ಆ್ಯಪ್ನಗರ

ವಿಶ್ವಕಪ್‌ ಗೆದ್ದ ಏಳನೇ ವಾರ್ಷಿಕೋತ್ಸವದ ದಿನ ಪದ್ಮಭೂಷಣ ಪ್ರಶಸ್ತಿ ಪಡೆದ ಧೋನಿ

ಪಂಕಜ್‌ ಆಡ್ವಾಣಿಗೂ ಪ್ರಶಸ್ತಿ ಪ್ರದಾನ

Vijaya Karnataka Web 2 Apr 2018, 8:31 pm
ಹೊಸದಿಲ್ಲಿ: ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಹಾಗೂ ವಿಶ್ವ ಸ್ನೂಕರ್‌ ಚಾಂಪಿಯನ್‌ ಪಂಕಜ್‌ ಆಡ್ವಾಣಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಸಲಾಯಿತು.
Vijaya Karnataka Web ms dhoni receives padma bhushan
ವಿಶ್ವಕಪ್‌ ಗೆದ್ದ ಏಳನೇ ವಾರ್ಷಿಕೋತ್ಸವದ ದಿನ ಪದ್ಮಭೂಷಣ ಪ್ರಶಸ್ತಿ ಪಡೆದ ಧೋನಿ


ಸೋಮವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಉಭಯರಿಗೂ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಮಹೇಂದ್ರ ಸಿಂಗ್‌ ಧೋನಿಗೆ ಇದು ವಿಶೇಷ ದಿನ. ಏಳು ವರ್ಷಗಳ ಹಿಂದೆ ಇದೇ ದಿನ ಅಂದರೆ ಏಪ್ರಿಲ್‌ 2, 2011ರಂದು ಧೋನಿ ಭಾರತಕ್ಕೆ ವಿಶ್ವಕಪ್‌ ಕ್ರಿಕೆಟ್‌ ಟ್ರೋಫಿ ದೊರಕಿಸಿಕೊಟ್ಟಿದ್ದರು.



ಏಳು ವರ್ಷಗಳ ನಂತರ ಇದೇ ದಿನ ಧೋನಿ ಲೆಫ್ಟಿನೆಂಟ್‌ ಕರ್ನಲ್‌ ಸಮವಸ್ತ್ರ ಧರಿಸಿ ಬಂದು ಪ್ರಶಸ್ತಿ ಸ್ವೀಕರಿಸಿದರು.

ವಿಶ್ವಕಪ್‌ ಗೆದ್ದ ನಂತರ ನವೆಂಬರ್‌ 1, 2011ರಂದು ಧೋನಿಗೆ ಸೇನೆಯಿಂದ ಗೌರವ ಲೆಫ್ಟಿನೆಂಟ್‌ ಕರ್ನಲ್‌ ಗೌರವ ನೀಡಿತ್ತು.

ಪಂಕಜ್‌ ಆಡ್ವಾಣಿ ಕೂಡ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ