ಆ್ಯಪ್ನಗರ

ಕೇವಲ 200 ರೂ. ಸಾಲಕ್ಕಾಗಿ ಗುಂಡಿಕ್ಕಿ ವ್ಯಕ್ತಿಯ ಹತ್ಯೆ..! ಪರಾರಿಯಾದ ಆರೋಪಿಗೆ ಪೊಲೀಸರ ಶೋಧ

ಕೇವಲ 200 ರೂ. ಸಾಲ ನೀಡಲ್ಲ ಎಂದಿದ್ದಕ್ಕೆ ವ್ಯಕ್ತಿಯನ್ನೇ ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮಾದಕ ವ್ಯಸನಿಯಾಗಿರುವ ಆರೋಪಿ ಕೊಲೆ ಬಳಿಕ ಪರಾರಿಯಾಗಿದ್ದು, ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

Vijaya Karnataka Web 29 Nov 2020, 6:48 pm
ಅಲಿಗರ್‌ (ಉತ್ತರ ಪ್ರದೇಶ): ವ್ಯಕ್ತಿಯೊಬ್ಬನಿಗೆ 200 ರೂ. ಸಾಲ ನೀಡಲು ನಿರಾಕರಿಸಿದ್ದಕ್ಕೆ ಸಾರ್ವಜನಿಕರ ಎದುರಲ್ಲಿಯೇ 30 ವರ್ಷದ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಅಲಿಗರ್‌ನ ಸಿವಿಲ್‌ ಲೈನ್ಸ್‌ ಪ್ರದೇಶದಲ್ಲಿ ನಡೆದಿದೆ.
Vijaya Karnataka Web gun


ಹತ್ಯೆಗೀಡಾದ ವ್ಯಕ್ತಿ ಅನ್ಸಾರ್ ಅಹ್ಮದ್ ಎಂದು ಗುರುತಿಸಲಾಗಿದೆ. ಸಿವಿಲ್ ಲೈನ್ಸ್ ಪೊಲೀಸ್ ಠಾಣೆ ವ್ಯಾಪ್ತಿಯ ಶಂಶಾದ್ ಮಾರುಕಟ್ಟೆಯಲ್ಲಿ ಟೈರ್‌ ರಿಪೇರಿ ಅಂಗಡಿಯೊಂದನ್ನು ಹೊಂದಿದ್ದು, ಮೂವರು ಮಕ್ಕಳನ್ನು ಹೊಂದಿದ್ದ ಎನ್ನಲಾಗಿದೆ. ಶನಿವಾರ ಘಟನೆ ನಡೆದಿದ್ದು, ಆಸಿಫ್ ಎಂಬಾತ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಮಾದಕ ವ್ಯಸನಿಯಾಗಿದ್ದು, ಅಪರಾಧ ಎಸಗಿದ ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ನಗರ) ಅಭಿಷೇಕ್ ಕುಮಾರ್ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆಸಿಫ್ ತನ್ನ ಬೈಕ್‌ ಇಟ್ಟುಕೊಂಡು ಸಾಲ ನೀಡುವಂತೆ ಅಹ್ಮದ್‌ ಬಳಿ ಕೇಳಿದ್ದಾನೆ. ಆದರೆ, ಅಹ್ಮದ್ ಸಾಲ ನೀಡಲು ನಿರಾಕರಿಸಿದ್ದಾನೆ.

ಉತ್ತರ ಪ್ರದೇಶದಲ್ಲಿ ಲವ್‌ ಜಿಹಾದ್ ವಿರೋಧಿ‌ ಕಾನೂನಿನಡಿ ಮೊದಲ ಕೇಸ್‌ ದಾಖಲು..!

ಅದಾದ ಬಳಿಕ ಆರೋಪಿ ಮತ್ತೆ ಅಹ್ಮದ್‌ನ ಅಂಗಡಿಗೆ ಬಂದು ಅವನಿಂದ 200 ರೂ. ಬೇಡಿಕೆ ಇಟ್ಟಿದ್ದಾನೆ. ಆದರೆ, ಅಹ್ಮದ್‌ ದುಡ್ಡು ನೀಡಲು ನಿರಾಕರಿಸಿದಾಗ ಆಸಿಫ್ ತನ್ನ ಜೇಬಿನಿಂದ ನಾಡ ಪಿಸ್ತೂಲು ತೆಗೆದು ಜನರ ಮುಂದೆಯೇ ತಲೆಗೆ ಗುಂಡು ಹಾರಿಸಿದ್ದಾನೆ. ಬಳಿಕ ತನ್ನ ಬೈಕ್‌ನಲ್ಲಿ ಆಸಿಫ್‌ ಪರಾರಿಯಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಲವ್ ಜಿಹಾದ್ ವಿರುದ್ಧ ಸುಗ್ರೀವಾಜ್ಞೆ ಹೊರಡಿಸಿದ ಯುಪಿ: ಒತ್ತಾಯದ ಮತಾಂತರಕ್ಕೆ ಕಡಿವಾಣ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ