ಆ್ಯಪ್ನಗರ

ಬಿಜೆಪಿಯಿಂದ ಸ್ಪರ್ಧಿಸ್ತಾರಾ ಧೋನಿ, ಗಂಭೀರ್‌?

ಜಾರ್ಖಾಂಡ್‌ನಿಂದ ಎಂಎಸ್‌ ಧೋನಿ ಮತ್ತು ದಿಲ್ಲಿಯಿಂದ ಗಂಭೀರ್‌ ಬಿಜೆಪಿ ಅಭ್ಯರ್ಥಿಗಳಾಗುವುದು ನಿಶ್ಚಿತ ಎನ್ನಲಾಗಿದೆ.

Agencies 22 Oct 2018, 3:11 pm
ಹೊಸದಿಲ್ಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕ್ರಿಕೆಟ್‌ ದಿಗ್ಗಜರಾದ ಮಹೇಂದ್ರ ಸಿಂಗ್‌ ಧೋನಿ ಮತ್ತು ಗೌತಮ್‌ ಗಂಭೀರ್‌ ಸ್ಪರ್ಧಿಸುತ್ತಾರೆಯೇ ಎಂಬ ಚರ್ಚೆಗಳು ಆರಂಭವಾಗಿವೆ.
Vijaya Karnataka Web Dhoni Gambhir


ಧೋನಿ ಹಾಗೂ ಗಂಭೀರ್‌ ಅವರಿಗೆ ಟಿಕೆಟ್‌ ನೀಡಲು ಬಿಜೆಪಿ ಭಾರಿ ಉತ್ಸಾಹ ತೋರುತ್ತಿದ್ದು, ಇಬ್ಬರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದೆ ಎನ್ನಲಾಗಿದೆ. ಒಂದು ವೇಳೆ ಇಬ್ಬರು ಬಿಜೆಪಿ ಸೇರ್ಪಡೆಗೊಂಡರೆ ಜಾರ್ಖಾಂಡ್‌ನಿಂದ ಎಂಎಸ್‌ ಧೋನಿ ಮತ್ತು ದಿಲ್ಲಿಯಿಂದ ಗಂಭೀರ್‌ ಅಭ್ಯರ್ಥಿಗಳಾಗುವುದು ನಿಶ್ಚಿತ ಎನ್ನಲಾಗಿದೆ.

ಪ್ರಸ್ತುತ ಚೆನ್ನೈ ಸೂಪರ್‌ ಕಿಂಗ್ಸ್‌ ನಾಯಕರಾಗಿರುವ ಮಹೇಂದ್ರ ಸಿಂಗ್‌ ಧೋನಿ ಅವರಿಗೆ ಜಾರ್ಖಾಂಡ್‌ನಿಂದ ಸ್ಪರ್ಧಿಸುವಂತೆ ಬಿಜೆಪಿ ನಾಯಕರು ಆಹ್ವಾನಿಸಿದ್ದಾರೆ ಎನ್ನಲಾಗಿದೆ.

ದಿಲ್ಲಿ ಸಂಸದೆ ಮೀನಾಕ್ಷಿ ಲೇಖಿ ಅವರ ಬದಲಾಗಿ ಮುಂಬರುವ ಚುನಾವಣೆ ಅಭ್ಯರ್ಥಿಯನ್ನಾಗಿ ಗಂಭೀರ್‌ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ ಎಂದು ದಿ ಸಂಡೇ ಗಾರ್ಡಿಯನ್‌ ವರದಿ ಮಾಡಿದೆ. ಲೇಖಿ ಅವರ ಕಾರ್ಯ ವೈಖರಿ ಬಗ್ಗೆ ಅಲ್ಲಿನ ಜನತೆ ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿದೆ.

ಗಂಭೀರ್‌ ಸಾಕಷ್ಟು ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದು, ಲೇಖಿ ಬದಲಾಗಿ ಗಂಭೀರ್‌ಗೆ ಟಿಕೆಟ್‌ ನೀಡಬೇಕು ಎಂದು ಸ್ಥಳೀಯ ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ