ಆ್ಯಪ್ನಗರ

ಐಟಿ, ಇಡಿ ಅಧಿಕಾರ ಮೊಟಕುಗೊಳಿಸಲು ಸುಪ್ರೀಂಗೆ ಮನವಿ ಸಲ್ಲಿಸಲಿರುವ ಚಂದ್ರಬಾಬು ನಾಯ್ಡು

ಸಂಸದ ಸಿಎಂ ರಮೇಶ್, ಶಾಸಕ ಪೊಥುಲಾ ರಾಮರಾವ್ , ಮಾಜಿ ಶಾಸಕ ಬೀಡಾ ಮಸ್ತಾನ್ ರಾವ್ ಸೇರಿದಂತೆ ಟಿಡಿಪಿ ಮುಖಂಡರ ಉದ್ಯಮ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಹುಡುಕಾಟ ಪ್ರಾರಂಭಿಸಿದೆ.

TIMESOFINDIA.COM 19 Nov 2018, 12:12 pm
ಅಮರಾವತಿ: ರಾಜ್ಯದಲ್ಲಿ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಒಪ್ಪಿಗೆಯ ಅನುಮತಿಯನ್ನು ಹಿಂಪಡೆದು , ಈ ಮೂಲಕ ಕೇಂದ್ರ ಸರ್ಕಾರ ರಾಜ್ಯದಲ್ಲಿ ನಡೆಸುತ್ತಿದ್ದ ತನಿಖೆಗಳಿಗೆ ಬ್ರೇಕ್ ಹಾಕಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತೀಗ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯದಂತಹ ಕೇಂದ್ರೀಯ ಏಜೆನ್ಸಿಗಳ ಅಧಿಕಾರವನ್ನು ಮೊಟಕುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ.
Vijaya Karnataka Web Chandrababu Naidu


ಬಿಜೆಪಿಯ ಎಲ್ಲಾ ವಿರೋಧಿ ಪಕ್ಷಗಳೊಂದಿಗೆ ದಿಲ್ಲಿಯಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ (ಸಿಎಂಪಿ) ವನ್ನು ಸಿದ್ಧಗೊಳಿಸುತ್ತೇವೆ. ಸಿಎಂಪಿ ಸಿದ್ಧವಾದಾಗ ಎಲ್ಲ ವಿರೋಧ ಪಕ್ಷಗಳು ಸೇರಿ ಕೇಂದ್ರೀಯ ಏಜೆನ್ಸಿಗಳಿಗೆ ತಮ್ಮ ತಮ್ಮ ರಾಜ್ಯದಲ್ಲಿ ನಡೆಸುತ್ತಿರುವ ತನಿಖೆಯನ್ನು ನಿಲ್ಲಿಸುವಂತೆ ಕೇಂದ್ರೀಯ ಏಜೆನ್ಸಿಗಳಿಗೆ ಸೂಚನೆ ನೀಡಲಿವೆ. ಈ ಮೂಲಕ ಕೇಂದ್ರದ ರಾಜಕೀಯ ಅಜೆಂಡಾವನ್ನು ಹತ್ತಿಕ್ಕುವುದು ನಮ್ಮ ಉದ್ದೇಶ. ಬಳಿಕ ಎಲ್ಲ ಪಕ್ಷಗಳು ( ಬಿಜೆಪಿ ವಿರೋಧಿ) ಮತ್ತೊಂದು ಸಮಾಲೋಚನಾ ಸಭೆ ನಡೆಸಲಿವೆ. ಅಗತ್ಯವಿದ್ದರೆ ಮತ್ತು ಒಮ್ಮತವಾದರೆ, ಆದಾಯ ತೆರಿಗೆ ಮತ್ತು ಇಡಿ ಅಧಿಕಾರಿಗಳನ್ನು ಮೊಟಕುಗೊಳಿಸುವಂತೆ ಸರ್ವೋಚ್ಚ ನ್ಯಾಯಾಲಯಕ್ಕೆ ಈ ಬಗ್ಗೆ ಮನವಿ ಮಾಡಿಕೊಳ್ಳುತ್ತೇವೆ ಎಂದು ಟಿಡಿಪಿ ಸಂಸದರೊಬ್ಬರು ತಿಳಿಸಿದ್ದಾರೆ.

ಸಂಸದ ಸಿಎಂ ರಮೇಶ್, ಶಾಸಕ ಪೊಥುಲಾ ರಾಮರಾವ್ , ಮಾಜಿ ಶಾಸಕ ಬೀಡಾ ಮಸ್ತಾನ್ ರಾವ್ ಸೇರಿದಂತೆ ಟಿಡಿಪಿ ಮುಖಂಡರ ಉದ್ಯಮ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಹುಡುಕಾಟ ಪ್ರಾರಂಭಿಸಿದೆ. ಇದೆಲ್ಲ ನಡೆಯುತ್ತಿರುವುದು ನಾವು ಎನ್‌ಡಿಎ ಕೂಟದಿಂದ ಹೊರಬಿದ್ದ ಮೇಲೆ ಎಂದು ಟಿಡಿಪಿ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಸಿಬಿಐ, ಜಾರಿ ನಿರ್ದೇಶನಾಲಯ (ಇಡಿ), ಅದಾಯ ತೆರಿಗೆ ಇಲಾಖೆ (ಐಟಿ) ತನಿಖಾಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ತಮ್ಮ ರಾಜಕೀಯ ವೈರಿಗಳ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ನಾಯ್ಡು ಇತ್ತೀಚೆಗೆ ಆರೋಪಿಸಿದ್ದರು. ಇದರ ಬೆನ್ನಲ್ಲೇ, ರಾಜ್ಯದಲ್ಲಿ ಸಿಬಿಐ ಅಧೀನದಲ್ಲಿರುವ ಎಲ್ಲಾ ಪ್ರಕರಣಗಳ ತನಿಖೆಯನ್ನು ನಡೆಸಲು ಸಿಬಿಐ ಬದಲಾಗಿ ಎಸಿಬಿ (ಭ್ರಷ್ಟಚಾರ ನಿಗ್ರಹ ದಳ)ಗೆ ಜವಾಬ್ದಾರಿಯನ್ನ ವರ್ಗಾವಣೆ ಮಾಡಲಾಗಿದೆ ಎಂದು ಆಂಧ್ರ ಪ್ರದೇಶ ಸರ್ಕಾರ ಅಧಿಸೂಚನೆ ಹೊರಡಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ