ಆ್ಯಪ್ನಗರ

ಮಳೆ, ಪ್ರವಾಹ: 7 ರಾಜ್ಯಗಳಲ್ಲಿ ಈ ವರೆಗೆ 774 ಮಂದಿ ಬಲಿ

ಈ ಮಳೆಗಾಲದಲ್ಲಿ ವಿವಿಧ ರಾಜ್ಯಗಳಲ್ಲಿ ಇದುವರೆಗೆ ಮಳೆ ಮತ್ತು ಪ್ರವಾಹ ಸಂಬಂಧಿತ ಅನಾಹುತಗಳಲ್ಲಿ 774 ಮಂದಿ ಮೃತಪಟ್ಟಿದ್ದಾರೆ ಎಂದು ಗೃಹ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.

Vijaya Karnataka Web 13 Aug 2018, 2:31 pm
ಹೊಸದಿಲ್ಲಿ: ಈ ಮಳೆಗಾಲದಲ್ಲಿ ವಿವಿಧ ರಾಜ್ಯಗಳಲ್ಲಿ ಇದುವರೆಗೆ ಮಳೆ ಮತ್ತು ಪ್ರವಾಹ ಸಂಬಂಧಿತ ಅನಾಹುತಗಳಲ್ಲಿ 774 ಮಂದಿ ಮೃತಪಟ್ಟಿದ್ದಾರೆ ಎಂದು ಗೃಹ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.
Vijaya Karnataka Web Floods


ಗೃಹ ಸಚಿವಾಲಯದ ಅಧೀನದ ರಾಷ್ಟ್ರೀಯ ತುರ್ತು ಪ್ರತಿಸ್ಪಂದನಾ ಕೇಂದ್ರದ ಅಂಕಿ- ಅಂಶಗಳ ಪ್ರಕಾರ, ಕೇರಳದಲ್ಲಿ 187, ಉತ್ತರ ಪ್ರದೇಶದಲ್ಲಿ 171, ಪಶ್ಚಿಮ ಬಂಗಾಳದಲ್ಲಿ 170 ಮತ್ತು ಮಹಾರಾಷ್ಟ್ರದಲ್ಲಿ 139 ಮಂದಿ ಈ ಮುಂಗಾರಿನ ಮಳೆ ಮತ್ತು ಪ್ರವಾಹ ಸಂಬಂಧಿತ ದುರಂತಗಳಲ್ಲಿ ಮೃತಪಟ್ಟಿದ್ದಾರೆ. ಗುಜರಾತ್‌ನಲ್ಲಿ 52, ಅಸ್ಸಾಂನಲ್ಲಿ 45 ಮತ್ತು ನಾಗಾಲ್ಯಾಂಡ್‌ನಲ್ಲಿ 8 ಮಂದಿ ಮಳೆಗೆ ಬಲಿಯಾಗಿದ್ದಾರೆ.

ಕೇರಳದಲ್ಲಿ 22, ಪಶ್ಚಿಮ ಬಂಗಾಳದಲ್ಲಿ 7 ಮಂದಿ ಮಳೆ ಸಂಬಂಧಿತ ಅನಾಹುತಗಳಲ್ಲಿ ಕಾಣೆಯಾಗಿದ್ದಾರೆ. ಇತರ ರಾಜ್ಯಗಳಲ್ಲಿ ಒಟ್ಟು 245 ಮಂದಿ ಗಾಯಗೊಂಡಿದ್ದಾರೆ.

ಮಹಾರಾಷ್ಟ್ರದ 26, ಅಸ್ಸಾಂನ 23, ಪಶ್ಚಿಮ ಬಂಗಾಳದ 22, ಕೇರಳದ 14, ಉತ್ತರ ಪ್ರದೇಶದ 12, ನಾಗಾಲ್ಯಾಂಡ್‌ನ 11ಮತ್ತು ಗುಜರಾತ್‌ನ 10 ಜಿಲ್ಲೆಗಳು ಅತಿವೃಷ್ಟಿಯಿಂದ ಹಾನಿಗೀಡಾಗಿವೆ.

ಅಸ್ಸಾಂನಲ್ಲಿ 11.45 ಲಕ್ಷ ಮಂದಿ ಮಳೆ ಮತ್ತು ಪ್ರವಾಹದಿಂದ ಕಂಗೆಟ್ಟಿದ್ದಾರೆ. ಅಲ್ಲದೆ 27,552 ಹೆಕ್ಟೇರ್‌ ಭೂಮಿಯಲ್ಲಿನ ಬೆಳೆಗಳು ಹಾಳಾಗಿವೆ.

ಅಸ್ಸಾಂನಲ್ಲಿ ರಾಷ್ಟ್ರೀಯ ವಿಕೋಪ ಪ್ರತಿಸ್ಪಂದನಾ ಪಡೆಯ (ಎನ್‌ಡಿಆರ್‌ಎಫ್‌) 15 ತಂಡಗಳು ರಕ್ಷಣೆ ಮತ್ತು ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿವೆ. ಒಂದು ತಂಡದಲ್ಲಿ 45 ಸಿಬ್ಬಂದಿ ಇರುತ್ತಾರೆ.

ಉತ್ತರ ಪ್ರದೇಶದಲ್ಲಿ 8, ಪಶ್ಚಿಮ ಬಂಗಾಳದಲ್ಲಿ 8, ಗುಜರಾತ್‌ನಲ್ಲಿ 7, ಕೇರಳ ಮತ್ತು ಮಹಾರಾಷ್ಟ್ರಗಳಲ್ಲಿ ತಲಾ 4 ಹಾಗೂ ನಾಗಾಲ್ಯಾಂಡ್‌ನಲ್ಲಿ 1 ತಂಡ ಕಾರ್ಯಾಚರಣೆ ನಡೆಸುತ್ತಿವೆ ಎಂದು ಸರಕಾರ ಮಾಹಿತಿ ನೀಡಿದೆ.

ಭಾರೀ ಮಳೆಯ ಎಚ್ಚರಿಕೆ:
ಉತ್ತರ ಪ್ರದೇಶ, ಹಿಮಾಚಲ ಪ್ರದೆಶ, ಉತ್ತರಾಖಂಡ, ಕೇರಳ, ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ನಾಗಾಲ್ಯಾಂಡ್‌ ಮತ್ತು ಅರುಣಾಚಲ ಪ್ರದೇಶ ಸೇರಿದಂತೆ 16 ರಾಜ್ಯಗಳಿಗೆ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ