ಆ್ಯಪ್ನಗರ

ಅಯೋಧ್ಯೆ ಭೂಮಿ ಪೂಜೆಯಲ್ಲಿ ಪಾಲ್ಗೊಳ್ಳದಂತೆ ಉದ್ಧವ್‌ ಠಾಕ್ರೆಗೆ ಸಲಹೆ

ಜಾತ್ಯತೀತ ಪ್ರಜಾಪ್ರಭುತ್ವ ಮೌಲ್ಯಗಳನ್ನು ಮುನ್ನಡೆಸುವ ಜವಾಬ್ದಾರಿಯುತ ಸ್ಥಾನದಲ್ಲಿರುವ ಠಾಕ್ರೆ ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಬಗ್ಗೆ ಯೋಚಿಸಬೇಕಿದೆ ಎಂದು ಎನ್‌ಸಿಪಿಯ ಮಜೀದ್‌ ಮೆಮನ್‌ ಹೇಳಿದ್ದಾರೆ.

Agencies 21 Jul 2020, 11:08 pm

ಮುಂಬಯಿ: ಅಯೋಧ್ಯೆಯಲ್ಲಿ ನಡೆಯುವ ರಾಮ ಮಂದಿರ ನಿರ್ಮಾಣದ 'ಭೂಮಿ ಪೂಜೆ'ಯಲ್ಲಿ ಪಾಲ್ಗೊಳ್ಳಲು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರಿಗೆ ಆಹ್ವಾನ ಬಂದಿದೆ. ಆದರೆ ಒಂದು ನಿರ್ದಿಷ್ಟ ಧರ್ಮವನ್ನು ಪ್ರಚಾರ ಮಾಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಿರುವಂತೆ ಅವರನ್ನು ಕೋರಲಾಗಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್‌ ಪಕ್ಷ (ಎನ್‌ಸಿಪಿ)ದ ಮಜೀದ್‌ ಮೆಮನ್‌ ಮಂಗಳವಾರ ಹೇಳಿದ್ದಾರೆ.
Vijaya Karnataka Web Chief Minister Uddhav Thackeray


ಅವರ ಈ ಹೇಳಿಕೆಯ ಅಪಾಯ ಅರಿತ ಎನ್‌ಸಿಪಿ ತಕ್ಷಣವೇ ಅಂತರ ಕಾಯ್ದುಕೊಂಡಿದೆ. ''ಮೆಮನ್‌ ಹೇಳಿಕೆ ಅದು ಅವರ ವೈಯಕ್ತಿಕ ನಿಲುವು. ಆ ಹೇಳಿಕೆಗೂ, ಪಕ್ಷಕ್ಕೆ ಸಂಬಂಧ ಇಲ್ಲ,'' ಎಂದು ಜಾರಿಕೊಂಡಿದೆ.

"ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮದ ಆಹ್ವಾನಿತರ ಪಟ್ಟಿಯಲ್ಲಿ ಸಿಎಂ ಉದ್ಧವ್‌ ಠಾಕ್ರೆ ಅವರ ಹೆಸರೂ ಸೇರಿದೆ. ಕೋವಿಡ್‌-19 ನಿರ್ಬಂಧಗಳನ್ನು ಗೌರವಿಸಿ ಅವರು ವೈಯಕ್ತಿಕ ನಿರ್ಧಾರದ ಮೇಲೆ ಪಾಲ್ಗೊಳ್ಳಬಹುದು. ಆದರೆ ಜಾತ್ಯತೀತ ಪ್ರಜಾಪ್ರಭುತ್ವ ಮೌಲ್ಯಗಳನ್ನು ಮುನ್ನಡೆಸುವ ಜವಾಬ್ದಾರಿಯುತ ಸ್ಥಾನದಲ್ಲಿರುವ ಅವರು ಯೋಚಿಸಬೇಕಿದೆ. ಒಂದು ನಿರ್ದಿಷ್ಟ ಧರ್ಮವನ್ನು ಪ್ರಚಾರ ಮಾಡುವ ಇಂತಹ ಕಾರ್ಯಕ್ರಮಗಳಿಂದ ದೂರ ಉಳಿಯುವುದು ಸೂಕ್ತ,'' ಎಂದು ವಕೀಲ ಹಾಗೂ ರಾಜ್ಯಸಭೆ ಮಾಜಿ ಸದಸ್ಯರೂ ಆಗಿರುವ ಮೆಮನ್‌ ಟ್ವೀಟ್‌ ಮಾಡಿದ್ದಾರೆ.

ಅಯೋಧ್ಯೆ ದೇಗುಲಕ್ಕೆ ಆ. 5ರಂದು ಮೋದಿ ಅಡಿಗಲ್ಲು; ಆಡ್ವಾಣಿ, ಜೋಶಿ, ಭಾಗವತ್‌ ಸಹಿತ 50 ಗಣ್ಯರಿಗೆ ಆಹ್ವಾನ

''ಅದು ಅವರ (ಮೆಮನ್‌) ವೈಯಕ್ತಿಕ ಅಭಿಪ್ರಾಯ. ಪಕ್ಷದ ನಿಲುವು ಸ್ಪಷ್ಟವಾಗಿದೆ. ಸುಪ್ರೀಂ ಕೋರ್ಟ್‌ ತೀರ್ಪಿನಿಂದ ವಿವಾದಕ್ಕೆ ತೆರೆ ಬಿದ್ದಿದೆ. ಆದ್ದರಿಂದ ಯಾರಾದರೂ ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು,'' ಎನ್‌ಸಿಪಿ ವಕ್ತಾರ ಸಂಜಯ್‌ ತಕ್ತರೆ ಸ್ಪಷ್ಟಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ