ಆ್ಯಪ್ನಗರ

ಸಾಧ್ವಿ ಪ್ರಜ್ಞಾ ಸಿಂಗ್ ಕೊಲೆ ಕೇಸ್ ರೀ ಓಪನ್ ಮಾಡುತ್ತಿದೆ ಕೈ ಸರಕಾರ

ಭೋಪಾಲ್‌ನಿಂದ ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ವಿರುದ್ಧ ಬಿಜೆಪಿ ಅಭ್ಯರ್ಥಿ ಪ್ರಜ್ಞಾ ಸಿಂಗ್‌ ಠಾಕೂರ್‌ ಜಯಗಳಿಸಲಿದ್ದಾರೆ ಎಂದು ಮತದಾನೋತ್ತರ ಸಮೀಕ್ಷೆಗಳು ಹೇಳಿದ ಬೆನ್ನಿಗೆ ಪ್ರಜ್ಞಾ ವಿರುದ್ಧದ ಹಳೆಯ ಪ್ರಕರಣದ ಮರು ತನಿಖೆಯನ್ನು (2007) ಮರಳಿ ಶುರು ಮಾಡಲು ರಾಜ್ಯ ಸರಕಾರ ಸಿದ್ಧತೆ ನಡೆಸಿದೆ.

TIMESOFINDIA.COM 22 May 2019, 5:03 pm
ಭೋಪಾಲ್‌: ಬಿಜೆಪಿ ನಾಯಕಿ, ಸಾಧ್ವಿ ಪ್ರಜ್ಞಾ ಸಿಂಗ್ ವಿರುದ್ಧದ 12 ವರ್ಷ ಹಳೆಯ ಕೊಲೆ ಪ್ರಕರಣದ ತನಿಖೆಯನ್ನು ಮತ್ತೆ ಆರಂಭಿಸಲು ಮಧ್ಯಪ್ರದೇಶ್ ಸರಕಾರ ಹೊಂಚು ಹಾಕುತ್ತಿದೆ.
Vijaya Karnataka Web Sadvi Prgjna


ಭೋಪಾಲ್‌ನಿಂದ ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ವಿರುದ್ಧ ಬಿಜೆಪಿ ಅಭ್ಯರ್ಥಿ ಪ್ರಜ್ಞಾ ಸಿಂಗ್‌ ಠಾಕೂರ್‌ ಜಯಗಳಿಸಲಿದ್ದಾರೆ ಎಂದು ಮತದಾನೋತ್ತರ ಸಮೀಕ್ಷೆಗಳು ಹೇಳಿದ ಬೆನ್ನಿಗೆ ಪ್ರಜ್ಞಾ ವಿರುದ್ಧದ ಹಳೆಯ ಪ್ರಕರಣದ ಮರು ತನಿಖೆಯನ್ನು (2007) ಮರಳಿ ಶುರು ಮಾಡಲು ರಾಜ್ಯ ಸರಕಾರ ಸಿದ್ಧತೆ ನಡೆಸಿದೆ.

ಆರ್‌ಎಸ್‌ಎಸ್‌ ಮಾಜಿ ಪ್ರಚಾರಕ ಸುನೀಲ್‌ ಜೋಶಿ ಅವರ ಹತ್ಯೆ ಪ್ರಕರಣದಲ್ಲಿ ಮತ್ತೊಮ್ಮೆ ತನಿಖೆ ನಡೆಸುವ ಕುರಿತು ಕಾನೂನು ತಜ್ಞರ ಅಭಿಪ್ರಾಯ ಸಂಗ್ರಹಿಸಲು ಕಮಲ್‌ನಾಥ್‌ ನೇತೃತ್ವದ ಸರಕಾರ ಮುಂದಾಗಿದೆ.

2007, ಡಿಸೆಂಬರ್ 29ರಂದು ದೇವಾಸ್ ಜಿಲ್ಲೆಯ ಚೂನಾ ಖಡಾನ್ ಪ್ರದೇಶದಲ್ಲಿ ಆರ್‌ಎಸ್ಎಸ್ ಪ್ರಚಾರಕ ಸುನೀಲ್ ಜೋಶಿ ಅವರನ್ನು ಗುಂಡಿಕ್ಕಿ ಹತ್ಯೆಗೈಯ್ಯಲಾಗಿತ್ತು. ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳು ಗುಂಡಿಕ್ಕಿ ಪರಾರಿಯಾಗಿದ್ದರು.

ಪ್ರಜ್ಞಾ ಸಿಂಗ್ ಮತ್ತವರ ಸಹಚರರ ಮೇಲೆ ಕೊಲೆ ಆರೋಪ ಕೇಳಿ ಬಂದಿತ್ತು. ಆದರೆ ಸಾಕ್ಷ್ಯಗಳ ಕೊರತೆ ಹಿನ್ನೆಲೆಯಲ್ಲಿ ಪ್ರಜ್ಞಾ ಮತ್ತು ಇತರ 7 ಮಂದಿಯನ್ನು ಕೋರ್ಟ್‌ 2017ರಲ್ಲಿ ಖುಲಾಸೆಗೊಳಿಸಿತ್ತು. ಮತ್ತೀಗ ಅವರ ಬಿಡುಗಡೆಯನ್ನು ಪ್ರಶ್ನಿಸಿ ರಾಜ್ಯ ಸರಕಾರ ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ