ವಿಜಯವಾಡ: ಕುಡಿದ ನಶೆಯಲ್ಲಿದ್ದ ದುರುಳ ಪುತ್ರನೊಬ್ಬ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ 86 ವರ್ಷದ ವೃದ್ದ ತಾಯಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪೈಶಾಚಿಕ ಕೃತ್ಯ ಕೃಷ್ಣ ಜಿಲ್ಲೆಯ ವುಯ್ಯುರು ಎಂಬಲ್ಲಿ ನಡೆದಿದೆ.
ಮೂರು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪಾಪಿ ಪುತ್ರನ ಘನಂದಾರಿ ಕೃತ್ಯದ ಬಗ್ಗೆ ವೃದ್ದೆ ನೆರೆಹೊರೆಯವರ ಬಳಿ ಹೇಳಿಕೊಂಡಿದ್ದು, ಅವರೇ ಮುಂದೆ ನಿಂತು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪಾಪಿ ಪುತ್ರ ಪರಾರಿಯಾಗಿದ್ದಾನೆ.
ವೃದ್ದೆಯ ಮೂರು ಮಕ್ಕಳ ಪೈಕಿ ಕಿರಿಯ ಮಗ ಈ ಕೃತ್ಯ ಎಸಗಿದ್ದಾನೆ.ಕೃತ್ಯ ನಡೆದ ಸಮಯದಲ್ಲಿ ಆಕೆಯ ಮತ್ತಿಬ್ಬರು ಗಂಡು ಮಕ್ಕಳು ಮನೆಯಲ್ಲಿರಲಿಲ್ಲ. ಕುಡಿದ ಅಮಲಿನಲ್ಲಿ ಆತ ಅನಾರೋಗ್ಯ ಮತ್ತು ವೃದ್ಧಾಪ್ಯದಿಂದಾಗಿ ಹಾಸಿಗೆ ಹಿಡಿದಿದ್ದ ತಾಯಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದರು.
ವೃದ್ದೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದನ್ನು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಸಂತ್ರಸ್ಥೆ ನೀಡಿದ ಹೇಳಿಕೆಯ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಶೀಘ್ರದಲ್ಲಿಯೇ ಆರೋಪಿಯನ್ನು ಬಂಧಿಸುತ್ತೇವೆ ಎಂದು ವುಯ್ಯುರು ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಪಿ.ಕಾಶಿ ವಿಶ್ವನಾಥ್ ಅವರ ತಿಳಿಸಿದ್ದಾರೆ.
ಮೂರು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪಾಪಿ ಪುತ್ರನ ಘನಂದಾರಿ ಕೃತ್ಯದ ಬಗ್ಗೆ ವೃದ್ದೆ ನೆರೆಹೊರೆಯವರ ಬಳಿ ಹೇಳಿಕೊಂಡಿದ್ದು, ಅವರೇ ಮುಂದೆ ನಿಂತು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪಾಪಿ ಪುತ್ರ ಪರಾರಿಯಾಗಿದ್ದಾನೆ.
ವೃದ್ದೆಯ ಮೂರು ಮಕ್ಕಳ ಪೈಕಿ ಕಿರಿಯ ಮಗ ಈ ಕೃತ್ಯ ಎಸಗಿದ್ದಾನೆ.ಕೃತ್ಯ ನಡೆದ ಸಮಯದಲ್ಲಿ ಆಕೆಯ ಮತ್ತಿಬ್ಬರು ಗಂಡು ಮಕ್ಕಳು ಮನೆಯಲ್ಲಿರಲಿಲ್ಲ. ಕುಡಿದ ಅಮಲಿನಲ್ಲಿ ಆತ ಅನಾರೋಗ್ಯ ಮತ್ತು ವೃದ್ಧಾಪ್ಯದಿಂದಾಗಿ ಹಾಸಿಗೆ ಹಿಡಿದಿದ್ದ ತಾಯಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದರು.
ವೃದ್ದೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದನ್ನು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಸಂತ್ರಸ್ಥೆ ನೀಡಿದ ಹೇಳಿಕೆಯ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಶೀಘ್ರದಲ್ಲಿಯೇ ಆರೋಪಿಯನ್ನು ಬಂಧಿಸುತ್ತೇವೆ ಎಂದು ವುಯ್ಯುರು ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಪಿ.ಕಾಶಿ ವಿಶ್ವನಾಥ್ ಅವರ ತಿಳಿಸಿದ್ದಾರೆ.