ಆ್ಯಪ್ನಗರ

ಪಂಜಾಬ್ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಅನಾಹುತ: ಅದೃಷ್ಟವಶಾತ್ ರೋಗಿಗಳು ಬಚಾವ್

ದಿಲ್ಲಿಯ ಕಟ್ಟಡವೊಂದರಲ್ಲಿ ಶುಕ್ರವಾರ ಸಂಜೆ ಭೀಕರ ಅಗ್ನಿ ಅನಾಹುತ ಸಂಭವಿಸಿದ ಬೆನ್ನಲ್ಲೇ, ಪಂಜಾಬ್‌ನ ಅಮೃತಸರದಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಶನಿವಾರ ಭಾರಿ ಬೆಂಕಿ ಅವಘಡ ಉಂಟಾಗಿದೆ. ಅದೃಷ್ಟವಶಾತ್ ಅಲ್ಲಿದ್ದ ಎಲ್ಲ ರೋಗಿಗಳನ್ನೂ ಸರಿಯಾದ ಸಮಯಕ್ಕೆ ಸ್ಥಳಾಂತರ ಮಾಡಲಾಗಿದೆ.

Edited byಅಮಿತ್ ಎಂ.ಎಸ್ | Vijaya Karnataka Web 14 May 2022, 6:52 pm

ಹೈಲೈಟ್ಸ್‌:

  • ಪಂಜಾಬ್‌ನ ಅಮೃತಸರದಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು
  • ಶನಿವಾರ ಸಂಜೆ ಟ್ರಾನ್ಸ್‌ಫಾರ್ಮರ್‌ಗಳಿಂದ ಆವರಿಸಿದ ಬೆಂಕಿ
  • ಸರಿಯಾದ ಸಮಯಕ್ಕೆ ರೋಗಿಗಳ ಸ್ಥಳಾಂತರದಿಂದ ತಪ್ಪಿದ ಅನಾಹುತ

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web massive fire broke out at punjab hospital patients evacuated
ಪಂಜಾಬ್ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಅನಾಹುತ: ಅದೃಷ್ಟವಶಾತ್ ರೋಗಿಗಳು ಬಚಾವ್
ಅಮೃತಸರ: ಪಂಜಾಬ್‌ನ ಅಮೃತಸರದಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜೊಂದರಲ್ಲಿ ಶನಿವಾರ ಸಂಜೆ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಸರಿಯಾದ ಸಮಯಕ್ಕೆ ಎಲ್ಲ ರೋಗಿಗಳನ್ನೂ ಕಟ್ಟಡದಿಂದ ಹೊರಕ್ಕೆ ಸಾಗಿಸಲಾಗಿದೆ. ಹೀಗಾಗಿ ಯಾವುದೇ ಸಾವು ನೋವಿನ ಹಾನಿ ಉಂಟಾಗಿಲ್ಲ. ಆಸ್ಪತ್ರೆಯ ಕಟ್ಟಡವನ್ನು ಕಡು ಕಪ್ಪನೆಯ ಹೊಗೆ ಸಂಪೂರ್ಣವಾಗಿ ಆವರಿಸಿರುವುದು ವಿಡಿಯೋಗಳಲ್ಲಿ ಸೆರೆಯಾಗಿದೆ.
ಕಟ್ಟಡದ ಹಿಂಭಾಗದ ಎಕ್ಸ್‌ ರೇ ವಿಭಾಗದ ಸಮೀಪದಲ್ಲಿ ಪಾರ್ಕಿಂಗ್ ಪ್ರದೇಶದಲ್ಲಿನ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ನಲ್ಲಿ ಬೆಂಕಿ ಹೊತ್ತಿಕೊಂಡು ಆಸ್ಪತ್ರೆಗೆ ಆವರಿಸಿತ್ತು ಎಂದು ಗುರು ನಾನಕ್ ದೇವ್ ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ. ಕಟ್ಟಡದ ಬೇರೆ ಬೇರೆ ವಾರ್ಡ್‌ಗಳಲ್ಲಿ ದಾಖಲು ಮಾಡಿದ್ದ ರೋಗಿಗಳನ್ನು ಆಸ್ಪತ್ರೆ ಉದ್ಯೋಗಿಗಳು ಮತ್ತು ಅವರ ಸಹಾಯಕರು ಸಕಾಲಕ್ಕೆ ಸ್ಥಳಾಂತರ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ದಿಲ್ಲಿಯಲ್ಲಿ ಅಗ್ನಿ ದುರಂತ : ಮುಗಿಲುಮುಟ್ಟಿದ ಕುಟುಂಬದ ಆಕ್ರಂದನ, ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

"ಆರಂಭದಲ್ಲಿ ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಎಂಟು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿದ್ದವು. ಈಗ ಬೆಂಕಿ ನಿಯಂತ್ರಣದಲ್ಲಿದೆ. ಯಾವುದೇ ಗಾಯಗಳು ಉಂಟಾದ ವರದಿಯಾಗಿಲ್ಲ" ಎಂದು ಅಗ್ನಿಶಾಮಕ ಅಧಿಕಾರಿ ಲವ್‌ಪ್ರೀತ್ ಸಿಂಗ್ ಹೇಳಿದ್ದಾರೆ.


ತಾವು ಪರಿಹಾರ ಕಾರ್ಯದ ಮೇಲೆ ನಿಗಾವಹಿಸಿರುವುದಾಗಿ ಪಂಜಾಬ್ ಸಿಎಂ ಭಗವಂತ್ ಮನ್ ತಿಳಿಸಿದ್ದಾರೆ. ರಾಜ್ಯ ವಿದ್ಯುತ್ ಖಾತೆ ಸಚಿವ ಹರ್ಭಜನ್ ಸಿಂಗ್ ಸ್ಥಳದಲ್ಲಿದ್ದು, ಕಾರ್ಯಾಚರಣೆಯನ್ನು ವೀಕ್ಷಿಸಿದ್ದಾರೆ. ಬೆಂಕಿಯನ್ನು ನಂದಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ದಿಲ್ಲಿಯ ಮುಂಡ್ಕಾ ಮೆಟ್ರೋ ರೈಲು ನಿಲ್ದಾಣದ ಸಮೀಪದಲ್ಲಿನ ಕಟ್ಟಡದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ 27 ಮಂದಿ ಮೃತಪಟ್ಟ ಘಟನೆಯ ಬೆನ್ನಲ್ಲೇ ಪಂಜಾಬ್‌ನಲ್ಲಿ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಎಲ್ಲರೂ ಬಚಾವಾಗಿದ್ದಾರೆ.
ಲೇಖಕರ ಬಗ್ಗೆ
ಅಮಿತ್ ಎಂ.ಎಸ್
ವಿಜಯ ಕರ್ನಾಟಕದ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತ. 2009ರಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದಾರೆ. ದಿನಪತ್ರಿಕೆಗಳು ಮತ್ತು ವೆಬ್‌ ಪೋರ್ಟಲ್‌ಗಳಲ್ಲಿ ವರದಿಗಾರಿಕೆ, ಸಿನಿಮಾ ವರದಿಗಾರಿಕೆ, ಡೆಸ್ಕ್ ಹಾಗೂ ಜಿಲ್ಲಾ ಕರೆಸ್ಪಾಂಡೆಂಟ್ ಆಗಿ ಕೆಲಸ ಮಾಡಿದ ಅನುಭವ ಇವರಿಗಿದೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳು ಪ್ರಮುಖ ಆಸಕ್ತಿಯ ವಿಭಾಗಗಳು. ಮಾನವಾಸಕ್ತಿಯ ಹಾಗೂ ಸ್ಫೂರ್ತಿದಾಯಕ ಕಥನಗಳನ್ನು ನಿರೂಪಿಸುವುದು ವೃತ್ತಿಯಲ್ಲಿನ ನೆಚ್ಚಿನ ಸಂಗತಿ. ಪ್ರವಾಸ, ಕ್ರಿಕೆಟ್, ಓದು, ಕೃಷಿ ಇತರೆ ಇವರ ಆಸಕ್ತಿ ಮತ್ತು ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ