ಆ್ಯಪ್ನಗರ

ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಸೇರಿದ ಕಾಂಗ್ರೆಸ್‌, ಎನ್‌ಸಿ, ಪಿಡಿಪಿ ನಾಯಕರು

ನ್ಯಾಶನಲ್‌ ಕಾನ್ಫರೆನ್ಸ್‌, ಪೀಪಲ್ಸ್‌ ಡೆಮಾಕ್ರಟಿಕ್‌ ಪಾರ್ಟಿಯ ಎಂಟು ಮಂದಿ ನಾಯಕರೂ ಬಿಜೆಪಿ ಸೇರಿದ್ದಾರಲ್ಲದೇ, ತಳಮಟ್ಟದಿಂದ ಪಕ್ಷ ಸಂಘಟಿಸುವ ಸಂಕಲ್ಪ ಮಾಡಿದ್ದಾರೆ. ದೇಶದ ಪ್ರತಿ ರಾಷ್ಟ್ರಭಕ್ತನೂ ಈಗ ಬಿಜೆಪಿ ಸೇರಲು ಮುಂದಾಗುತ್ತಿದ್ದಾನೆ. ಅದಕ್ಕೆ ಕಾರಣ ನರೇಂದ್ರ ಮೋದಿ ಸರಕಾರದ ಸಾಧನೆ,'' ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಹೇಳಿದರು.

Vijaya Karnataka 9 Dec 2018, 9:20 am
ಜಮ್ಮು: ಕಾಂಗ್ರೆಸ್‌ ನಾಯಕ ಪ್ರದೀಪ್‌ ಸಿಂಗ್‌ ಪರಿಹಾರ್‌ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು ಶನಿವಾರ ಬಿಜೆಪಿ ಸೇರಿದ್ದಾರೆ.
Vijaya Karnataka Web bjp symbol


ನ್ಯಾಶನಲ್‌ ಕಾನ್ಫರೆನ್ಸ್‌, ಪೀಪಲ್ಸ್‌ ಡೆಮಾಕ್ರಟಿಕ್‌ ಪಾರ್ಟಿಯ ಎಂಟು ಮಂದಿ ನಾಯಕರೂ ಬಿಜೆಪಿ ಸೇರಿದ್ದಾರಲ್ಲದೇ, ತಳಮಟ್ಟದಿಂದ ಪಕ್ಷ ಸಂಘಟಿಸುವ ಸಂಕಲ್ಪ ಮಾಡಿದ್ದಾರೆ. ಕಿಶ್ತವಾರದ ಈ ಮುಖಂಡರು, ಕಾರ್ಯಕರ್ತರನ್ನು ಬಿಜೆಪಿಯ ಜಮ್ಮು-ಕಾಶ್ಮೀರ ರಾಜ್ಯಾಧ್ಯಕ್ಷ ರವೀಂದ್ರ ರೈನಾ ಪಕ್ಷಕ್ಕೆ ಬರ ಮಾಡಿಕೊಂಡರು. ''ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಎನ್ನುವ ಮೋದಿ ಸರಕಾರದ ನೀತಿಯಿಂದ ್ಜನರು ಬಿಜೆಪಿಯತ್ತ ಆಕರ್ಷಿತರಾಗುತ್ತಿದ್ದಾರೆ,'' ಎಂದು ಅವರು ಹೇಳಿದರು.

''ದೇಶದ ಪ್ರತಿ ರಾಷ್ಟ್ರಭಕ್ತನೂ ಈಗ ಬಿಜೆಪಿ ಸೇರಲು ಮುಂದಾಗುತ್ತಿದ್ದಾನೆ. ಅದಕ್ಕೆ ಕಾರಣ ನರೇಂದ್ರ ಮೋದಿ ಸರಕಾರದ ಸಾಧನೆ,'' ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಹೇಳಿದರು.

ಮುಸ್ಲಿಂ ಸರಪಂಚ: ಜಮ್ಮು-ಕಾಶ್ಮೀರದ ಹಂಗಾ ಪಂಚಾಯತ್‌ನಲ್ಲಿ ಹಿಂದೂಗಳು ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ಸರಪಂಚನಾಗಿ ಆಯ್ಕೆ ಮಾಡುವ ಮೂಲಕ ಕೋಮು ಸೌಹಾರ್ದ ಮೆರೆದಿದ್ದಾರೆ. ಹಂಗ್‌ ಪಂಚಾಯಿತಿ ಮುಖ್ಯಸ್ಥರಾಗಿ ಚೌಧರಿ ಮೊಹಮದ್‌ ಹುಸೇನ್‌ (54) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನೂ ವಿಶೇಷ ಎಂದರೆ 450 ಜನಸಂಖ್ಯೆ ಇರುವ ಗ್ರಾಮದಲ್ಲಿ ಹುಸೇನ್‌ ಅವರದು ಏಕೈಕ ಮುಸ್ಲಿಂ ಕುಟುಂಬ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ