ಆ್ಯಪ್ನಗರ

ಬೆಂಗಳೂರು ಬಳಿಕ ಚೆನ್ನೈನಲ್ಲಿ ಕಾರುಗಳು ಭಸ್ಮ

ಒಣ ಹುಲ್ಲಿಗೆ ಬೆಂಕಿ ಹೊತ್ತಿಕೊಂಡಿದ್ದೇ ಅಗ್ನಿ ಆಕಸ್ಮಿಕಕ್ಕೆ ಕಾರಣ ಎಂದು ಹೇಳಲಾಗಿದೆ. ಹತ್ತು ಅಗ್ನಿಶಾಮಕ ವಾಹನಗಳು ಹರಸಾಹಸ ನಡೆಸಿ ಬೆಂಕಿಯನ್ನು ಹತೋಟಿಗೆ ತಂದವು.

Vijaya Karnataka Web 24 Feb 2019, 10:02 pm
ಚೆನ್ನೈ: ಬೆಂಗಳೂರಿನ ಏರ್‌ ಶೋನಲ್ಲಿ ಸಂಭವಿಸಿದ ಕಾರು ಭಸ್ಮ ಪ್ರಕರಣದ ಮರುದಿನವೇ ಚೆನ್ನೈನಲ್ಲೂ ಇಂಥದ್ದೇ ಘಟನೆ ನಡೆದಿದೆ. ನಗರದ ಹೊರವಲಯದ ಶ್ರೀರಾಮಚಂದ್ರ ಮೆಡಿಕಲ್‌ ಕಾಲೇಜು ಬಳಿಯಿರುವ ಪಾರ್ಕಿಂಗ್‌ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ 200ಕ್ಕೂ ಹೆಚ್ಚು ಕಾರುಗಳು ಭಾನುವಾರ ಬೆಂಕಿಗೆ ಆಹುತಿಯಾಗಿವೆ.
Vijaya Karnataka Web ಕಾರುಗಳಿಗೆ ಬೆಂಕಿ
ಕಾರುಗಳಿಗೆ ಬೆಂಕಿ


ಮಧ್ಯಾಹ್ನ 2 ಗಂಟೆ ವೇಳೆಗೆ ಅವಘಡ ಸಂಭವಿಸಿದೆ. ಒಣ ಹುಲ್ಲಿಗೆ ಬೆಂಕಿ ಹೊತ್ತಿಕೊಂಡಿದ್ದೇ ಅಗ್ನಿ ಆಕಸ್ಮಿಕಕ್ಕೆ ಕಾರಣ ಎಂದು ಹೇಳಲಾಗಿದೆ. ಹತ್ತು ಅಗ್ನಿಶಾಮಕ ವಾಹನಗಳು ಹರಸಾಹಸ ನಡೆಸಿ ಬೆಂಕಿಯನ್ನು ಹತೋಟಿಗೆ ತಂದವು.

ಖಾಸಗಿ ಕಾರು ಕಂಪನಿಯೊಂದು ಕಳೆದ ಒಂದು ವರ್ಷದಿಂದ ಇಲ್ಲಿ ಕಾರುಗಳನ್ನು ನಿಲ್ಲಿಸಿತ್ತು. ಇಲ್ಲಿ ಕೆಲವು ಹೊಸ ಕಾರುಗಳೂ ಇದ್ದವು. ಈ ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನ ಯಲಹಂಕದ ವಾಯುನೆಲೆಯ ಪಾರ್ಕಿಂಗ್‌ ಪ್ರದೇಶದಲ್ಲಿ ಶನಿವಾರ ಸಂಭವಿಸಿದ ಬೆಂಕಿ ಅನಾಹುತದಲ್ಲಿ 343 ಕಾರುಗಳು ಸುಟ್ಟು ಕರಕಲಾಗಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ