ಆ್ಯಪ್ನಗರ

ರಾಹುಲ್‌ ಕಡೆ ಬೊಟ್ಟು ಮಾಡಿದ ದಿಗ್ವಿಜಯ್‌

ಕಾಂಗ್ರೆಸ್‌ ಸೋಲಿಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್‌ ಸಿಂಗ್‌ ಸಹ ರಾಹುಲ್‌ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಏಜೆನ್ಸೀಸ್ 19 Mar 2017, 1:01 pm
ಹೊಸದಿಲ್ಲಿ: ಪಂಜಾಬ್‌ ಹೊರತುಪಡಿಸಿ ಉಳಿದ ನಾಲ್ಕು ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಿಗೆ ಪಕ್ಷದ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರತ್ತ ಬೊಟ್ಟು ಮಾಡಿರುವ ಬೆನ್ನಿಗೇ ಪಕ್ಷದ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್‌ ಸಿಂಗ್‌ ಸಹ ರಾಹುಲ್‌ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
Vijaya Karnataka Web my complaint against congress vice president is hes not acting decisively congress leader digvijaya singh
ರಾಹುಲ್‌ ಕಡೆ ಬೊಟ್ಟು ಮಾಡಿದ ದಿಗ್ವಿಜಯ್‌


ಗೋವಾದಲ್ಲಿ ಹೆಚ್ಚು ಸ್ಥಾನಗಳನ್ನು ಪಡೆದು ಕಾಂಗ್ರೆಸ್‌ ಸರಕಾರ ರಚನೆ ಹಕ್ಕು ಮಂಡಿಸಲು ವಿಫಲವಾಗಿದ್ದಕ್ಕೆ ದಿಗ್ವಿಜಯ್‌ ಸಿಂಗ್‌ ಕಾರಣ ಎಂದು ಕಾಂಗ್ರೆಸ್‌ ನಾಯಕರು ಬಹಿರಂಗ ಆರೋಪ ಮಾಡಿದ್ದಾರೆ. ಈ ಆರೋಪದ ನಡುವೆಯೇ ದಿಗ್ವಜಯ್‌ ಸಿಂಗ್‌ ರಾಹುಲ್‌ ಗಾಂಧಿ ವಿರುದ್ದ ಕಿಡಿಕಾರಿದ್ದಾರೆ.

'ರಾಹುಲ್ ಗಾಂಧಿಯವರು ನಿರ್ಣಾಯಕ ತೀರ್ಮಾನಗಳನ್ನು ಕೈಗೊಳ್ಳುವಲ್ಲಿ ವಿಫಲವಾಗುತ್ತಿದ್ದಾರೆ. ರಾಹುಲ್ ಅವರ ಪಾತ್ರ ನಿರ್ಣಾಯಕವಾಗಿದ್ದು, ಅವರು ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿಲ್ಲ,'ಎಂದು ಆಂಗ್ಲ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ದೂರಿದ್ದಾರೆ.

'ಹೊಸ ಕಾಂಗ್ರೆಸ್‌, ಹೊಸ ಅಧ್ಯಾಯ, ಹೊಸ ಪಥ, ಹೊಸ ರೀತಿಯ ಪ್ರಚಾರಾಂದೋಲನ ಬೇಕು. ಹೊಸ ಕಾಂಗ್ರೆಸ್‌ ಕಟ್ಟಿ ಬೆಳೆಸಬೇಕಿದೆ. ಅದು ರಾಹುಲ್‌ ಗಾಂಧಿ ಅವರಿಂದ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ಅವರು ಕಾರ್ಯೋನ್ಮುಖರಾಗಬೇಕು. ನಿರ್ಣಾಯಕ ತೀರ್ಮಾನಗಳನ್ನು ಎಚ್ಚರಿಕೆಯಿಂದ ಕೈಗೊಳ್ಳಬೇಕು. ಈ ಮಾತನ್ನು ಅವರಿಗೆ ಸಾಕಷ್ಟು ಬಾರಿ ಹೇಳಿದ್ದೇನೆ. ಇದರಿಂದ ಅವರಿಗೆ ಕೋಪವೂ ಬಂದಿದೆ,'ಎಂದು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ