ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದ ‘ಮೆಟ್ರೋ ಮ್ಯಾನ್’ ಇ ಶ್ರೀಧರನ್
ಕೆ ಸುರೇಂದ್ರನ್ ನೇತೃತ್ವದಲ್ಲಿ ನಡೆಯುತ್ತಿರುವ ವಿಜಯ ಯಾತ್ರೆ ವೇಳೆ ಕೇಂದ್ರ ಸಚಿವ ಆರ್ಕೆ ಸಿಂಗ್ ಸಮ್ಮುಖದಲ್ಲಿ ಮಲ್ಲಪುರಂನಲ್ಲಿ ಇ ಶ್ರೀಧರನ್ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
Agencies 26 Feb 2021, 1:03 pm
ಹೈಲೈಟ್ಸ್:
- ‘ಮೆಟ್ರೋ ಮ್ಯಾನ್’ ಖ್ಯಾತಿಯ ನಿವೃತ್ತ ಇಂಜಿನಿಯರ್ ಇ ಶ್ರೀಧರನ್ ಗುರುವಾರ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ
- ಕೆ ಸುರೇಂದ್ರನ್ ನೇತೃತ್ವದಲ್ಲಿ ನಡೆಯುತ್ತಿರುವ ವಿಜಯ ಯಾತ್ರೆ ಸಂದರ್ಭದಲ್ಲಿ ಬಿಜೆಪಿ ಸೇರ್ಪಡೆಯಾದ ಶ್ರೀಧರನ್
- ಈ ತಿಂಗಳ ಆರಂಭದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ಘೋಷಿಸಿದ್ದ ಇ ಶ್ರೀಧರನ್
ಮಲ್ಲಪುರಂ: ‘ಮೆಟ್ರೋ ಮ್ಯಾನ್’ ಎಂದೇ ಜನಪ್ರಿಯರಾಗಿರುವ ನಿವೃತ್ತ ಇಂಜಿನಿಯರ್ ಇ ಶ್ರೀಧರನ್ ಗುರುವಾರ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮಲ್ಲಪುರಂನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೇರಳ ರಾಜ್ಯ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. "ಕೆ ಸುರೇಂದ್ರನ್ ನೇತೃತ್ವದಲ್ಲಿ ನಡೆಯುತ್ತಿರುವ ವಿಜಯ ಯಾತ್ರೆ ಸಂದರ್ಭದಲ್ಲಿ ಕೇಂದ್ರ ಸಚಿವ ಆರ್ಕೆ ಸಿಂಗ್ ಸಮ್ಮುಖದಲ್ಲಿ ಮಲ್ಲಪುರಂನಲ್ಲಿ ಮೆಟ್ರೋ ಮ್ಯಾನ್ ಇ ಶ್ರೀಧರನ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು," ಎಂದು ಬಿಜೆಪಿ ನಾಯಕ ಬಿಎಲ್ ಸಂತೋಷ್ ಟ್ಟೀಟ್ ಮಾಡಿದ್ದಾರೆ.
ಸಾವಿರಾರು ಬಿಜೆಪಿ ಕಾರ್ಯಕರ್ತರು ಅಭಿಮಾನಿಗಳ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾದ ಇ ಶ್ರೀಧರನ್, ಬಿಜೆಪಿ ಸೇರುತ್ತಿರುವುದು ತನ್ನ ಜೀವನದ ಶ್ರೇಷ್ಠ ನಿರ್ಧಾರಗಳಲ್ಲಿ ಒಂದು ಎಂದು ಹೇಳಿದ್ದಾರೆ.
ದಿಲ್ಲಿ ಮೆಟ್ರೋದ ಮುಖ್ಯಸ್ಥರಾಗಿದ್ದ ಇ ಶ್ರೀಧರನ್ 2011ರಲ್ಲಿ ನಿವೃತ್ತರಾದವರು. ಅವರು ಜೈಪುರ, ಲಖನೌ, ಕೊಚ್ಚಿ ಮೆಟ್ರೋಗಳಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.
ಈ ತಿಂಗಳ ಆರಂಭದಲ್ಲಿ ಅವರು ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ಹೇಳಿದ್ದರು. ಅಷ್ಟೇ ಅಲ್ಲ ಕೇರಳದಲ್ಲಿ ಇಲ್ಲಿಯವರೆಗೆ ಅಧಿಕಾರ ನಡೆಸಿದ ಪಕ್ಷಗಳು ರಾಜ್ಯಕ್ಕೆ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಎಂದು ದೂರಿದ್ದರು.
ಪಕ್ಷ ಬಯಸಿದರೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದಿರುವ ಶ್ರೀಧರನ್ ಮುಖ್ಯಮಂತ್ರಿಯಾಗಲೂ ತಾವು ರೆಡಿ ಎಂದು ಈಗಾಗಲೇ ಘೋಷಿಸಿದ್ದಾರೆ.
ಕೇರಳದ 140 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ ಕೇವಲ ಒಬ್ಬರು ಶಾಸಕರನ್ನು ಹೊಂದಿದ್ದು, ಹೇಗಾದರೂ ಮಾಡಿ ಈ ಬಾರಿ ತನ್ನ ಬಲಾಬಲವನ್ನು ಹೆಚ್ಚಿಸಲೇಬೇಕು ಎಂದು ಪಣ ತೊಟ್ಟಿದೆ. ಆದರೆ ಶ್ರೀಧರನ್ ಬಿಜೆಪಿ ಸೇರ್ಪಡೆಯಿಂದ ಅಂಥ ದೊಡ್ಡ ಬದಲಾವಣೆಯೇನೂ ಸಂಭವಿಸುವಿದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.
ಸಾವಿರಾರು ಬಿಜೆಪಿ ಕಾರ್ಯಕರ್ತರು ಅಭಿಮಾನಿಗಳ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾದ ಇ ಶ್ರೀಧರನ್, ಬಿಜೆಪಿ ಸೇರುತ್ತಿರುವುದು ತನ್ನ ಜೀವನದ ಶ್ರೇಷ್ಠ ನಿರ್ಧಾರಗಳಲ್ಲಿ ಒಂದು ಎಂದು ಹೇಳಿದ್ದಾರೆ.
ದಿಲ್ಲಿ ಮೆಟ್ರೋದ ಮುಖ್ಯಸ್ಥರಾಗಿದ್ದ ಇ ಶ್ರೀಧರನ್ 2011ರಲ್ಲಿ ನಿವೃತ್ತರಾದವರು. ಅವರು ಜೈಪುರ, ಲಖನೌ, ಕೊಚ್ಚಿ ಮೆಟ್ರೋಗಳಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.
ಈ ತಿಂಗಳ ಆರಂಭದಲ್ಲಿ ಅವರು ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ಹೇಳಿದ್ದರು. ಅಷ್ಟೇ ಅಲ್ಲ ಕೇರಳದಲ್ಲಿ ಇಲ್ಲಿಯವರೆಗೆ ಅಧಿಕಾರ ನಡೆಸಿದ ಪಕ್ಷಗಳು ರಾಜ್ಯಕ್ಕೆ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಎಂದು ದೂರಿದ್ದರು.
ಪಕ್ಷ ಬಯಸಿದರೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದಿರುವ ಶ್ರೀಧರನ್ ಮುಖ್ಯಮಂತ್ರಿಯಾಗಲೂ ತಾವು ರೆಡಿ ಎಂದು ಈಗಾಗಲೇ ಘೋಷಿಸಿದ್ದಾರೆ.
ಕೇರಳದ 140 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ ಕೇವಲ ಒಬ್ಬರು ಶಾಸಕರನ್ನು ಹೊಂದಿದ್ದು, ಹೇಗಾದರೂ ಮಾಡಿ ಈ ಬಾರಿ ತನ್ನ ಬಲಾಬಲವನ್ನು ಹೆಚ್ಚಿಸಲೇಬೇಕು ಎಂದು ಪಣ ತೊಟ್ಟಿದೆ. ಆದರೆ ಶ್ರೀಧರನ್ ಬಿಜೆಪಿ ಸೇರ್ಪಡೆಯಿಂದ ಅಂಥ ದೊಡ್ಡ ಬದಲಾವಣೆಯೇನೂ ಸಂಭವಿಸುವಿದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.