ಆ್ಯಪ್ನಗರ

ನೀಟ್‌ ಮರು ಪರೀಕ್ಷೆ: ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಎಂಬಿಬಿಎಸ್‌ ಮತ್ತು ಬಿಡಿಎಸ್‌ ಕೋರ್ಸ್‌ಗಳ ಪ್ರವೇಶಕಾತಿಗೆ ಹೊಸದಾಗಿ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್‌) ನಡೆಸಬೇಕೆಂಬ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್‌ ನಿರಾಕರಿಸಿದೆ.

ಏಜೆನ್ಸೀಸ್ 26 May 2017, 4:30 am

ಹೊಸದಿಲ್ಲಿ : ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಎಂಬಿಬಿಎಸ್‌ ಮತ್ತು ಬಿಡಿಎಸ್‌ ಕೋರ್ಸ್‌ಗಳ ಪ್ರವೇಶಕಾತಿಗೆ ಹೊಸದಾಗಿ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್‌) ನಡೆಸಬೇಕೆಂಬ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್‌ ನಿರಾಕರಿಸಿದೆ.

ಮೇ 7 ರಂದು ನಡೆದಿದ್ದ ನೀಟ್‌ ಪರೀಕ್ಷೆಯ ವೇಳೆ ಬಿಹಾರದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಅಲ್ಲದೇ ಸೋರಿಕೆಯಾಗಿರುವ ಪ್ರಶ್ನೆ ಪತ್ರಿಕೆಗಳು ಪÜಶ್ಚಿಮ ಬಂಗಾಳ ಮತ್ತು ರಾಜಸ್ಥಾನದಲ್ಲೂ ಹರಿದಾಡಿ ಸಾಕಷ್ಟು ಗೋಲ್‌ಮಾಲ್‌ ನಡೆದಿತ್ತು ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಹೊಸದಾಗಿ ನೀಟ್‌ ಪರೀಕ್ಷೆ ನಡೆಸುವಂತೆ ಕೋರಿ ಖಾಸಗಿ ಸಂಸ್ಥೆಯೊಂದು ಮನವಿ ಸಲ್ಲಿಸಿತ್ತು.

Vijaya Karnataka Web neet 2017 supreme court refuses to give urgent hearing
ನೀಟ್‌ ಮರು ಪರೀಕ್ಷೆ: ತುರ್ತು ವಿಚಾರಣೆಗೆ ಸುಪ್ರೀಂ ನಕಾರ


ಈ ಮನವಿಯ ತುರ್ತು ವಿಚಾರಣೆಗೆ ನ್ಯಾಯಮೂರ್ತಿಗಳಾದ ಎಲ್‌.ನಾಗೇಶ್ವರರಾವ್‌ ಮತ್ತು ನವೀನ್‌ ಸಿನ್ಹಾ ನೇತೃತ್ವದ ನ್ಯಾಯಪೀಠ ನಿರಾಕರಿಸಿದೆ. ಈಗಾಗಲೇ ಫಲಿತಾಂಶ ಪ್ರಕಟಿಸದಿರುವಂತೆ ಮದ್ರಾಸ್‌ ಹೈಕೋರ್ಟ್‌ ಮಧ್ಯಾಂತರ ತಡೆಯಾಜ್ಞೆ ನೀಡಿದೆ. ಹೀಗಿರುವಾಗ ನಿಮ್ಮ ಅರ್ಜಿಯ ತುರ್ತು ವಿಚಾರಣೆಯ ಅಗತ್ಯ ಏನಿದೆ? ಎಂದು ಸುಪ್ರೀಂ ಕೋರ್ಟ್‌, ಅರ್ಜಿದಾರರ ಪರ ವಕೀಲರನ್ನು ಪ್ರಶ್ನಿಸಿದೆ.

ಮೇ 7ರಂದು ದೇಶದ 1,900 ಕೇಂದ್ರಗಳಲ್ಲಿ ಏಕಕಾಲಕ್ಕೆ ನಡೆದಿದ್ದ ನೀಟ್‌ ಪರೀಕ್ಷೆಗೆ 11 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು. ಈ ಪರೀಕ್ಷೆಯ ಫಲಿತಾಂಶ ಪ್ರಕಟಣೆಗೆ ಮದ್ರಾಸ್‌ ಹೈಕೋರ್ಟ್‌ ತಡೆ ನೀಡಿದ ಬೆನ್ನಲ್ಲೇ ತುರ್ತು ವಿಚಾರಣೆ ಕೋರಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಕೆಯಾಗಿತ್ತು.

ಏಕರೀತಿಯ ಪ್ರವೇಶ ಪರೀಕ್ಷೆಯಾಗಿದ್ದರೂ ಎಲ್ಲ ಭಾಷೆಗಳ ಪ್ರಶ್ನೆ ಪತ್ರಿಕೆ ಒಂದೇ ರೀತಿ ಇರಲಿಲ್ಲ. ಇದರಿಂದ ವಿದ್ಯಾರ್ಥಿಗಳ ಸಮಾನತೆಯ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಕೆಲವು ವಿದ್ಯಾರ್ಥಿಗಳು ತಕರಾರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಮದ್ರಾಸ್‌ ಹೈಕೋರ್ಟ್‌ ಜೂನ್‌ 7 ರೊಳಗೆ ಅಫಿಡವಿಟ್‌ ಸಲ್ಲಿಸುವಂತೆ ಭಾರತೀಯ ವೈದ್ಯಕೀಯ ಮಂಡಳಿ, ಸಿಬಿಎಸ್‌ಇ ಮತ್ತು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಸೂಚಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ