನ ತೋರಿತ್ತು. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಕೇವಲ 2 ಕ್ಷೇತ್ರಗಳನ್ನು ಗೆಲ್ಲುವಲ್ಲಿ ಮಾತ್ರ ಸಫಲವಾಗಿತ್ತು.