ಆ್ಯಪ್ನಗರ

ಬಿಹಾರದಲ್ಲಿ ಎನ್‌ಆರ್‌ಸಿ ಜಾರಿ ಸಾಧ್ಯವಿಲ್ಲ: ನಿತೀಶ್‌ ಕುಮಾರ್‌

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಬಿಜೆಪಿ ವಿರುದ್ಧ ಹಾಗೂ ನರೇಂದ್ರ ಮೋದಿ ವಿರುದ್ಧ ತಮ್ಮದೇ ರೀತಿಯಲ್ಲಿ ಅಂತರ ಕಾಪಾಡಿಕೊಂಡಿದ್ದಾರೆ. ಈಗ ಎನ್‌ಆರ್‌ಸಿ ವಿಷಯದಲ್ಲಿಯೂ ನಿತೀಶ್‌ ಕುಮಾರ್‌ ತಮ್ಮ ಅಭಿಪ್ರಾಯವನ್ನು ಮಂಡಿಸಿದ್ದಾರೆ.

Vijaya Karnataka Web 13 Jan 2020, 6:06 pm
ಪಟನಾ: ಎನ್‌ಡಿಎ ಮೈತ್ರಿಕೂಟದಲ್ಲಿದ್ದರೂ ಬಿಜೆಪಿ ವಿರುದ್ಧವಾಗಿ ಅಂತರ ಇಟ್ಟುಕೊಂಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಈಗ ಮತ್ತೊಮ್ಮೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
Vijaya Karnataka Web ನಿತೀಶ್‌ ಕುಮಾರ್
ನಿತೀಶ್‌ ಕುಮಾರ್


ರಾಷ್ಟ್ರೀಯ ನಾಗರಿಕ ನೋಂದಣಿ (ಎನ್‌ಆರ್‌ಸಿ)ಯನ್ನು ದೇಶಾದ್ಯಂತ ಜಾರಿಗೆ ತರುವುದು ಸೂಕ್ತವಲ್ಲ. ಇದನ್ನು ಸಮರ್ಥನೀಯವೂ ಅಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಬಿಹಾರ ವಿಧಾನಸಭೆಯ ಕಲಾಪದಲ್ಲಿ ಪ್ರತಿಪಕ್ಷ ನಾಯಕ ತೇಜಸ್ವಿನಿ ಯಾದವ್‌ ಕೇಳಿದ ಪ್ರಶ್ನೆಗೆ ನಿತೀಶ್‌ ಕುಮಾರ್‌ ಉತ್ತರಿಸಿದರು.

ಇಡೀ ರಾಷ್ಟ್ರದಾದ್ಯಂತ ರಾಷ್ಟ್ರೀಯ ನಾಗರಿಕ ನೋಂದಣಿ ಜಾರಿಗೆ ತರುವ ಅಗತ್ಯವಿಲ್ಲ. ಇದು ಸಮರ್ಥನೀಯವೂ ಅಲ್ಲ. ನಮ್ಮ ರಾಜ್ಯದಲ್ಲಿ ಇದು ಸಾಧ್ಯವಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡ ಈ ಬಗ್ಗೆ ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ನಿತೀಶ್‌ ಕುಮಾರ್‌ ತಿಳಿಸಿದರು.

ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ಧವೂ ಮುಕ್ತ ಹಾಗೂ ಬಹಿರಂಗ ಚರ್ಚೆಗೆ ನಾನು ಸದಾ ಸಿದ್ಧನಾಗಿದ್ದೇನೆ ಎಂದು ನಿತೀಶ್‌ ಕುಮಾರ್‌ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ