ಆ್ಯಪ್ನಗರ

ಮೀಸಲು ವಿರೋಧಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಜಾತಿ ಆಧಾರಿತ ಮೀಸಲು ವಿರೋಧಿಸಿ ಮಂಗಳವಾರ ಕರೆ ನೀಡಲಾಗಿದ್ದ 'ಭಾರತ್‌ ಬಂದ್‌'ಗೆ ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

Vijaya Karnataka 11 Apr 2018, 7:21 am
ಹೊಸದಿಲ್ಲಿ: ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಜಾತಿ ಆಧಾರಿತ ಮೀಸಲು ವಿರೋಧಿಸಿ ಮಂಗಳವಾರ ಕರೆ ನೀಡಲಾಗಿದ್ದ 'ಭಾರತ್‌ ಬಂದ್‌'ಗೆ ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
Vijaya Karnataka Web ಬಂದ್‌

ಉತ್ತರ ಪ್ರದೇಶ, ಮಧ್ಯ ಪ್ರದೇಶ, ಗುಜರಾತ್‌, ರಾಜಸ್ಥಾನ, ಒಡಿಶಾ, ಪಂಜಾಬ್‌ ಸೇರಿದಂತೆ ಎಲ್ಲ ರಾಜ್ಯಗಳಲ್ಲಿ ಬಿಗಿ ಕ್ರಮಗಳನ್ನು ಕೈಗೊಂಡಿದ್ದರಿಂದ ಸಣ್ಣಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿದರೆ ಭಾರತ್‌ ಬಂದ್‌ ಬಹುತೇಕ ಶಾಂತವಾಗಿತ್ತು.

ಬಿಹಾರದಲ್ಲಿ ಮಾತ್ರ ಮೀಸಲು ವಿರೋಧಿ ಗುಂಪು ಮತ್ತು ದಲಿತ, ಒಬಿಸಿ ವರ್ಗದವರ ನಡುವೆ ನಡೆದ ಘರ್ಷಣೆಯಲ್ಲಿ 12ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವುದು ವರದಿಯಾಗಿದೆ.

ವಾಟ್ಸ್‌ಆ್ಯಪ್‌ಗಳಲ್ಲಿ ವದಂತಿಗಳು ಹರಿದಾಡಿ ಅದು ಹಿಂಸಾಚಾರಕ್ಕೆ ಎಡೆಮಾಡಿಕೊಡುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಬಧಿಹುಧಿತೇಕ ಸೂಕ್ಷ್ಮ ಪ್ರಧಿದೇಧಿಶಧಿಗಧಿಳಲ್ಲಿ ಇಂಟರ್‌ನೆಟ್‌ ಸಂಪರ್ಕವನ್ನು ತಾತ್ಕಾಲಿಕವಾಗಿ ಕಡಿತಗೊಳಿಸಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ