ಆ್ಯಪ್ನಗರ

ಛತ್ತೀಸ್‌ಗಢದಲ್ಲಿ ನಕ್ಸಲರ ಅಟ್ಟಹಾಸ: ನಾಲ್ವರು ಬಿಎಸ್‌ಎಫ್‌ ಯೋಧರು ಹುತಾತ್ಮ

ಗಸ್ತು ತಿರುಗುತ್ತಿದ್ದ ಬಿಎಸ್‌ಎಫ್‌ ಯೋಧರ ಮೇಲೆ ನಕ್ಸಲರು ಏಕಾಏಕಿ ಗುಂಡಿನ ದಾಳಿ ನಡೆಸಿದರು ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಕಿರಣ್‌ ರಾಥೋಡ್‌ ವಿಜಯ ಕರ್ನಾಟಕ ಸೋದರ ಸಂಸ್ಥೆ ಟೈಮ್ಸ್‌ ಆಫ್‌ ಇಂಡಿಯಾಗೆ ಮಾಹಿತಿ ನೀಡಿದ್ದಾರೆ.

Vijaya Karnataka Web 4 Apr 2019, 3:56 pm
ಕಂಕೇರ್‌: ಛತ್ತೀಸ್‌ಗಢದ ಕಂಕೇರ್‌ನಲ್ಲಿ ನಕ್ಸಲರ ಅಟ್ಟಹಾಸ ಮುಂದುವರಿದಿದೆ. ಚುನಾವಣೆ ಸಮೀಸುತ್ತಿದ್ದಂತೆ ಮಾವೋವಾದಿಗಳು ಬಿಎಸ್‌ಎಫ್‌ ಪಡೆಗಳ ಮೇಲೆ ದಾಳಿ ನಡೆಸಿದ್ದು, ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
Vijaya Karnataka Web ಗುಂಡಿನ ದಾಳಿ
ಗುಂಡಿನ ದಾಳಿ


ಬಸ್ತಾರ್‌ ಪ್ರಾಂತ್ಯದ ಕಂಕೇರ್‌ ಜಿಲ್ಲೆಯ ಮಹಾಲ ಅರಣ್ಯ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ.

ಗಸ್ತು ತಿರುಗುತ್ತಿದ್ದ ಬಿಎಸ್‌ಎಫ್‌ ಯೋಧರ ಮೇಲೆ ನಕ್ಸಲರು ಏಕಾಏಕಿ ಗುಂಡಿನ ದಾಳಿ ನಡೆಸಿದರು ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಕಿರಣ್‌ ರಾಥೋಡ್‌ ವಿಜಯ ಕರ್ನಾಟಕ ಸೋದರ ಸಂಸ್ಥೆ ಟೈಮ್ಸ್‌ ಆಫ್‌ ಇಂಡಿಯಾಗೆ ಮಾಹಿತಿ ನೀಡಿದ್ದಾರೆ.

ಗುಂಡಿನ ದಾಳಿಯಲ್ಲಿ ಓರ್ವ ಹಿರಿಯ ಅಧಿಕಾರಿ, ಮೂವರು ಕಾನ್‌ಸ್ಟೇಬಲ್‌ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಹಲವಾರು ಯೋಧರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚುನಾವಣೆಯನ್ನು ಬಹಿಷ್ಕರಿಸಬೇಕು ಎಂದು ಮಾವೋವಾದಿಗಳು ಇತ್ತೀಚೆಗೆ ಕರಪತ್ರಗಳನ್ನು ಹಂಚಿದ್ದರು. ಬಸ್ತಾರ್‌ ಮತ್ತು ಕಂಕೇರ್‌ ಪ್ರಾಂತ್ಯಗಳಲ್ಲಿ ನಕ್ಸಲರು ಚುನಾವಣೆಯಲ್ಲಿ ಯಾರೂ ಮತದಾನ ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

ಬಸ್ತಾರ್‌ ಮತ್ತು ಕಂಕೇರ್‌ ಪ್ರಾಂತ್ಯಗಳಲ್ಲಿ ನಕ್ಸಲರು ಹೆಚ್ಚು ಸಂಖ್ಯೆಯಲ್ಲಿ ಇರುವ ಕಾರಣ ಹೆಚ್ಚುವರಿ ಸೇನಾ ತುಕಡಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ಸೇನಾ ಪಡೆ ವಕ್ತಾರರು ಮಾಹಿತಿ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ