ಆ್ಯಪ್ನಗರ

ಚುನಾವಣೆಗೆ ಸ್ಪರ್ಧಿಸಲ್ಲ ಎಂದ ವಿಶ್ವನಾಥ್‌: ರಾಜಕೀಯ ನಿವೃತ್ತಿಗೆ ಚಿಂತನೆ

ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಉಪ ಚುನಾವಣೆಗೆ ವಿಶ್ವನಾಥ್ ಪುತ್ರನಿಂದ ಬಿಜೆಪಿ ಟಿಕೆಟ್‌ ನೀಡಲಿದೆ ಎಂಬ ವದಂತಿ ಹಬ್ಬಿತ್ತು. ಈಗ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಹೆಸರು ಕೇಳಿಬರುತ್ತಿದೆ.

Vijaya Karnataka Web 2 Aug 2019, 4:04 pm
ಹೊಸದಿಲ್ಲಿ: ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಎಚ್ ವಿಶ್ವನಾಥ್ ಚುನಾವಣೆ ರಾಜಕೀಯದಿಂದ ಹಿಂದೆ ಸರಿಯುವುದಾಗಿ ತಿಳಿಸಿದ್ದಾರೆ.
Vijaya Karnataka Web ಎಚ್‌ ವಿಶ್ವನಾಥ್‌
ಎಚ್‌ ವಿಶ್ವನಾಥ್‌


ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಎಚ್‌ ವಿಶ್ವನಾಥ್‌, ನಿವೃತ್ತಿಯಾಗುವ ಚಿಂತನೆ ಕೂಡ ಮಾಡಿದ್ದಾರೆ.

ಚುನಾವಣೆ ರಾಜಕೀಯ ಸಾಕಾಗಿದೆ. ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅನರ್ಹತೆ ಪ್ರಶ್ನಿಸಿ ಕಾನೂನು ಹೋರಾಟಕ್ಕೆ ಮೊರೆ ಹೋಗಿರುವ ವಿಶ್ವನಾಥ್‌ ಸೇರಿದಂತೆ ಮೂವರು ಜೆಡಿಎಸ್‌ ನಾಯಕರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಈ ಸಂಬಂಧ ಹೊಸದಿಲ್ಲಿಗೆ ಆಗಮಿಸಿದ್ದ ವಿಶ್ವನಾಥ್‌ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡರು.

ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಎಚ್‌ ವಿಶ್ವನಾಥ್‌ ಬಂಡಾಯದ ಕಹಳೆ ಊದಿ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜೆಡಿಎಸ್‌ ನೀಡಿದ ದೂರಿನ ಮೇರೆಗೆ ವಿಶ್ವನಾಥ್‌ ಸೇರಿದಂತೆ ಜೆಡಿಎಸ್‌ನ ಗೋಪಾಲಯ್ಯ, ನಾರಾಯಣ ಗೌಡ ಅವರನ್ನು ಅನರ್ಹಗೊಳಿಸಿ ಅಂದಿನ ಸ್ಪೀಕರ್ ಕೆಆರ್‌ ರಮೇಶ್‌ ಕುಮಾರ್‌ ಆದೇಶ ನೀಡಿದ್ದರು.

ಇದರ ವಿರುದ್ಧ ಅನರ್ಹಗೊಂಡಿರುವ ಶಾಸಕರು ಕಾನೂನು ಹೋರಾಟದ ಮೊರೆ ಹೋಗಿದ್ದಾರೆ.

ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಉಪ ಚುನಾವಣೆಯಲ್ಲಿ ಯೋಗೇಶ್ವರ್‌ ಸ್ಪರ್ಧೆ ಮಾಡುತ್ತಾರೆ ಎಂಬುದು ಊಹಾಪೋಹ ಎಂದು ವಿಶ್ವನಾಥ್‌ ಸ್ಪಷ್ಟಪಡಿಸಿದರು.

ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ವಿಶ್ವನಾಥ್‌, ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಉತ್ತರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ