ಆ್ಯಪ್ನಗರ

ತವರಿಗೆ ಹೋಗುತ್ತೇನೆ ಎಂದಿದ್ದಕ್ಕೆ ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸಿದ

ಪತ್ನಿ ಜತೆ ಜಗಳಕ್ಕೆ ನಿಂತ ಪತಿ ಕೋಪದ ಭರದಲ್ಲಿ ಆಕೆಯ ಮೂಗನ್ನೇ ಕಚ್ಚಿ ಹಾಕಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

Times Now 26 Jun 2019, 8:19 am
ಬರೇಲಿ: ತವರಿಗೆ ಹೋಗುತ್ತೇನೆಂದ ಪತ್ನಿಯ ಮೇಲೆ ಕೋಪಗೊಂಡ ಪತಿ ಮಹಾಶಯ ಆಕೆಯ ಮೂಗನ್ನೇ ಕಚ್ಚಿ ಹಾಕಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
Vijaya Karnataka Web Crime


ಪೀಡಿತ ಮಹಿಳೆಯನ್ನು ಆರತಿ ಎಂದು ಗುರುತಿಸಲಾಗಿದ್ದ, ಆಕೆಯನ್ನೀಗ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆತ ಕಚ್ಚಿ ತುಂಡು ಮಾಡಿದ ಮೂಗಿನ ಭಾಗ ಲಭ್ಯವಾಗಿಲ್ಲ.

ತುಂಡಾಗಿರುವ ಮೂಗನ್ನು ಸರ್ಜರಿ ಮೂಲಕ ಜೋಡಿಸಬಹುದಿತ್ತು. ಮತ್ತೀಗ ಆಕೆಗೆ ಕೃತಕ ಮೂಗನ್ನು ಅಳವಡಿಸಬೇಕಾಗಬಹುದು. ಅದು ಬಹಳ ದುಬಾರಿ ಪ್ರಕ್ರಿಯೆ. ಹೆಚ್ಚಿನ ಸರಕಾರಿ ಆಸ್ಪತ್ರೆಗಳಲ್ಲಿ ಇದು ಲಭ್ಯವಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಮದ್ಯ ವ್ಯಸನಿಯಾಗಿರುವ ಆತ ಸದಾ ಆಕೆಗೆ ಕಿರುಕುಳ ಕೊಡುತ್ತಲೇ ಇರುತ್ತಿದ್ದ ಎಂದು ತಿಳಿದು ಬಂದಿದೆ.

ಪ್ರಾಥಮಿಕ ತನಿಖೆಗಳ ಪ್ರಕಾರ, ಮಹಿಳೆ ಪಕ್ಕದೂರಿನಲ್ಲಿ ವಾಸವಾಗಿರುವ ತನ್ನ ತಂದೆ-ತಾಯಿಯನ್ನು ನೋಡಿಕೊಂಡು ಬರುತ್ತೇನೆ ಎಂದು ಪತಿಯಲ್ಲಿ ಹೇಳಿದ್ದಳು. ಇದೇ ಕಾರಣಕ್ಕೆ ಇಬ್ಬರ ನಡುವೆ ಸೋಮವಾರ ಮುಂಜಾನೆ ಜಗಳವಾಗಿದೆ. ಕೋಪದ ಭರದಲ್ಲಿ ಆಕೆಯ ಮೂಗನ್ನೇ ಕಚ್ಚಿ ಹಾಕಿದ ಆತ ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ, ಎಂದು ನಗರದ ಹೆಚ್ಚುವರಿ ಎಸ್ಪಿ ಜಿತೇಂದ್ರ ಕುಮಾರ್ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ