ಗೋವಾ: ರಫೇಲ್ ವಿವಾದ ಕುರಿತು ಆಗಿನ ರಕ್ಷಣಾ ಸಚಿವ, ಹಾಲಿ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಹಲವಾರು ವಿಷಯಗಳನ್ನು ಹಂಚಿಕೊಂಡರು ಎಂದು ಹೇಳಿಕೆ ನೀಡಿದ್ದ ರಾಹುಲ್ ಗಾಂಧಿಗೆ ಮನೋಹರ್ ಪರಿಕ್ಕರ್ ತಿರುಗೇಟು ನೀಡಿದ್ದಾರೆ.
ತೀವ್ರ ಅನಾರೋಗ್ಯಕ್ಕೊಳಗಾಗಿರುವ ಮನೋಹರ್ ಪರಿಕ್ಕರ್ ಅವರನ್ನು ಮಂಗಳವಾರ ಭೇಟಿ ಮಾಡಿದ ರಾಹುಲ್ ಗಾಂಧಿ, ಕುಶಲ ವಿಚಾರಿಸಿದರು.
ನಂತರ ಸುದ್ದಿಗೋಷ್ಠಿ ನಡೆಸಿದ್ದ ರಾಹುಲ್ ಗಾಂಧಿ, ರಫೇಲ್ ವಿವಾದ ಕುರಿತು ಮನೋಹರ್ ಪರಿಕ್ಕರ್ ನನ್ನ ಜತೆ ಚರ್ಚಿಸಿದ್ದರು ಎಂದು ಹೇಳಿಕೆ ನೀಡಿದ್ದರು.
ಇದಕ್ಕೆ ಪತ್ರದ ಮೂಲಕ ಪ್ರತ್ಯುತ್ತರ ನೀಡಿರುವ ಮನೋಹರ್ ಪರಿಕ್ಕರ್, ಜೀವ ಹಿಂಡುವ ಕಾಯಿಲೆಯಿಂದ ಬಳಲುತ್ತಿರುವ ನನ್ನನ್ನು ಭೇಟಿ ಮಾಡಿ, ಕುಶಲ ವಿಚಾರಿಸಿದ ನಂತರ ಮಾಧ್ಯಮಗಳ ಮುಂದೆ ಬೇರೆಯದೇ ಹೇಳಿಕೆ ನೀಡುವ ಮೂಲಕ ರಾಹುಲ್ ಗಾಂಧಿ, ನೀವು ಅತ್ಯಂತ ಕೀಳಮಟ್ಟಕ್ಕೆ ಇಳಿದಿದ್ದೀರಾ ಎಂದು ಸ್ಪಷ್ಟಪಡಿಸಿದ್ದಾರೆ.
ಅಸ್ವಸ್ಥ ವ್ಯಕ್ತಿಯನ್ನು ಭೇಟಿ ಮಾಡಿ, ಅದರಿಂದ ರಾಜಕೀಯ ಲಾಭ ಮಾಡಿಕೊಳ್ಳುವ ಅವಕಾಶವಾದಿ ರಾಹುಲ್, ನಿಮ್ಮ ನಡೆ ಮೊದಲೇ ಅಸ್ವಸ್ಥಗೊಂಡಿರುವ ನನೆಗೆ ಮತ್ತಷ್ಟು ಬೇಸರ ತರಿಸಿದೆ ಎಂದು ಪತ್ರದಲ್ಲಿ ಪರಿಕ್ಕರ್ ಟೀಕಿಸಿದ್ದಾರೆ.
ತೀವ್ರ ಅನಾರೋಗ್ಯಕ್ಕೊಳಗಾಗಿರುವ ಮನೋಹರ್ ಪರಿಕ್ಕರ್ ಅವರನ್ನು ಮಂಗಳವಾರ ಭೇಟಿ ಮಾಡಿದ ರಾಹುಲ್ ಗಾಂಧಿ, ಕುಶಲ ವಿಚಾರಿಸಿದರು.
ನಂತರ ಸುದ್ದಿಗೋಷ್ಠಿ ನಡೆಸಿದ್ದ ರಾಹುಲ್ ಗಾಂಧಿ, ರಫೇಲ್ ವಿವಾದ ಕುರಿತು ಮನೋಹರ್ ಪರಿಕ್ಕರ್ ನನ್ನ ಜತೆ ಚರ್ಚಿಸಿದ್ದರು ಎಂದು ಹೇಳಿಕೆ ನೀಡಿದ್ದರು.
ಇದಕ್ಕೆ ಪತ್ರದ ಮೂಲಕ ಪ್ರತ್ಯುತ್ತರ ನೀಡಿರುವ ಮನೋಹರ್ ಪರಿಕ್ಕರ್, ಜೀವ ಹಿಂಡುವ ಕಾಯಿಲೆಯಿಂದ ಬಳಲುತ್ತಿರುವ ನನ್ನನ್ನು ಭೇಟಿ ಮಾಡಿ, ಕುಶಲ ವಿಚಾರಿಸಿದ ನಂತರ ಮಾಧ್ಯಮಗಳ ಮುಂದೆ ಬೇರೆಯದೇ ಹೇಳಿಕೆ ನೀಡುವ ಮೂಲಕ ರಾಹುಲ್ ಗಾಂಧಿ, ನೀವು ಅತ್ಯಂತ ಕೀಳಮಟ್ಟಕ್ಕೆ ಇಳಿದಿದ್ದೀರಾ ಎಂದು ಸ್ಪಷ್ಟಪಡಿಸಿದ್ದಾರೆ.
ಅಸ್ವಸ್ಥ ವ್ಯಕ್ತಿಯನ್ನು ಭೇಟಿ ಮಾಡಿ, ಅದರಿಂದ ರಾಜಕೀಯ ಲಾಭ ಮಾಡಿಕೊಳ್ಳುವ ಅವಕಾಶವಾದಿ ರಾಹುಲ್, ನಿಮ್ಮ ನಡೆ ಮೊದಲೇ ಅಸ್ವಸ್ಥಗೊಂಡಿರುವ ನನೆಗೆ ಮತ್ತಷ್ಟು ಬೇಸರ ತರಿಸಿದೆ ಎಂದು ಪತ್ರದಲ್ಲಿ ಪರಿಕ್ಕರ್ ಟೀಕಿಸಿದ್ದಾರೆ.