ಆ್ಯಪ್ನಗರ

₹50 ಸಾವಿರ ಕೋಟಿ ಮೊತ್ತದ ಗರೀಬ್ ಕಲ್ಯಾಣ ಯೋಜನೆಗೆ ನರೇಂದ್ರ ಮೋದಿ ಚಾಲನೆ!

ವಲಸೆ ಕಾರ್ಮಿಕರಿಗೆ ಉದ್ಯೋಗ ಸೃಷ್ಟಿಸಲೆಂದೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ರೂ.50 ಸಾವಿರ ಕೋಟಿ ಮೊತ್ತದ 'ಗರೀಬ್ ಕಲ್ಯಾಣ್ ರೋಜ್ಗಾರ್ ಅಭಿಯಾನ್ (ಜಿಕೆಆರ್‌ಎ)' ಉದ್ಯೋಗ ಯೋಜನೆಗೆ ಚಾಲನೆ ನೀಡಿದ್ದಾರೆ.

Vijaya Karnataka Web 20 Jun 2020, 3:29 pm
ನವದೆಹಲಿ: ಕೊರೊನಾ ಲಾಕ್‌ಡೌನ್‌ ಪರಿಣಾಮವಾಗ ಸ್ವಂತ ಊರುಗಳಿಗೆ ಹಿಂದಿರುಗಿರುವ ವಲಸೆ ಕಾರ್ಮಿಕರಿಗೆ ಉದ್ಯೋಗ ಸೃಷ್ಟಿಸಲೆಂದೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ರೂ.50 ಸಾವಿರ ಕೋಟಿ ಮೊತ್ತದ 'ಗರೀಬ್ ಕಲ್ಯಾಣ್ ರೋಜ್ಗಾರ್ ಅಭಿಯಾನ್ (ಜಿಕೆಆರ್‌ಎ)' ಉದ್ಯೋಗ ಯೋಜನೆಗೆ ಚಾಲನೆ ನೀಡಿದ್ದಾರೆ.
Vijaya Karnataka Web modi new 2


ಪ್ರಧಾನಿ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಶನಿವಾರ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಯುವಕರು ಮತ್ತು ಮಹಿಳೆಯರಿಗೆ ಇಂದು ಇದು ಉತ್ತಮ ಯೋಜನೆಯಾಗಿದೆ. ಲಾಕ್ ಡೌನ್ ಸಮಯದಲ್ಲಿ ಜನರು ಹೆಚ್ಚು ಸಂಖ್ಯೆಯಲ್ಲಿ ಗ್ರಾಮಗಳಿಗೆ ಮರಳಿದ್ದಾರೆ.

ತಮ್ಮ ಶ್ರಮ ಹಾಗೂ ಕೌಶಲ್ಯದ ಮೂಲಕ ಗ್ರಾಮವನ್ನು ಅಭಿವೃದ್ಧಿ ಪಡಿಸಲು ಈ ಯೋಜನೆ ಅನುಕೂಲ ಮಾಡಿಕೊಡಲಿದೆ. ಜನರ ಭಾವನೆ ಹಾಗೂ ಅಗತ್ಯತೆಗಳನ್ನು ದೇಶ ಅರ್ಥಮಾಡಿಕೊಳ್ಳುತ್ತದೆ. 6 ರಾಜ್ಯಗಳ 116 ಗ್ರಾಮಗಳಲ್ಲಿ ಯೋಜನೆ ಮುನ್ನಡೆಯಲಿದೆ ಎಂದು ಹೇಳಿದರು.

ಗಡಿ ಕ್ಯಾತೆ ತೆಗೆದಿದ್ದಕ್ಕೆ ದಿಟ್ಟ ಉತ್ತರ: ಚೀನಾ ಎಫ್‌ಪಿಐ ನಿರ್ಬಂಧಕ್ಕೆ ಕ್ರಮ!

ಈ ಹಿಂದೆ ಕೊರೋನಾ ವೈರಸ್ ಲಾಕ್ಡೌನ್ ನಿಂದಾಗಿ ಕೆಲಸ ಬಿಟ್ಟು ತವರು ಸೇರಿದ್ದ ಸುಮಾರು 25 ಸಾವಿರ ವಲಸೆ ಕಾರ್ಮಿಕರನ್ನು ಯೋಜನೆ ನಿಮಿತ್ತ ಆಯ್ಕೆ ಮಾಡಲಾಗಿದೆ. ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಜಾರ್ಖಂಡ್ ಮತ್ತು ಒಡಿಶಾದ 116 ಜಿಲ್ಲೆಗಳ 25 ಸಾವಿರ ವಲಸೆ ಕಾರ್ಮಿಕರು ಕೇಂದ್ರ ಸರ್ಕಾರದ ಈ ಅಭಿಯಾನದ ಭಾಗವಾಗಿರಲಿದ್ದಾರೆ ಎಂದು ಹೇಳಿದರು. ಕರ್ನಾಟಕ ಈ ಯೋಜನೆಯಲ್ಲಿ ಪಾಲು ಹೊಂದಿಲ್ಲ.

ಹೋಂ ಕ್ವಾರಂಟೈನ್ಗೆ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ: ಇಲ್ಲಿವೆ ಹೊಸ ನಿಯಮಗಳು!

ಕೇಂದ್ರ ಸರ್ಕಾರದ ಈ ಯೋಜನೆಯಡಿಯಲ್ಲಿ 25 ಸಾವಿರ ವಲಸೆ ಕಾರ್ಮಿಕರು ಆರು ವಿವಿಧ ಕಾಮಗಾರಿ ಯೋಜನೆಗಳಲ್ಲಿ ಪಾಲ್ಗೊಳ್ಳಲ್ಲಿದ್ದಾರೆ. ವಾರ್ಷಿಕ 125 ದಿನಗಳ ಕಾಲ ಅವರಿಗೆ ಉದ್ಯೋಗ ದೊರೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ