ಆ್ಯಪ್ನಗರ

ರಾಹುಲ್ ಗಾಂಧಿ ಸುಳ್ಳು, ವಂಚನೆ ತುಂಬಿರುವ ನಕಲಿ ಲ್ಯಾಪ್‌ಟಾಪ್‌ ಎಂದ ನಖ್ವಿ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು 'ಸುಳ್ಳು ಹಾಗೂ ವಂಚನೆ ತುಂಬಿರುವ ನಕಲಿ ಲ್ಯಾಪ್‌ಟಾಪ್‌' ಎಂದು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಟೀಕಿಸಿದ್ದಾರೆ.

TIMESOFINDIA.COM 20 Sep 2018, 11:43 am
ರಾಂಚಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು 'ಸುಳ್ಳು ಹಾಗೂ ವಂಚನೆ ತುಂಬಿರುವ ನಕಲಿ ಲ್ಯಾಪ್‌ಟಾಪ್‌' ಎಂದು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಟೀಕಿಸಿದ್ದಾರೆ.
Vijaya Karnataka Web nakhvi


ಪ್ರತಿಪಕ್ಷಗಳ ಮಹಾಘಟಬಂಧನವನ್ನು ಬಲೂನ್‌ಗೆ ಹೋಲಿಸಿರುವ ಅವರು, 2019ರ ಲೋಕಸಭೆ ಚುನಾವಣೆ ಮುನ್ನವೇ ಅದು ಒಡೆದುಹೋಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಜಾರ್ಖಂಡ್‌ನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ನಖ್ವಿ, ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಪರಿಣಾಮ 2019ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಮೇಲುಗೈ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಹೆಚ್ಚುತ್ತಲೇ ಇದೆ. ಮೋದಿ ಅಧಿಕಾರ ವಹಿಸಿಕೊಂಡ ಬಳಿಕ ವಿಶ್ವವೇ ಭಾರತದತ್ತ ನೋಡುವಂತಾಗಿದೆ ಎಂದು ಕೇಂದ್ರದ ಅಲ್ಪಸಂಖ್ಯಾತ ಸಚಿವ ನಖ್ವಿ ಶ್ಲಾಘಿಸಿದ್ದಾರೆ.

ಧಾನ್ಯ ಹಾಗೂ ಖಾದ್ಯ ತೈಲ ಬೆಲೆ ನಿಯಂತ್ರಣದಲ್ಲಿದ್ದು, ಬೇಳೆಕಾಳು ಮತ್ತು ಈರುಳ್ಳಿ ಸೇರಿದಂತೆ ದಿನಬಳಕೆಯ ವಸ್ತುಗಳ ದಾಸ್ತಾನಿಗೆ ಕೊರತೆ ಇಲ್ಲ ಎಂದು ಹೇಳಿರುವ ಅವರು, ರೈತರು ರಸಗೊಬ್ಬರ ಹಾಗೂ ಡೀಸೆಲ್‌ಗಾಗಿ ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇಲ್ಲ. ಎಲ್ಲವನ್ನು ಸಮರ್ಪಕವಾಗಿ ಪೂರೈಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ