ಆ್ಯಪ್ನಗರ

ಕಾರಿನ ಮುಂದೆ ಸ್ಕೂಟಿ ನಿಲ್ಲಿಸಿದ್ದಕ್ಕೆ ಗುಂಡು ಹೊಡೆದ!

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಗುಲ್ಜಾರ್ ( 28) ಜಾವೆದ್ (34) ಎಂಬಿಬ್ಬರನ್ನು ಬಂಧಿಸಲಾಗಿದೆ.

Navbharat Times 12 Feb 2019, 11:02 am
ಹೊಸದಿಲ್ಲಿ: ಕಾರ್ ಮುಂದೆ ಸ್ಕೂಟಿ ನಿಲ್ಲಿಸಿದ್ದಾರೆ ಎಂಬ ಕ್ಷುಲ್ಲಕ ಕಾರಣಕ್ಕೆ ಗುಂಡಿನ ದಾಳಿ ನಡೆಸಿದ ಬೆಚ್ಚಿ ಬೀಳಿಸುವ ಪ್ರಸಂಗ ರವಿವಾರ ರಾತ್ರಿ ಹೊಸದಿಲ್ಲಿಯಲ್ಲಿ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪಹಚಾನ್ ಜುಬೈರ್ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
Vijaya Karnataka Web Shoot


ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಗುಲ್ಜಾರ್ ( 28) ಜಾವೆದ್ (34) ಎಂಬಿಬ್ಬರನ್ನು ಬಂಧಿಸಲಾಗಿದೆ.

ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ ಜುಬೈರ್ ಪರಿವಾರ ಸದರ್ ಬಜಾರ್ ಪ್ರದೇಶದಲ್ಲಿ ವಾಸಿಸುತ್ತದೆ. ಅಂದು ರಾತ್ರಿ ಅವರು ತಮ್ಮ ಸ್ನೇಹಿತ ಬಿಲಾಲ್ ಜತೆ ಸ್ಕೂಟಿಯನ್ನೇರಿ ಅಜಮೇರಿ ಪ್ರದೇಶಕ್ಕೆ ಹೋಗಿದ್ದರು. ಅಲ್ಲಿ ಕಾರಿನಲ್ಲಿ ಕುಳಿತಿದ್ದ ಇಬ್ಬರು ಯುವಕರು ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಸ್ಕೂಟಿ ಮುಂದೆ ಕಾರ್ ನಿಲ್ಲಿಸುವ ಮೂಲಕ ಅವರಿಗೆ ಜುಬೈದ್ ವಿರೋಧ ವ್ಯಕ್ತಪಡಿಸಿದ. ಇದಕ್ಕೆ ಕೋಪಗೊಂಡ ಗುಲ್ಜಾರ್ ಪಿಸ್ತೂಲಿನಿಂದ ಜುಬೈರ್‌ಗೆ ಗುಂಡು ಹೊಡೆದಿದ್ದು ಅದಾತನ ಕಾಲಿಗೆ ತಗುಲಿದೆ. ತಕ್ಷಣ ಗಾಡಿಯ ಸಂಖ್ಯೆ ಗಮನಿಸಿಕೊಂಡ ಬಿಲಾಲ್ ಪೊಲೀಸರಿಗೆ ದೂರು ಸಲ್ಲಿಸಿದ್ದಾನೆ.

ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಮತ್ತು ದಾಳಿಗೆ ಬಳಸಿದ್ದ ಪಿಸ್ತೂಲನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ಗಾಯಾಳು ಗುಲ್ಜಾರ್ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ