ಆ್ಯಪ್ನಗರ

ಕನ್ನಡದಲ್ಲೇ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಎಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ. ವರ್ಷದ ಕಹಿ ಘಟನೆಗಳನ್ನೆಲ್ಲ ಮರೆತು ಈ ಹೊಸ ವರ್ಷ ಸಹಿ ತುಂಬಲಿ ಎಂದು ಹಾರೈಸಿ ಪ್ರತಿಯೊಬ್ಬರ ಮನೆ ಮನಗಳಲ್ಲಿ ಯುಗಾದಿ ಹಬ್ಬವನ್ನು ಆಚರಿಸಲಾಗ್ತಿದೆ. ದೇಶದೆಲ್ಲೆಡೆ ಕೊರೊನಾ ಮಧ್ಯೆಯೂ ಸಡಗರದಿಂದ ಯುಗಾದಿ ಆಚರಿಸಲಾಗ್ತಿದ್ದು,ಕನ್ನಡ ಜನತೆಗೆ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ಕೋವಿಂದ್ ಯುಗಾದಿ ಹಬ್ಬದ ಶುಭಾಶಯ ಸಲ್ಲಿಸಿದ್ದಾರೆ.

Vijaya Karnataka Web 13 Apr 2021, 9:15 am
ಹೊಸದಿಲ್ಲಿ: ಇಂದು ಎಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ.ಕೊರೊನಾ ಭೀತಿಯ ಮಧ್ಯೆಯೂ ಜನರು ಬೇವು ಬೆಲ್ಲಗಳನ್ನು ಹಂಚಿ ಸಂಭ್ರಮದಿಂದ ಹೊಸ ವರ್ಷಾಚರಣೆಯನ್ನು ಆಚರಿಸುತ್ತಿದ್ದಾರೆ.
Vijaya Karnataka Web PM Modi and President Kovind


ಈ ಮಧ್ಯೆ ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಯುಗಾದಿ ಹಬ್ಬದ ಶುಭಾಷಯವನ್ನು ತಿಳಿಸಿದ್ದಾರೆ. ಈ ಸಂಬಂಧ ಕನ್ನಡದಲ್ಲೇ ಪ್ರಧಾನಿಯವರ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಕನ್ನಡಿಗರಿಗೆ ಯುಗಾದಿ ಹಬ್ಬದ ಶುಭಾಶಯವನ್ನು ತಿಳಿಸಿದ್ದು, ‘ನಿಮ್ಮೆಲ್ಲರಿಗೂ ಯುಗಾದಿಯ ಶುಭ ಕಾಮನೆಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗು ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ.’ ಎಂದು ಮೋದಿ ಹಾರೈಸಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಕನ್ನಡ ಜನತೆಗೆ ಯುಗಾದಿ ಹಬ್ಬದ ಶುಭಾಷಯ ಸಲ್ಲಿಸಿದ್ದು, ಕನ್ನಡದಲ್ಲೇ ಟ್ವೀಟ್‌ ಮಾಡಿರುವ ಅವರು, ‘ಯುಗಾದಿ ಹಬ್ಬದ ಈ ಸಮಯದಲ್ಲಿ ಕರ್ನಾಟಕದ ನಮ್ಮ ಸಹೋದರ, ಸಹೋದರಿಯರಿಗೆ ಹಾಗೂ ವಿಶ್ವದೆಲ್ಲೆಡೆ ಇರುವ ಕನ್ನಡಿಗರಿಗೆ ಶುಭಾಶಯಗಳು ಮತ್ತು ಶುಭಹಾರೈಕೆಗಳು. ಈ ಶುಭ ಸಂದರ್ಭವು ಎಲ್ಲರಿಗೂ ಒಳ್ಳೆಯ ಆರೋಗ್ಯ, ನೆಮ್ಮದಿ ಹಾಗು ಸಮೃದ್ಧತೆ ತರಲಿ’ ಎಂದು ಹಾರೈಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ