ಆ್ಯಪ್ನಗರ

ಎನ್‌ಎಸ್‌ಎ ಅಜಿತ್ ದೋವಲ್ ನಿವಾಸಕ್ಕೆ ನುಗ್ಗಲು ಯತ್ನ: ವ್ಯಕ್ತಿ ಬಂಧನ

ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಅವರ ದಿಲ್ಲಿಯಲ್ಲಿರುವ ನಿವಾಸಕ್ಕೆ ವ್ಯಕ್ತಿಯೊಬ್ಬ ಕಾರು ನುಗ್ಗಿಸಲು ಪ್ರಯತ್ನ ಮಾಡಿದ್ದಾನೆ. ಈ ವೇಳೆ ಭದ್ರತೆಗೆ ನಿಯೋಜಿಸಿದ್ದ ಪಡೆಗಳು ಆತನನ್ನು ವಶಕ್ಕೆ ಪಡೆದುಕೊಂಡಿವೆ. ಆತ ಮಾನಸಿಕ ಅಸ್ವಸ್ಥನಂತೆ ಕಾಣಿಸುತ್ತಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

Vijaya Karnataka Web 16 Feb 2022, 12:44 pm

ಹೈಲೈಟ್ಸ್‌:

  • ದಿಲ್ಲಿಯಲ್ಲಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ನಿವಾಸ
  • ಎನ್‌ಎಸ್‌ಎ ದೋವಲ್ ಮನೆಗೆ ಕಾರು ನುಗ್ಗಿಸಲು ಪ್ರಯತ್ನಿಸಿದ ವ್ಯಕ್ತಿ ಬಂಧನ
  • ವ್ಯಕ್ತಿ ಮಾನಸಿಕ ಅಸ್ವಸ್ಥನಂತೆ ಕಂಡು ಬರುತ್ತಿದ್ದಾನೆ ಎಂದ ದಿಲ್ಲಿ ಪೊಲೀಸರು

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Ajit Doval
ಹೊಸದಿಲ್ಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಮನೆಗೆ ನುಗ್ಗಲು ಪ್ರಯತ್ನಿಸಿದ ವ್ಯಕ್ತಿಯೊಬ್ಬನನ್ನು ದಿಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಬುಧವಾರ ಕಾರ್‌ನಲ್ಲಿ ಬಂದ ವ್ಯಕ್ತಿಯೊಬ್ಬ ದೋವಲ್ ಅವರ ನಿವಾಸಕ್ಕೆ ಪ್ರವೇಶಿಸಲು ಪ್ರಯತ್ನಿಸಿದ್ದಾನೆ. ಆತನ ಕಾರನ್ನು ತಡೆದ ಭದ್ರತಾ ಸಿಬ್ಬಂದಿ, ವಶಕ್ಕೆ ಪಡೆದುಕೊಂಡಿದ್ದಾರೆ.
ವ್ಯಕ್ತಿಯನ್ನು ದಿಲ್ಲಿ ಪೊಲೀಸರ ವಿಶೇಷ ಘಟಕ ವಿಚಾರಣೆಗೆ ಒಳಪಡಿಸಿದೆ. ಆ ವ್ಯಕ್ತಿ ಬಾಡಿಗೆ ಕಾರೊಂದನ್ನು ಬಳಸಿ ಚಾಲನೆ ಮಾಡುತ್ತಿದ್ದ. ತನ್ನ ದೇಹದೊಳಗೆ ಯಾರೋ ಒಬ್ಬರು ಚಿಪ್ ಅಳವಡಿಸಿದ್ದು, ತನ್ನನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವಿಚಾರಣೆ ವೇಳೆ ಆತ ಪೊಲೀಸರಿಗೆ ತಿಳಿಸಿದ್ದಾನೆ. ಆತ ಮಾನಸಿಕವಾಗಿ ಅಸ್ವಸ್ಥನಾಗಿರುವಂತೆ ಕಾಣಿಸುತ್ತಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

"ಪ್ರಾಥಮಿಕ ತನಿಖೆಗಳ ಪ್ರಕಾರ, ಆ ವ್ಯಕ್ತಿ ಮಾನಸಿಕ ಅಸ್ವಸ್ಥನ ಹಾಗೆ ಕಾಣಿಸುತ್ತಿದ್ದಾನೆ" ಎಂದು ದಿಲ್ಲಿ ಪೊಲೀಸರು ಹೇಳಿಕೆ ನೀಡಿದ್ದಾರೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಅವರಿಗೆ 'ಝೆಡ್ ಪ್ಲಸ್' ಭದ್ರತೆ ಒದಗಿಸಲಾಗಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ದೋವಲ್ ಅವರ ನಿವಾಸಕ್ಕೆ ಭಾರಿ ಭದ್ರತೆ ನಿಯೋಜಿಸಿದೆ. ಮಾನಸಿಕ ಅಸ್ಥಿರತೆ ಉಳ್ಳವನಂತೆ ಕಾಣುವ ಈ ವ್ಯಕ್ತಿ ನಿವಾಸದ ಮುಂಬಾಗಿಲಿನ ಗೇಟಿನಿಂದ ನುಗ್ಗಲು ಪ್ರಯತ್ನಿಸಿದ್ದಾನೆ. ಆತ ಕೆಲವು ವಿಚಾರಗಳ ಬಗ್ಗೆ ಅನೇಕ ದೂರುಗಳನ್ನು ದಾಖಲು ಮಾಡಿದ್ದು, ಅದರ ವಿಚಾರವಾಗಿ ಎನ್‌ಎಸ್‌ಎ ದೋವಲ್ ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ