ಆ್ಯಪ್ನಗರ

'ನನ್ನ ತಂದೆ ಇನ್ನೂ ಜೀವಂತವಾಗಿದ್ದಾರೆ. ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸಬೇಡಿ' : ಅಭಿಜಿತ್ ಮುಖರ್ಜಿ

ಕೆಲವು ಕಿಡಿಗೇಡಿಗಳು ಪ್ರಣಬ್ ಮುಖರ್ಜಿ ಸಾವನ್ನಪ್ಪಿದ್ದಾರೆ ಎನ್ನುವ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಮಟ್ಟಕ್ಕೆ ತಲುಪಿತ್ತು. ರಾಷ್ಟ್ರೀಯ ಚಾನೆಲ್‌ವೊಂದರಲ್ಲಿ ಕೂಡ ಈ ಬಗ್ಗೆ ಸುಳ್ಳು ಸುದ್ದಿ ಹರಿದಾಡಿದ್ದು, ಈ ಬಗ್ಗೆ ಬೇಸರಗೊಂಡಿರುವ ಪ್ರಣಬ್ ಮುಖರ್ಜಿ ಅವರ ಪುತ್ರ ಟ್ವೀಟ್‌ ಮೂಲಕ ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಮನವಿ ಮಾಡಿದ್ದಾರೆ.

Vijaya Karnataka Web 13 Aug 2020, 10:20 am
ಹೊಸದಿಲ್ಲಿ: ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಆಸ್ಪತ್ರೆಯಲ್ಲಿ ಮಲಗಿದ್ದಾರೆ. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣ ಎರಡು ದಿನದ ಹಿಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು ನಂತರ ವೈದ್ಯರ ಚಿಕಿತ್ಸೆಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ಧಾರೆ.
Vijaya Karnataka Web Pranab mukherjee


ಪ್ರಣಬ್‌ ಮುಖರ್ಜಿ ಆರೋಗ್ಯ ಮತ್ತಷ್ಟು ಗಂಭೀರ; ವರ್ಷದ ಹಿಂದಿನ ಘಟನೆ ಸ್ಮರಿಸಿ ಪ್ರಾರ್ಥಿಸಿದ

ಈ ಮಧ್ಯೆ ಕೆಲವು ಕಿಡಿಗೇಡಿಗಳು ಪ್ರಣಬ್ ಮುಖರ್ಜಿ ಸಾವನ್ನಪ್ಪಿದ್ದಾರೆ ಎನ್ನುವ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಮಟ್ಟಕ್ಕೆ ತಲುಪಿತ್ತು. ರಾಷ್ಟ್ರೀಯ ಚಾನೆಲ್‌ವೊಂದರಲ್ಲಿ ಕೂಡ ಈ ಬಗ್ಗೆ ಸುಳ್ಳು ಸುದ್ದಿ ಹರಿದಾಡಿದ್ದು, ಈ ಬಗ್ಗೆ ಬೇಸರಗೊಂಡಿರುವ ಪ್ರಣಬ್ ಮುಖರ್ಜಿ ಅವರ ಪುತ್ರ ಟ್ವೀಟ್‌ ಮೂಲಕ ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಮನವಿ ಮಾಡಿದ್ದಾರೆ.

ಕೊರೊನಾ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಕವಿ ರಾಹತ್ ಇಂದೋರಿ ಇನ್ನಿಲ್ಲ

ಈ ಬಗ್ಗೆ ತಮ್ಮ ಟ್ವೀಟ್‌ನಲ್ಲಿ ಬರೆದುಕೊಂಡಿರುವ ಅಭಿಜಿತ್ ಮುಖರ್ಜಿ, ‘ನನ್ನ ತಂದೆ ಇನ್ನೂ ಜೀವಂತವಾಗಿದ್ದಾರೆ. ಮತ್ತು ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಹೆಸರಾಂತ ಪತ್ರಕರ್ತರು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುತ್ತಿರುವ ಊಹಾಪೋಹಗಳು ಮತ್ತು ಸುಳ್ಳು ಸುದ್ದಿಗಳು ಭಾರತದಲ್ಲಿ ಮಾಧ್ಯಮವು ಸುಳ್ಳು ಸುದ್ದಿಯ ಕಾರ್ಖಾನೆಯಾಗಿ ಮಾರ್ಪಟ್ಟಿದೆ ಎಂಬುದನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ; ವೆಂಟಿಲೇಟರ್‌ನಲ್ಲಿ

ಮಾಜಿ ರಾ‍ಷ್ಟ್ರಪತಿ ಪ್ರಣಬ್ ಅವರ ಪುತ್ರ ಅಭಿಜಿತ್ ಮುಖರ್ಜಿ ಅವರೇ ಸ್ಪಷ್ಟವಾಗಿರುವಂತೆ ಈಗ ಅವರ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ