ಆ್ಯಪ್ನಗರ

ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಭಾರತ ದಾಳಿಗೆ ಉಗ್ರರ ಸಾವು

ಭಾರತ ಮತ್ತು ಪಾಕಿಸ್ತಾನ ನಡುವೆ ಮುಸುಕಿನ ಗುದ್ದಾಟ ಜೋರಾಗಿ ಸಾಗಿದೆ. ಕೆಲವು ದಿನಗಳ ಹಿಂದೆಯೇ ಭಾರತೀಯ ಸೇನಾ ಯೋಧರ ಹೆಚ್ಚುವರಿ ತುಕಡಿಗಳನ್ನು ಕಣಿವೆ ರಾಜ್ಯಕ್ಕೆ ನಿಯೋಜಿಸಲಾಗಿದೆ. ಪರಿಸ್ಥಿತಿ ಬಿಗುವಿನಿಂದ ಕೂಡಿದೆ.

Vijaya Karnataka Web 3 Aug 2019, 10:33 pm
ಹೊಸದಿಲ್ಲಿ: ಉಗ್ರರ ವಿರುದ್ಧ ಹೋರಾಟ ನಡೆಸುತ್ತಿರುವ ಭಾರತ ಸೇನಾ ಯೋಧರು ಮತ್ತೊಂದು ಸರ್ಜಿಕಲ್‌ ಸ್ಟ್ರೈಕ್‌ ಮಾಡಿದ್ದು, ಉಗ್ರರು ಹತರಾಗಿದ್ದಾರೆ.
Vijaya Karnataka Web ಉಗ್ರ
ಉಗ್ರ


ಜಮ್ಮು ಕಾಶ್ಮೀರದಲ್ಲಿ ಹೆಚ್ಚುವರಿ ಸೇನೆ ನಿಯೋಜನೆ ಮಾಡಿರುವ ಬೆನ್ನಲ್ಲೇ ಭಾರತೀಯ ಯೋಧರು ಸರ್ಜಿಕಲ್‌ ಸ್ಟ್ರೈಕ್‌ ಮಾಡಿರುವುದು ಮಹತ್ವ ಪಡೆದುಕೊಂಡಿದೆ.

ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಉಗ್ರ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಯೋಧರು ದಾಳಿ ನಡೆಸಿದ್ದು 5 ರಿಂದ 7 ಉಗ್ರರು ಹತರಾಗಿದ್ದಾರೆ. ಜತೆಗೆ ಪಾಕಿಸ್ತಾನ ಯೋಧರೊಬ್ಬರು ಕೂಡ ಹತರಾಗಿದ್ದಾರೆ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ.

ಗಡಿ ನಿಯಂತ್ರಣ ರೇಖೆಯಿಂದ ಒಳ ನುಸುಳಲು ಪ್ರಯತ್ನ ನಡೆಸಲಾಗುತ್ತಿತ್ತು. ಅಲ್ಲದೇ ಅಮರನಾಥ ಯಾತ್ರೆ ವೇಳೆ ಯಾತ್ರಿಕರ ಮೇಲೆ ದಾಳಿ ನಡೆಸಲು ಸಂಚು ಕೂಡ ರೂಪಿಸಲಾಗಿತ್ತು.

ಈಗಾಗಲೇ ಹಲವಾರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಗಡಿ ನಿಯಂತ್ರಣ ರೇಖೆ ಬಳಿ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು, ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಾಗಿದೆ ಎಂದು ಭಾರತೀಯ ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಭಾರತೀಯ ಸೇನೆ ಕೆಲವು ಚಿತ್ರಗಳನ್ನು ಬಿಡುಗಡೆ ಮಾಡಿದೆ.

ಈ ನಡುವೆ ಕಳೆದ 36 ಗಂಟೆಗಳಿಂದ ಪಾಕಿಸ್ತಾನ ಕಣಿವೆ ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಲು, ಅಮರನಾಥ ಯಾತ್ರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಉಗ್ರರು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಕಳೆದ ಕೆಲವು ದಿನಗಳಿಂದ ನಿರಂತರ ಕಾರ್ಯಾಚರಣೆ ನಡೆಸಿದ ಯೋಧರು ಭಾರಿ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಂಡಿದ್ದಾರೆ. ಕೆಲವು ನುಸುಳುಕೋರರನ್ನು ಬಂಧಿಸಿದ್ದು ಅಮೆರಿಕದ ಸ್ನೈಪರ್‌ ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ