ಆ್ಯಪ್ನಗರ

ಗಂಗಾ ನದಿ ತೀರದಲ್ಲಿ ಪ್ಲಾಸ್ಟಿಕ್‌ ನಿಷೇಧ: ಎನ್‌ಜಿಟಿ ಆದೇಶ

ಹರದ್ವಾರ, ಹೃಷಿಕೇಶದಲ್ಲಿಯೂ ಪ್ಲಾಸ್ಟಿಕ್ ನಿಷೇಧಕ್ಕೆ ನಿರ್ಧಾರ

Vijaya Karnataka Web 15 Dec 2017, 4:34 pm
ಹೊಸದಿಲ್ಲಿ: ನಮಾಮಿ ಗಂಗಾ ಹೆಸರಿನಲ್ಲಿ ಗಂಗಾ ನದಿ ಸ್ವಚ್ಛತಾ ಕಾರ್ಯಕ್ರಮ ಕೈಗೊಂಡಿರುವ ಕೇಂದ್ರ ಸರಕಾರಕ್ಕೆ ಪೂರಕವಾಗಿರುವ ಆದೇಶವನ್ನು ರಾಷ್ಟ್ರೀಯ ಹಸಿರು ಪೀಠ ನೀಡಿದೆ.
Vijaya Karnataka Web ngt bans plastic items in towns located along banks of ganga
ಗಂಗಾ ನದಿ ತೀರದಲ್ಲಿ ಪ್ಲಾಸ್ಟಿಕ್‌ ನಿಷೇಧ: ಎನ್‌ಜಿಟಿ ಆದೇಶ


ಪವಿತ್ರ ತೀರ್ಥ ಕ್ಷೇತ್ರಗಳಾದ ಹೃಷಿಕೇಶ ಮತ್ತು ಹರದ್ವಾರದಲ್ಲಿ ಪ್ಲಾಸ್ಟಿಕ್‌ ಬಳಕೆಗೆ ರಾಷ್ಟ್ರೀಯ ಹಸಿರು ಪೀಠ ಆದೇಶಿಸಿದೆ.

ನ್ಯಾಯಮೂರ್ತಿ ಸ್ವತಂತ್ರ ಕುಮಾರ್‌ ನೇತೃತ್ವದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿ ಈ ಮಹತ್ವದ ತೀರ್ಪು ನೀಡಿದೆ.

ಉತ್ತರ ಕಾಶಿ ಸೇರಿದಂತೆ ಗಂಗಾ ನದಿ ತೀರದ ಕ್ಷೇತ್ರಗಳಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವರಿಗೆ ಐದು ಸಾವಿರ ರೂಪಾಯಿ ದಂಡ ವಿಧಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಹಿಂದೆ ಹಲವು ಆದೇಶಗಳನ್ನು ನೀಡಿದ್ದರೂ ಪ್ಲಾಸ್ಟಿಕ್‌ ಬಳಕೆಗೆ ತಡೆ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಯಿಂದಾಗಿ ನದಿ ಕಲುಷಿತಗೊಂಡಿದೆ. ಸ್ವಚ್ಛತಾ ಕಾರ್ಯಕ್ರಮ ಕೈಗೊಳ್ಳಲು ಮುಂದಾಗಬೇಕಾಗಿದೆ ಎಂದು ವಿವರಿಸಲಾಗಿದೆ.

ಸಂಬಂಧಪಟ್ಟ ಎಲ್ಲ ರಾಜ್ಯಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ