ಆ್ಯಪ್ನಗರ

ಮಹಾರಾಷ್ಟ್ರದ ಧುಲೆಯಲ್ಲಿ ಭೀಕರ ಅಪಘಾತ: 11 ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ

ಸರಕಾರಿ ಬಸ್‌ನಲ್ಲಿ ಆಗ ತಾನೇ ನಿದ್ದೆಗೆ ಜಾರುತ್ತಿದ್ದವರು ಮತ್ತೆ ಮೇಲೇಳಲೇ ಇಲ್ಲ.

Times Now 19 Aug 2019, 10:08 am
ನಾಗ್ಪುರ: ಕಂಟೈನರ್ ಟ್ರಕ್ - ಸರಕಾರಿ ಬಸ್ ಡಿಕ್ಕಿ ಡಿಕ್ಕಿಯಾಗಿ 11 ಜನ ಸಾವನ್ನಪ್ಪಿ, 15ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಧುಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ.
Vijaya Karnataka Web 1566183851-Dhule_Accident_1


ನಿಮ್ಗುಲ್ ಗ್ರಾಮದ ಬಳಿ ಶಹಾದಾ- ದೊಂಡೈಚಾ ರಸ್ತೆಯಲ್ಲಿ ರಾತ್ರಿ 10.30ರ ಸುಮಾರಿಗೆ ಈ ದುರ್ಘಟನೆ ನಡೆದಿದ್ದು, ಪರಷ್ಪರ ವಿರುದ್ಧ ದಿಕ್ಕುಗಳಿಂದ ಬಂದಿರುವ ವಾಹನಗಳೆರಡು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಾಲಕ ಸೇರಿದಂತೆ 11 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗಾಯಗೊಂಡವರನ್ನು ಧುಲೆಯಲ್ಲಿರುವ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಬಸ್ ಔರಂಗಾಬಾದ್‌ ಕಡೆ ಹೋಗುತ್ತಿತ್ತು ಎಂದು ತಿಳಿದುಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ