ಆ್ಯಪ್ನಗರ

ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಆಸ್ಪತ್ರೆಗೆ ದಾಖಲು

ಮುಲಾಯಂ ಸಿಂಗ್ ಅವರಿಗೆ ಚಿಕಿತ್ಸೆ ನೀಡುವ ಮೆದಾಂತ್ ಆಸ್ಪತ್ರೆಯ ಖ್ಯಾತ ವೈದ್ಯ ಡಾ.ರಾಕೇಶ್ ಕಪೂರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಮುಲಾಯಂ ಸಿಂಗ್ ಅವರು ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಸರಿಯಾಗಿ ಆಹಾರವನ್ನೂ ತೆಗೆದುಕೊಳ್ಳುತ್ತಿರಲಿಲ್ಲ. ಈಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

Hindustan Times 8 Aug 2020, 9:55 am
ಲಖನೌ: ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರು ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
Vijaya Karnataka Web mulayam singh yadav


ಕೇರಳದಲ್ಲಿ ಏರ್‌ ಇಂಡಿಯಾ ವಿಮಾನ ದುರಂತ: ಪೈಲಟ್‌ ಸಾವು; ರಾಷ್ಟ್ರಪತಿ ಪದಕ ಪಡೆದಿದ್ದ ದೀಪ

ಶುಕ್ರವಾರ ಸಂಜೆ ದಿಢೀರನೇ ಹೊಟ್ಟೆನೋವು ಕಾಣಿಸಿಕೊಂಡ ಮುಲಾಯಂ ಸಿಂಗ್ ಅವರನ್ನು ಲಖನೌದ ಮೆದಾಂತ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆಸ್ಪತ್ರೆ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದ ಹಿನ್ನೆಲೆ ಇದೇ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಮತ್ತೊಮ್ಮೆ ಉದರ ಸಂಬಂಧಿ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಕ್ಸ್‌ಫರ್ಡ್‌, ನೊವವ್ಯಾಕ್ಸ್‌ ಸಂಭಾವ್ಯ ಕೊರೊನಾ ಲಸಿಕೆಗೆ 225 ರೂ. ದರ ನಿಗದಿ

ಮುಲಾಯಂ ಸಿಂಗ್ ಅವರಿಗೆ ಚಿಕಿತ್ಸೆ ನೀಡುವ ಮೆದಾಂತ್ ಆಸ್ಪತ್ರೆಯ ಖ್ಯಾತ ವೈದ್ಯ ಡಾ.ರಾಕೇಶ್ ಕಪೂರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಮುಲಾಯಂ ಸಿಂಗ್ ಅವರು ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಸರಿಯಾಗಿ ಆಹಾರವನ್ನೂ ತೆಗೆದುಕೊಳ್ಳುತ್ತಿರಲಿಲ್ಲ. ಈಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ಪಕ್ಷವೊಂದು ಚೀನಾದೊಂದಿಗೆ ವ್ಯವಹರಿಸಲು ಹೇಗೆ ಸಾಧ್ಯ?: ಕಾಂಗ್ರೆಸ್-ಚೀನಾ ಒಪ್ಪಂದ

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಯಾಗಿರೋ ಮುಲಾಯಂ ಸಿಂಗ್, ಉತ್ತರಪ್ರದೇಶದ ಮೈನ್‌ಪುರಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಸಮಾಜವಾದಿ ಪಕ್ಷವನ್ನು ಕಟ್ಟಿ ಅಧಿಕಾರಕ್ಕೆ ತರಲು ಶ್ರಮಿಸಿದ್ದ ಯಾದವ್, ಮೂರು ಅವಧಿಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ