ಆ್ಯಪ್ನಗರ

ದೇಶದ ಜನರಿಗೆ ಪ್ರಧಾನಿ ಮೋದಿ, ರಾಷ್ಟ್ರಪತಿಗಳಿಂದ ದೀಪಾವಳಿ ಶುಭಾಶಯ: ಏನು ಸಂದೇಶ ನೀಡಿದರು?

ಇಂದು ಬೆಳಕಿನ ಹಬ್ಬ ದೀಪಾವಳಿ. ಹಿಂದೂಗಳ ಅತ್ಯಂತ ಸಡಗರದ ಹಬ್ಬವಾಗಿದೆ. ಐದು ದಿನಗಳ ಕಾಲ ದೀಪಾವಳಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ಹಿನ್ನೆಲೆ ಇದೀಗ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ದೇಶದ ಜನರಿಗೆ ಶುಭಾಶಯ ತಿಳಿಸಿದ್ದಾರೆ.

Vijaya Karnataka Web 14 Nov 2020, 10:10 am
ನವದೆಹಲಿ: ದೇಶದ ಪ್ರಜೆಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಳಕಿನ ಹಬ್ಬ ದೀಪಾವಳಿಗೆ ಶುಭಾಶಯಗಳನ್ನು ಕೋರಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು "ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು. ಈ ಹಬ್ಬವು ಎಲ್ಲರ ಬಾಳಿನಲ್ಲಿ ಮತ್ತಷ್ಟು ಬೆಳಕು ಹಾಗೂ ಸಂತೋಷವನ್ನು ನೀಡಲಿ. ದೇವರು ಎಲ್ಲರಿಗೂ ಸಮೃದ್ಧಿ ಹಾಗೂ ಆರೋಗ್ಯವನ್ನು ನೀಡಲಿ"ಅಂತ ಆಶಿಸುತ್ತೇನೆಂದು ಎಂದು ಮೋದಿ ಹೇಳಿದ್ದಾರೆ.
Vijaya Karnataka Web PM Modi
ಸಂಗ್ರಹ ಚಿತ್ರ




ಗುರುವಾರ ಕೂಡ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ, ಧೈರ್ಯದಿಂದ ದೇಶದ ಗಡಿ ಕಾಯುತ್ತಿರುವ ನಮ್ಮ ವೀರ ಯೋಧರನ್ನು ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಅವರ ಕುಟುಂಬಕ್ಕೆ ನಾವು ಕೃತಜ್ಞರಾಗಿರುತ್ತೇವೆ. ಅವರ ಹೆಸರಿನಲ್ಲಿ ದೀಪವನ್ನು ಬೆಳಗಿ ಎಂದು ಮೋದಿ ಜನರಿಗೆ ಕರೆ ನೀಡಿದ್ದರು.


ಇನ್ನು ದೇಶದ ಮೊದಲ ಪ್ರಜೆ, ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಕೂಡ ಬೆಳಕಿನ ಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ. ಭಾರತ ಮತ್ತು ವಿದೇಶಗಳಲ್ಲಿ ವಾಸಿಸುವ ಎಲ್ಲಾ ಪ್ರಜೆಗಳಿಗೆ ದೀಪಾವಳಿಯಂದು ನನ್ನ ಹೃತ್ಪೂರ್ವಕ ಶುಭಾಶಯಗಳು. ಸಂತೋಷ ಮತ್ತು ಬೆಳಕಿನ ಈ ಭವ್ಯ ಉತ್ಸವವು ನಮ್ಮ ದೇಶದ ಪ್ರತಿಯೊಂದು ಮನೆಗೂ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ ಅಂತ ಆಶಿಸುತ್ತಿರುವುದಾಗಿ ತಿಳಿಸಿದ್ದಾರೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ