ಆ್ಯಪ್ನಗರ

ನಡ್ಡಾ ಕಾರಿನ ಮೇಲೆ ದಾಳಿ: ಪ.ಬಂಗಾಳ ಪೊಲೀಸ್ ಮುಖ್ಯಸ್ಥ, ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಗೃಹ ಸಚಿವಾಲಯ ಸಮನ್ಸ್!

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ, ಪಶ್ಚಿಮ ಬಂಗಾಳ ಪೊಲೀಸ್ ಮುಖ್ಯಸ್ಥ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಗೃಹ ಸಚಿವಾಲಯ ಸಮನ್ಸ್ ಜಾರಿ ಮಾಡಿದೆ.

Vijaya Karnataka Web 11 Dec 2020, 1:25 pm
ಹೊಸದಿಲ್ಲಿ: ರಾಜಕೀಯ ಸಭೆಯಲ್ಲಿ ಭಾಗವಹಿಸಲು ತೆರರಳುತ್ತಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ, ಪಶ್ಚಿಮ ಬಂಗಾಳ ಪೊಲೀಸ್ ಮುಖ್ಯಸ್ಥ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಗೃಹ ಸಚಿವಾಲಯ ಸಮನ್ಸ್ ಜಾರಿ ಮಾಡಿದೆ.
Vijaya Karnataka Web BJP Convoy
ಬಂಗಾಳದಲ್ಲಿ ಜೆಪಿ ನಡ್ಡಾ ಬೆಂಗಾವಲು ವಾಹನದ ಮೇಲೆ ದಾಳಿ


ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಬಳಿ ನಡೆದ ದಾಳಿ ಕುರಿತಂತೆ ರಾಜ್ಯಪಾಲ ಜಗದೀಪ್ ಧನ್ಕರ್ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ಈ ವರದಿಯನ್ನಾಧರಿಸಿ ಕೇಂದ್ರ ಗೃಹ ಸಚಿವಾಲಯ, ಪಶ್ಚಿಮ ಬಂಗಾಳ ಪೊಲೀಸ್ ಮಹಾ ನಿರ್ದೇಶಕರು ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಮನ್ಸ್ ಜಾರಿ ಮಾಡಿದೆ.

ಕೋಲ್ಕತ್ತಾ ಬಳಿ ನಡ್ಡಾ ಬೆಂಗಾವಲು ವಾಹನದ ಮೇಲೆ ದಾಳಿ: ಮಾ ದುರ್ಗೆ ರಕ್ಷಿಸಿದಳು ಎಂದ ಬಿಜೆಪಿ ಅಧ್ಯಕ್ಷ!

ಇದೇ ಡಿ.14ರೊಳಗಾಗಿ ಉತ್ತರ ನೀಡಬೇಕೆಂದು ಸಮನ್ಸ್‌ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದ್ದು, ಕೇಂದ್ರ ಸರ್ಕಾರ ಹಾಗೂ ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ನಡುವಿನ ಜಿದ್ದಾಜಿದ್ದಿ ಮತ್ತೊಂದು ಹಂತ ತಲುಪಿದೆ.

ಇನ್ನು ಜೆಪಿ ನಡ್ಡಾ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇದು ಪ್ರಚಾರಕ್ಕಾಗಿ ಬಿಜೆಪಿಯೇ ಹೆಣೆದಿರುವ ಯೋಜನೆ ಎಂದು ಗಂಭೀರ ಆರೋಪ ಮಾಡಿದ್ದಾರೆ.


ಅಲ್ಲದೇ ರಾಜ್ಯಪಾಲ ಜಗದೀಪ್ ಧನ್ಕರ್ ವರದಿಯನ್ನು ಟೀಕಿಸಿರುವ ಮಮತಾ ಬ್ಯಾನರ್ಜಿ, ರಾಜ್ಯಪಾಲರು ಕೇಂದ್ರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ಧಾರೆ ಎಂದು ಹರಿಹಾಯ್ದಿದ್ದಾರೆ.

ಪಶ್ಚಿಮ ಬಂಗಾಳ: ಬಿಜೆಪಿ ನಾಯಕರ ವಾಹನದ ಮೇಲೆ ದಾಳಿ!

ಮಮತಾ ಬ್ಯಾನರ್ಜಿ ಟೀಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ರಾಜ್ಯಪಾಲ ಜಗದೀಪ್ ಧನ್ಕರ್, ಬೆಂಕಿಯೊಂದಿಗೆ ಸರಸವಾಡುವುದು ಬೇಡ ಎಂದು ಮಾರ್ಮಿಕವಾಗಿ ತಿರುಗೇಟು ನೀಡಿದ್ದಾರೆ.


ನಿನ್ನೆ(ಡಿ.10-ಗುರುವಾರ) ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಬಳಿ ಹಮ್ಮಿಕೊಳ್ಳಲಾಗಿದ್ದ ಬಿಜೆಪಿ ಸಭೆಗೆ ತೆರಳುತ್ತಿದ್ದ ಜೆಪಿ ನಡ್ಡಾ ಅವರ ಬೆಂಗಾವಲು ವಾಹನದ ಮೇಲೆ ಕಲ್ಲುಗಳನ್ನು ತೂರಲಾಗಿತ್ತು.

ಪಶ್ಚಿಮ ಬಂಗಾಳ ರಾಜ್ಯ ಜನಸಾಮಾನ್ಯರಿಗೆ ಸುರಕ್ಷಿತವಲ್ಲ; ಯೋಗಿ ಆದಿತ್ಯನಾಥ್

ಊಈ ದಾಳಿಯಲ್ಲಿ ಪಶ್ಚಿಮ ಬಂಗಾಳ ಬಿಜೆಪಿ ಉಸ್ತುವಾರಿ ಕೈಲಾಶ್ ವಿಜಯವರ್ಗೀಯ ಸೇರಿದಂತೆ ಹಲವರು ಗಂಭಿರವಾಗಿ ಗಾಯಗೊಂಡಿದ್ದರು. ಕೇಂದ್ರ ಗೃಹ ಸಚಿವಾಲಯ ಈ ದಾಳಿಯನ್ನು ಗಂಭೀರವಾಗಿ ಪರಿಗಣಿಸಿ ಇದೀಗ ಪ.ಬಂಗಾಳ ಪೊಲೀಸ್ ಮುಖ್ಯಸ್ಥ ಹಾಗೂ ಮುಖ್ಯ ಕಾರ್ಯದರ್ಶಿಗೆ ಸಮನ್ಸ್ ಜಾರಿ ಮಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ