ಆ್ಯಪ್ನಗರ

ಝಾಕೀರ್‌ ನಾಯ್‌್ಕ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್‌

ಕಳೆದ ವಾರವಷ್ಟೇ ಝಾಕೀರ್‌ ಪರ ವಕೀಲರು ಕೋರ್ಟ್‌ಗೆ ಹಾಜರಾಗಲು ಎರಡು ತಿಂಗಳ ಕಾಲಾವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು.

PTI 19 Sep 2019, 5:00 am
ಮುಂಬಯಿ: ಮಲೇಷ್ಯಾದಲ್ಲಿನೆಲೆಸಿರುವ ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಝಾಕೀರ್‌ ನಾಯ್‌್ಕ ವಿರುದ್ಧ ಮುಂಬಯಿ ವಿಶೇಷ ನ್ಯಾಯಾಲಯ ಹೊಸದಾಗಿ ಜಾಮೀನು ರಹಿತ ಬಂಧನ ವಾರಂಟ್‌ ಜಾರಿಗೊಳಿಸಿದೆ. ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಸಲ್ಲಿಸಿದ ಮನವಿ ಆಲಿಸಿದ ವಿಶೇಷ ಕೋರ್ಟ್‌ ನ್ಯಾಯಾಧೀಶ ಪಿ.ಪಿ.ರಾಜ್‌ವಾಡಿಯಾ ಅವರು ಝಾಕೀರ್‌ ವಿರುದ್ಧ ವಾರಂಟ್‌ ಜಾರಿಗೊಳಿಸಿದರು. ಕಳೆದ ವಾರವಷ್ಟೇ ಝಾಕೀರ್‌ ಪರ ವಕೀಲರು ಕೋರ್ಟ್‌ಗೆ ಹಾಜರಾಗಲು ಎರಡು ತಿಂಗಳ ಕಾಲಾವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಝಾಕೀರ್‌ ಕೆಲವು ಸಂಸ್ಥೆಗಳ ಮೂಲಕ 193 ಕೋಟಿ ರೂ. ಅಕ್ರಮ ವಹಿವಾಟು ನಡೆಸಿದ್ದಾನೆಂದು ಇ.ಡಿ. ಆರೋಪಿಸಿದೆ.
Vijaya Karnataka Web zakir

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ