ಆ್ಯಪ್ನಗರ

ಮಂಡ್ಯ ರೈತರಿಗೆ ನೀರು ಬಿಡಲು ಸಂಸದೆ ಸುಮಲತಾ ಒತ್ತಾಯ; ಕೇಂದ್ರ ಸಚಿವರಿಗೆ ಮನವಿ

ಲೋಕಸಭಾ ಅಧಿವೇಶನ ಈಗಾಗಲೇ ಆರಂಭವಾಗಿದೆ. ಮೊದಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಹೊಸದಿಲ್ಲಿಗೆ ಆಗಮಿಸಿರುವ ಸುಮಲತಾ ಅಂಬರೀಷ್‌, ಮಂಡ್ಯ ರೈತರಿಗೆ ನೀರು ಬಿಡುವಂತೆ ರಾಜ್ಯ ಸರಕಾರಕ್ಕೆ ಸೂಚನೆ ನೀಡುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ.

Vijaya Karnataka Web 20 Jun 2019, 9:15 pm
ಹೊಸದಿಲ್ಲಿ: ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆಯಾಗಿ ಆಯ್ಕೆಯಾಗಿರುವ ಸುಮಲತಾ ಅಂಬರೀಷ್‌ ತನ್ನ ಕಾರ್ಯ ಆರಂಭಿಸಿದ್ದಾರೆ.
Vijaya Karnataka Web ಸುಮಲತಾ ಅಂಬರೀಷ್‌
ಸುಮಲತಾ ಅಂಬರೀಷ್‌


ಮಂಡ್ಯದ ಕಾವೇರಿ ನದಿ ಪಾತ್ರದ ಭೂಮಿಗಳಲ್ಲಿರುವ ರೈತರ ಬೆಳೆಗೆ ಕನಿಷ್ಠ ಎರಡು ಟಿಎಂಸಿ ನೀರು ಬಿಡುವಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಲೋಕಸಭಾ ಅಧಿವೇಶನ ಈಗಾಗಲೇ ಆರಂಭವಾಗಿದೆ. ಮೊದಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಹೊಸದಿಲ್ಲಿಗೆ ಆಗಮಿಸಿರುವ ಸುಮಲತಾ ಅಂಬರೀಷ್‌, ಮಂಡ್ಯ ರೈತರಿಗೆ ನೀರು ಬಿಡುವಂತೆ ರಾಜ್ಯ ಸರಕಾರಕ್ಕೆ ಸೂಚನೆ ನೀಡುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಕೇಂದ್ರ ಸಚಿವರಾದ ಸದಾನಂದಗೌಡ, ಪ್ರಹ್ಲಾದ್‌ ಜೋಷಿ ಅವರಿಗೂ ಸಂಸದರಾದ ಸುಮಲತಾ ಅಂಬರೀಷ್‌ ಪತ್ರ ಬರೆದು ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ