ಆ್ಯಪ್ನಗರ

ಔಪಚಾರಿಕ ಪ್ರಕ್ರಿಯೆ ಪೂರ್ಣ

ಅಕಾಲಿ ದಳದ ಪ್ರಕಾಶ್‌ ಸಿಂಗ್‌ ಬಾದಲ್‌ ಅವರು ಎನ್‌ಡಿಎ ಸಂಸದೀಯ ನಾಯಕನಾಗಿ ಮೋದಿ ಹೆಸರನ್ನು ಪ್ರಸ್ತಾಪಿಸಿದರು. ರಾಮ್‌ ವಿಲಾಸ್‌ ಪಾಸ್ವಾನ್‌ ಅನುಮೋದಿಸಿದರು.

PTI 26 May 2019, 5:00 am
ಲೋಕಸಭೆ ಚುನಾವಣೆ ದಿಗ್ವಿಜಯದ ಬೆನ್ನಲ್ಲೇ ಕೇಂದ್ರದಲ್ಲಿ ಹೊಸ ಸರಕಾರ ರಚನೆ ಪ್ರಕ್ರಿಯೆ ಶನಿವಾರ ಚುರುಕು ಪಡೆದುಕೊಂಡಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ನೂತನ ಸಂಸದರು ನರೇಂದ್ರ ಮೋದಿ ಅವರನ್ನು ತಮ್ಮ ನಾಯಕನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ. ಸಂಸತ್ತಿನ ಸೆಂಟ್ರಲ್‌ ಹಾಲ್‌ ನಲ್ಲಿ ಶನಿವಾರ ನಡೆದ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಅಮಿತ್‌ ಶಾ ಅವರು ಬಿಜೆಪಿ ಸಂಸದೀಯ ನಾಯಕರಾಗಿ ಮೋದಿ ಹೆಸರನ್ನು ಶಿಫಾರಸು ಮಾಡಿದರು. ಪಕ್ಷದ ಮಾಜಿ ಅಧ್ಯಕ್ಷ ರಾಜನಾಥ್‌ ಸಿಂಗ್‌ ಮತ್ತು ನಿತಿನ್‌ ಗಡ್ಕರಿ ಅನುಮೋದಿಸಿದರು. ನಂತರ ಅಕಾಲಿ ದಳದ ಪ್ರಕಾಶ್‌ ಸಿಂಗ್‌ ಬಾದಲ್‌ ಅವರು ಎನ್‌ಡಿಎ ಸಂಸದೀಯ ನಾಯಕನಾಗಿ ಮೋದಿ ಹೆಸರನ್ನು ಪ್ರಸ್ತಾಪಿಸಿದರು. ರಾಮ್‌ ವಿಲಾಸ್‌ ಪಾಸ್ವಾನ್‌ ಅನುಮೋದಿಸಿದರು. ಬಿಜೆಪಿ ಹಿರಿಯ ನಾಯಕರಾದ ಎಲ್‌.ಕೆ. ಆಡ್ವಾಣಿ, ಮುರಳಿ ಮನೋಹರ ಜೋಶಿ, ಬಿಹಾರ ಸಿಎಂ ನಿತೀಶ್‌ಕುಮಾರ್‌, ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ ಉಪಸ್ಥಿತರಿದ್ದರು. ಸಭೆ ನಂತರ ಅಮಿತ್‌ ಶಾ ನೇತೃತ್ವದ ನಿಯೋಗವು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರನ್ನು ಭೇಟಿ ಮಾಡಿ ಸರಕಾರ ರಚನೆ ಹಕ್ಕು ಮಂಡಿಸುವ ಔಪಚಾರಿಕ ಪ್ರಕ್ರಿಯೆ ಪೂರ್ಣಗೊಳಿಸಿತು.
Vijaya Karnataka Web modi elected nda parliamentary party leader
ಔಪಚಾರಿಕ ಪ್ರಕ್ರಿಯೆ ಪೂರ್ಣ


.....

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ