ಆ್ಯಪ್ನಗರ

ಲೋಕದಳ ಪರ ಮುಲಾಯಂ ಪ್ರಚಾರ

ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದಂತೆ ಸಮಾಜವಾದಿ ಪಕ್ಷದ ಮುತ್ಸದ್ಧಿ ಮುಲಾಯಂ ಸಿಂಗ್‌ ಯಾದವ್‌ ಅವರು ಇಟಾವಾದ ಜಸ್ವಂತ್‌ನಗರ ವಿಧಾನಸಭಾ ಕ್ಷೇತ್ರದಲ್ಲಿ ಮಗ ...

Vijaya Karnataka Web 12 Feb 2017, 2:00 am

ಇಟಾವಾ: ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದಂತೆ ಸಮಾಜವಾದಿ ಪಕ್ಷದ ಮುತ್ಸದ್ಧಿ ಮುಲಾಯಂ ಸಿಂಗ್‌ ಯಾದವ್‌ ಅವರು ಇಟಾವಾದ ಜಸ್ವಂತ್‌ನಗರ ವಿಧಾನಸಭಾ ಕ್ಷೇತ್ರದಲ್ಲಿ ಮಗ ಅಖಿಲೇಶ್‌ ಯಾದವ್‌ ವಿರುದ್ಧ ಸ್ಪರ್ಧಿಸಿರುವ ಲೋಕದಳ ಅಭ್ಯರ್ಥಿ ಪರವಾಗಿ ಮತ ಯಾಚಿಸಿದ್ದಾರೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಪ್ರಚಾರಕ್ಕೆ ಇಳಿದ ಮುಲಾಯಂ ರಾಜ್ಯದಲ್ಲಿ ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ಅಸಮರ್ಥವಾಗಿರುವ ಲೋಕದಳದ ಪರವಾಗಿ ಭಾಷಣ ಮಾಡಿದ್ದಾರೆ. ಅಖಿಲೇಶ್‌ ಅವರೇ ಮುಂದಿನ ಮುಖ್ಯಮಂತ್ರಿಯಾಗುವುದು ಎಂದು ಹೇಳುತ್ತಲೇ ಬಂದಿರುವ ಮುಲಾಯಂ ಅವರ ಈ ನಡೆ ಅಚ್ಚರಿ ಮೂಡಿಸಿದೆ.

ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಇಟಾವಾ ವಲಯದಲ್ಲಿರುವ ಎಲ್ಲ ಮೂರು ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷ ಜಯ ಗಳಿಸಿತ್ತು. ಈ ಬಾರಿ ಅತಂತ್ರ ಸ್ಥಿತಿ ಎದುರಿಸುತ್ತಿದೆ. ಫೆ.19ರಂದು ಈ ಭಾಗದಲ್ಲಿ ಮತದಾನ ನಡೆಯಲಿಕ್ಕಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ