ಆ್ಯಪ್ನಗರ

ನಿದ್ದೆಗೆ ಜಾರಿದ ಚಾಲಕ: ಬಸ್ ನಾಲೆಗೆ ಉರುಳಿ 29 ಸಾವು, 16ಕ್ಕೂ ಹೆಚ್ಚು ಜನರಿಗೆ ಗಾಯ

ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಸ್ಥಳೀಯರು ಪೊಲೀಸರ ಜತೆ ಕೈ ಜೋಡಿಸಿದ್ದಾರೆ.

TIMESOFINDIA.COM 8 Jul 2019, 8:49 am
ಹೊಸದಿಲ್ಲಿ: ತಾಜ್ ಮಹಲ್ ನಗರ ಆಗ್ರಾದ ಬಳಿ ಯಮುನಾ ಎಕ್ಸ್‌ಪ್ರೆಸ್ ವೇನಲ್ಲಿ ಸೋಮವಾರ ನಸುಕಿನ ಜಾವ ಭೀಕರ ದುರಂತ ಸಂಭವಿಸಿದ್ದು, ಉತ್ತರ ಪ್ರದೇಶ ಸಾರಿಗೆ ಸಂಸ್ಥೆಯ ಬಸ್ ಕಂದಕಕ್ಕೆ ಉರುಳಿ ಕನಿಷ್ಠ 29 ಜನ ಸಾವನ್ನಪ್ಪಿ, 16 ಜನ ಗಾಯಗೊಂಡಿದ್ದಾರೆ.
Vijaya Karnataka Web Accident



ಚಾಲಕ ನಿದ್ದೆಯ ಮಂಪರಿಗೆ ಜಾರಿದ್ದೇ ಈ ಭೀಕರ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ವರದಿಯಾಗಿದೆ. ನಸುಕಿನ ಜಾವ ಸುಮಾರು 4.15ರ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಮೇಲ್ಸೇತುವೆಗೆ ಡಿಕ್ಕಿ ಹೊಡೆದು 40 ಅಡಿ ಆಳದ ಕಂದಕಕ್ಕೆ ಉರುಳಿದೆ.

ಉತ್ತರ ಪ್ರದೇಶದ ರಾಜಧಾನಿ ಲಖನೌನಿಂದ ದಿಲ್ಲಿಗೆ ಹೋಗುತ್ತಿದ್ದ ಡಬಲ್ ಡೆಕ್ಕರ್ ಬಸ್‌ನಲ್ಲಿ ಸುಮಾರು 50 ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತದೆ.


ದುರ್ಘಟನೆಗೆ ತೀವ್ರ ದುಃಖ ವ್ಯಕ್ತ ಪಡಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಯ ಭರವಸೆ ನೀಡಿದ್ದಾರೆ.

ಸ್ಥಳೀಯರ ನೆರವಿನೊಂದಿಗೆ ಪೊಲೀಸರು ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ