ಆ್ಯಪ್ನಗರ

ಸಮೋಸಾ ಬೇಕೆಂದು ಕೋವಿಡ್-19 ಹೆಲ್ಪ್‌ಲೈನ್‌ಗೆ ಕರೆ ಮಾಡಿದ: ಮುಂದೇನಾಯ್ತು?

ಸಮೋಸಾ ಬೇಕೆಂದು ಕೋವಿಡ್-19 ಹೆಲ್ಪ್‌ಲೈನ್‌ ನಂಬರ್‌ಗೆ ನಾಲ್ಕು ಬಾರಿ ಕರೆ ಮಾಡಿದ ವ್ಯಕ್ತಿಯೋರ್ವನಿಗೆ ಸಮೋಸಾ ತಂದುಕೊಟ್ಟ ಆರೋಗ್ಯ ಇಲಾಖೆ ಸಿಬ್ಬಂದಿ, ಬಳಿಕ ಶಿಕ್ಷೆಯ ರೂಪದಲ್ಲಿ ಆತನಿಂದ ಚರಂಡಿ ಸ್ವಚ್ಛಗೊಳಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

Vijaya Karnataka Web 31 Mar 2020, 11:05 am
ರಾಂಪುರ್: ಇಡೀ ದೇಶ ಕೊರೊನಾ ವೈರಸ್ ವಿರುದ್ಧ ಒಗ್ಗಟ್ಟಾಗಿ ಹೋರಾಡುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾರ್ವಜನಿಕರ ಹಿತಕ್ಕಾಗಿ ಹಗಲಿರುಳೂ ದುಡಿಯುತ್ತಿವೆ. ಆದರೆ ಈ ಅವಕಾಶವನ್ನು ಕೆಲವರು ದುರ್ಬಳಕೆ ಮಾಡಿಕೊಂಡು ಇಡೀ ಹೋರಾಟವನ್ನೇ ಅಪಹಾಸ್ಯ ಮಾಡುತ್ತಿದ್ದಾರೆ.
Vijaya Karnataka Web Samosa
ಸಮೋಸಾ ಬೇಕೆಂದು ಕೋವಿಡ್-19 ಹೆಲ್ಪ್‌ಲೈನ್‌ಗೆ ಕರೆ ಮಾಡಿದ್ದ ವ್ಯಕ್ತಿಗೆ ಚರಂಡಿ ಸ್ವಚ್ಛಗೊಳಿಸುವ ಶಿಕ್ಷೆ ನೀಡಲಾಗಿದೆ.


ಉತ್ತರಪ್ರದೇಶದಲ್ಲಿ ಸಾರ್ವಜನಿಕರಿಗೆ ಶೀಘ್ರ ವೈದ್ಯಕೀಯ ನೆರವು ಸಿಗಲಿ ಎಂಬ ಉದ್ದೇಶದಿಂದ ಕೋವಿಡ್-19 ಹೆಲ್ಪ್‌ಲೈನ್ ಸ್ಥಾಪಿಸಲಾಗಿದೆ. ಈ ಹೆಲ್ಪ್‌ಲೈನ್‌ಗೆ ಕರೆ ಮಾಡುವ ಮೂಲಕ ಸಾರ್ವಜನಿಕರು ತುರ್ತು ವೈದ್ಯಕೀಯ ಸಹಾಯ ಪಡೆಯಬಹುದಾಗಿದೆ.

ಆದರೆ ಈ ಅವಕಾಶವನ್ನು ದುರ್ಬಳಕೆ ಮಾಡಿಕೊಂಡ ಭೂಪನೋರ್ವ, ಕೋವಿಡ್-19 ಹೆಲ್ಪ್‌ಲೈನ್‌ಗೆ ಕರೆ ಮಾಡಿ ಸಮೋಸಾ ಬೇಕೆಂದು ಪಟ್ಟು ಹಿಡಿದಿದ್ದಾನೆ. ಸತತ ನಾಲ್ಕು ಬಾರಿ ಈ ನಂಬರ್‌ಗೆ ಕರೆ ಮಾಡಿದ ವ್ಯಕ್ತಿ ತನಗೆ ತುರ್ತಾಗಿ ಸಮೋಸಾ ತಂದುಕೊಡಬೇಕು ಎಂದು ಹಠ ಮಾಡಿದ್ದಾನೆ.

ತವರಿಗೆ ಮರಳಿದವರ ಮೇಲೆ ಔ‍ಷಧಿ ಸಿಂಪಡಿಸಿದ ಸರ್ಕಾರ: ಕಣ್ಣೀರಿಟ್ಟ ಕಾರ್ಮಿಕರು!

ಸತತ ಮನವಿಯ ಹೊರತಾಗಿಯೂ ಆತ ತನಗೆ ಸಮೋಸಾ ಬೇಕೆಂದು ಪಟ್ಟು ಹಿಡಿದಾಗ, ಸಮೋಸಾ ಪೊಟ್ಟಣದೊಂದಿಗೆ ಆತನ ಮನೆಗೆ ತೆರಳಿದ ಆರೋಗ್ಯ ಇಲಾಖೆ ಸಿಬ್ಬಂದಿ, ಪೊಲೀಸರ ಸಹಾಯದೊಂದಿಗೆ ಆತನಿಗೆ ಚರಂಡಿ ಸ್ವಚ್ಛಗೊಳಿಸುವ ಶಿಕ್ಷೆ ನೀಡಿದ್ದಾರೆ.


ಸಮೋಸಾ ಪೊಟ್ಟಣದೊಂದಿಗೆ ಪೊಲೀಸರನ್ನು ಕಂಡು ದಂಗಾದ ವ್ಯಕ್ತಿ ಕ್ಷಮೆ ಕೇಳಲು ಮುಂದಾದ. ಆದರೆ ತಮ್ಮ ಕೆಲಸವನ್ನೆಲ್ಲಾ ಬಿಟ್ಟು ಈತನಿಗೆ ಸಮೋಸಾ ತಂದು ಕೊಟ್ಟಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಕೋಪದಿಂದ ಆತನಿಗೆ ಚರಂಡಿ ಸ್ವಚ್ಛ ಮಾಡುವಂತೆ ಆದೇಶಿಸಿದರು.

ಕೊರೊನಾ ತಂದ ಫಜೀತಿ: 'ಕೊರೌನಾ' ಗ್ರಾಮದ ಜನರಿಂದ ದೂರ ಸರಿದ ಸಮಾಜ!

ಬೇರೆ ವಿಧಿಯಿಲ್ಲದೇ ತುರ್ತು ಸೇವಾ ಘಟಕಕ್ಕೆ ಕರೆ ಮಾಡಿ ತೊಂದರೆ ಕೊಟ್ಟಿದ್ದಕ್ಕೆ ಪ್ರತಿಯಾಗಿ ಆ ವ್ಯಕ್ತಿ ಚರಂಡಿ ಸ್ವಚ್ಛಗೊಳಿಸಿ ಬಳಿಕ ಅಧಿಕಾರಿಗಳ ಕ್ಷಮೆ ಕೇಳಿದ. ಈ ಕುರಿತು ಜಿಲ್ಲಾ ಮ್ಯಾಜಿಸ್ಟ್ರೇಟ್ ಆಂಜನೇಯ ಕುಮಾರ್ ಸಿಂಗ್ ಟ್ವೀಟ್ ಮಾಡಿದ್ದು, ಅಧಿಕಾರಿಗಳ ಕ್ರಮಕ್ಕೆ ಎಲ್ಲರೂ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ