ಆ್ಯಪ್ನಗರ

ಡಾ. ಹಂಪನಾಗೆ ಪತ್ರ ಬರೆದು ವಿಷಾದಿಸಿದ ಮಂಡ್ಯ ಎಸ್‌ಪಿ; ಪಿಎಸ್‌ಐ ವಿರುದ್ಧ ತನಿಖೆಗೆ ಸೂಚನೆ

ಹಿರಿಯ ಸಾಹಿತಿ, ಭಾಷಾ ತಜ್ಞ ಡಾ ಹಂಪನಾ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಕ್ಕೆ ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ ಪರಶುರಾಮ್‌ ವಿಷಾದ ವ್ಯಕ್ತಪಡಿಸಿದ್ದರು, ಈ ಸಂಬಂಧ ಡಾ ಹಂ.ಪ.ನಾಗರಾಜಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಅದಲ್ಲದೇ ಪಿಎಸ್‌ಐ ವಿರುದ್ಧ ವಿಚಾರಣೆ ನಡೆಸಲು ಡಿವೈಎಸ್‌ಪಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

Vijaya Karnataka Web 24 Jan 2021, 6:20 pm
ಮಂಡ್ಯ: ಹಿರಿಯ ಸಾಹಿತಿ ನಾಡೋಜ ಡಾ.ಹಂ.ಪ.ನಾಗರಾಜಯ್ಯ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ ಘಟನೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಕೆ.ಪರಶುರಾಮ್ ಅವರು ಡಾ.ಹಂಪನಾ ಅವರಿಗೆ ಪತ್ರ ಬರೆದು ವಿಷಾದ ವ್ಯಕ್ತಪಡಿಸಿದ್ದಾರೆ.
Vijaya Karnataka Web Hampna
ಡಾ.ಹಂಪನಾ ಅವರಿಗೆ ಮಂಡ್ಯ ಎಸ್‌ಪಿ ಬರೆದಿರುವ ಪತ್ರ


ಹಂಪನಾ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ ಅಧಿಕಾರಿ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮಂಡ್ಯ ಉಪವಿಭಾಗ ಡಿವೈಎಸ್‌ಪಿ ಅವರಿಗೆ ಸೂಚನೆ ನೀಡಲಾಗಿದ್ದು, ವಿಚಾರಣಾ ವರದಿಯನ್ನಾಧರಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪತ್ರದಲ್ಲೇನಿದೆ..?
ಮಂಡ್ಯದಲ್ಲಿ ನಡೆದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ತಾವು ಪ್ರಧಾನ ಮಂತ್ರಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುತ್ತೀರಿ ಹಾಗೂ ಜನತೆಗೆ ತಪ್ಪು ಸಂದೇಶ ನೀಡಿರುತ್ತೀರೆಂದು ನಿಮ್ಮ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಾ.ಸಿ.ರವಿ ಎಂಬುವರು ಜ.19ರಂದು ಮಂಡ್ಯ ಪಶ್ಚಿಮ ಠಾಣೆಗೆ ದೂರು ನೀಡಿದ್ದರು. ದೂರು ಅರ್ಜಿ ಸ್ವೀಕರಿಸಿದ ಪಿಎಸ್‌ಐ ಜ.20ರಂದು ದೂರವಾಣಿ ಮೂಲಕ ನಿಮ್ಮೊಂದಿಗೆ ಮಾತನಾಡಿ ಅರ್ಜಿ ವಿವರ ತಿಳಿಸಿದ್ದಾರೆ. ಅದರಂತೆ ತಾವೂ ಜನವರಿ 21ರಂದು ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದ ಮೇರೆಗೆ ಅರ್ಜಿಯ ವಿಚಾರಣೆಯನ್ನು ಮುಕ್ತಾಯಗೊಳಿಸಲಾಗಿದೆ.
ಹಂಪನಾರಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಸಾಣೇಹಳ್ಳಿ ಶ್ರೀತಮ್ಮ ವಿರುದ್ಧ ದಾಖಲಾದ ದೂರು ಅರ್ಜಿಯ ವಿವರವನ್ನು ಹಾಗೂ ತಮ್ಮನ್ನು ಠಾಣೆಗೆ ಕರೆಸುವ ವಿಚಾರವನ್ನು ಇಲಾಖೆಯ ಕೆಳಹಂತದ ಅಕಾರಿಗಳು ನನಗಾಗಲಿ ಅಥವಾ ಇಲಾಖೆಯ ಇತರ ಹಿರಿಯ ಅಧಿಕಾರಿಗಳಿಗೆ ಯಾವುದೇ ಮಾಹಿತಿ ನೀಡಿರುವುದಿಲ್ಲ. ಹಿರಿಯ ವಿದ್ವಾಂಸರು ಹಾಗೂ ಹಿರಿಯ ನಾಗರಿಕರಾದ ತಮ್ಮನ್ನು ಕೆಳಹಂತದ ಅಧಿಕಾರಿಗಳು ಠಾಣೆಗೆ ಬರುವಂತೆ ಮಾಡಿ ತಮಗೆ ಅನಗತ್ಯ ತೊಂದರೆ ಮಾಡಿದ್ದು, ಮಾನಸಿಕವಾಗಿ ಘಾಸಿಗೊಳ್ಳುವಂತೆ ಮಾಡಿರುವುದಕ್ಕೆ ವೈಯಕ್ತಿಕವಾಗಿ ಹಾಗೂ ಇಲಾಖೆಯ ಪರವಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಎಸ್‌ಪಿ ಕೆ ಪರಶುರಾಮ್‌ ತಮ್ಮ ಪತ್ರದಲ್ಲಿ ಹೇಳಿದ್ದಾರೆ.
ಆತ್ಮನಿರೀಕ್ಷೆಯ ಅಭಾವದಿಂದ ಪ್ರಜಾಪ್ರಭುತ್ವಕ್ಕೆ ಕೊಡಲಿಯೇಟು: ಬರಗೂರು ರಾಮಚಂದ್ರಪ್ಪ ವಿಷಾದಶಾಸಕ ಡಾ.ಕೆ.ಅನ್ನದಾನಿ ಖಂಡನೆ
ಮೇರು ಸಾಹಿತಿ, ವಿದ್ವಾಂಸ ಹಾಗೂ ಭಾಷಾ ತಜ್ಞರಾದ ನಾಡೋಜ ಡಾ.ಹಂಪನಾ ಅವರನ್ನು ಪೊಲೀಸರು ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವುದನ್ನು ಮಳವಳ್ಳಿ ಕ್ಷೇತ್ರದ ಶಾಸಕ ಡಾ.ಕೆ.ಅನ್ನದಾನಿ ಖಂಡಿಸಿದ್ದಾರೆ. ನಾಡಿನ ಗೌರವಾನ್ವಿತ ವ್ಯಕ್ತಿಯನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸುವಂತಹ ಉದ್ಧಟತನ ಪ್ರದರ್ಶಿಸಿದ ಅಧಿಕಾರಿಗಳ ವಿರುದ್ಧ ಪೊಲೀಸ್ ಇಲಾಖೆಯ ಮೇಲಧಿಕಾರಿಗಳು ಕ್ರಮ ಜರುಗಿಸಬೇಕು ಹಾಗೂ ಡಾ.ಹಂಪನಾ ಅವರಲ್ಲಿ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದ್ದಾರೆ.
ಸಾಹಿತಿ ಹಂ.ಪ ನಾಗರಾಜಯ್ಯ ವಿಚಾರಣೆ, ಪೊಲೀಸರ ಕ್ರಮಕ್ಕೆ ಸುರ್ಜೇವಾಲ ಕಿಡಿಠಾಣೆಗೆ ಕರೆಸಿ ವಿಚಾರಣೆ ಮಾಡಿರುವುದು ಡಾ.ಹಂಪನಾ ಅವರಿಗೆ ಮಾತ್ರವಲ್ಲ, ಇಡೀ ಸಾರಸ್ವತ ಲೋಕಕ್ಕೆ ಮಾಡಿದ ಅಪಮಾನ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಚೌಕಟ್ಟಿನಲ್ಲಿ ಯಾರು ಯಾರನ್ನು ಬೇಕಾದರೂ ಟೀಕಿಸಬಹುದು. ಅದು ತಪ್ಪಲ್ಲಘ. ಆದರೆ, ಅಸಾಂವಿಧಾನಿಕ ಪದಗಳ ಬಳಕೆ ತಪ್ಪು. ಈ ಪ್ರಕರಣದಲ್ಲಿ ಹಂಪನಾ ಅವರು ಅಸಾಂವಿಧಾನಿಕ ಪದಗಳನ್ನು ಬಳಸಿಲ್ಲ. ಭಾಷೆಯ ಮೇಲೆ ಹಿಡಿತ ಹೊಂದಿರುವ, ಅಪಾರ ಭಾಷಾಜ್ಞಾನ ಹೊಂದಿರುವ ಸಾಹಿತಿಗೆ ಏನು ಮಾಡನಾಡಬೇಕು ಎಂಬುದನ್ನು ಹೇಳಿಕೊಡಬೇಕೇ ಎಂದು ಅನ್ನದಾನಿ ಪ್ರಶ್ನಿಸಿದ್ದಾರೆ.

ತಾವು ಕೂಡ ಡಾ.ಹಂಪನಾ ಅವರ ಮಾಗದರ್ಶನದಲ್ಲೇ ಸಂಶೋಧನಾ ಪ್ರಬಂಧ ಮಂಡಿಸಿ, ಡಾಕ್ಟರೇಟ್ ಪದವಿ ಪಡೆದಿದ್ದೇನೆ. ನನ್ನಂತಹ ಎಷ್ಟೋ ಮಂದಿಗೆ ಅವರು ಮಾರ್ಗದರ್ಶನ ನೀಡಿ, ಸಂಶೋಧನೆ ನಡೆಸಲು ನೆರವಾಗಿದ್ದಾರೆ. ಇಂತಹ ಹಿರಿಯ ಸಾಹಿತಿಯನ್ನು ಅಪಮಾನ ಮಾಡಿರುವುದು ಅಕ್ಷಮ್ಯ ಅಪರಾಧ ಎಂದು ಪತ್ರಿಕಾ ಹೇಳಿಕೆಯಲ್ಲಿ ಶಾಸಕ ಅನ್ನದಾನಿ ಅಸಮಧಾನವನ್ನು ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ